ಪೇಜಾವರಶ್ರೀ ಆರೋಗ್ಯಕ್ಕೆ ಮುಸ್ಲಿಮರ ಪ್ರಾರ್ಥನೆ
Team Udayavani, Dec 24, 2019, 12:32 PM IST
ವಿಜಯಪುರ: ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಶೀಘ್ರ ಗುಣಮುಖರಾಗಲಿ ಎಂದು ವಿಜಯಪುರ ನಗರದಲ್ಲಿ ಮುಸ್ಲಿಂ ಸಮುದಾಯದವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸೋಮವಾರ ನಗರದ ಮನಗೂಳಿ ಅಗಸಿ ಬಳಿ ಇರುವ ಹಜರತ್ ಮರ್ತೂಜಾ ಖಾದ್ರಿ ದರ್ಗಾದಲ್ಲಿ ಪವಿತ್ರ ಹೂಗಳ ಚಾದರ ಸಮರ್ಪಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಶ್ರೀಗಳ ಸಾಮಾಜಿಕ ಸೇವೆ ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ಮಾಡಿರುವ ಸಮಾಜಮುಖೀ ಕಾರ್ಯಕ್ರಮಗಳನ್ನು ಸ್ಮರಿಸಿದ ಮುಸ್ಲಿಂ ಸಮುದಾಯದವರು, ಧಾರ್ಮಿಕ ಕಾರ್ಯಗಳ ಜತೆ ಸಾಮಾಜಿಕ ಕಾರ್ಯಗಳ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಸಮಾಜಮುಖೀ ಸೇವೆ ಮಾಡುವಲ್ಲಿ ಶ್ರೀಗಳ ಪರಿಶ್ರಮವಿದೆ. ಭೂಕಂಪ, ನೆರೆ ಹಾವಳಿ, ಭೀಕರ ಬರ ಹೀಗೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ನೆರವಿಗೆ ಧಾವಿಸಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ ಎಂದು ಸ್ಮರಿಸಿದರು. ಇನಾಯತ್ ರೋಜೆವಾಲೆ, ಯಾಸೀನ್ ಜವಳಿ, ಅಸ್ಲಂ ಸೈಯದ್ ಅಮೀನ್, ಇಬ್ರಾಹಿಂ ಜವಳಿ, ಭಾಷಾ ಅತ್ತಾರ, ರೂಹ್ ಉಲ್ಲಾ ಮುಲ್ಲಾ, ರಫೀಕ್ ಗೌರ, ಮೊಹಸೀನ್ , ಬಾಷಾ ರೋಜಿಂದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ
MUST WATCH
ಹೊಸ ಸೇರ್ಪಡೆ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ