ನನಸಾಯ್ತು ಅನ್ನದಾತನ ದಶಕದ ಕನಸು


Team Udayavani, Dec 18, 2017, 12:42 PM IST

Alisagra_Lift_Irrigation_Scheme_Pump_House.jpg

ವಿಜಯಪುರ: ಕಳೆದ ಆರೇಳು ದಶಕಗಳಿಂದ ತನ್ನ ಜಮೀನಿಗೆ ನೀರು ಹರಿಯುತ್ತದೆ ಎಂದು ಕಾಯುತ್ತಲೇ ಇದ್ದ ಬಬಲೇಶ್ವರ ಭಾಗದ ಅನ್ನದಾತನ ಕನಸು ಇದೀಗ ನನಸಾಗುತ್ತಿದೆ. ಕೆರೆಗಳಿಗೆ ನೀರು ತುಂಬಿಸಲು ಮುಳವಾಡ ಏತ ನೀರಾವರಿಯ ಬಬಲೇಶ್ವರ ಶಾಖಾ ನಾಲೆಗೆ ಹರಿಯಲು ಆರಂಭಿಸಿದ್ದು ರೈತನ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಸ್ವಾತಂತ್ರ್ಯ ಪೂರ್ವದಲ್ಲೇ ಬ್ರಿಟೀಷ ರಿಂದ ಸಮೀಕ್ಷೆ ಕಂಡಿದ್ದ ಮುಳವಾಡ ಏತ ನೀರಾವರಿ ಯೋಜನೆ ಭರವಸೆಗಳ ಮೂಟೆ ಹೊರುತ್ತಲೇ ಬರುತ್ತಿತ್ತು. ಸದರಿ ಯೋಜನೆ ಅನುಷ್ಠಾನಕ್ಕಾಗಿ ಹತ್ತು ಹಲವು ಸ್ವರೂಪದಲ್ಲಿ ಹೋರಾಟ ಮಾಡಿದ್ದ ರೈತರು, ಒಂದಲ್ಲ ಒಂದು ದಿನ ತಮ್ಮ ಜಮೀನಿಗೆ ನೀರು ಹರಿಯುತ್ತದೆ ಎಂಬ ಭರವಸೆಯ ಕಂಗಳಲ್ಲಿ ಕನಸುಗಳನ್ನೇ ಕಟ್ಟಿಕೊಂಡಿದ್ದರು.

ಸದರಿ ಯೋಜನೆ ಏತ ನೀರಾವರಿ ಯೋಜನೆಯಲ್ಲಿಯೇ ಬೃಹತ್‌ ಯೋಜನೆ ಎನಿಸಿಕೊಂಡಿರುವ ಯೋಜನೆ ಇದೀಗ ಕಾಲುವೆಗೆ ನೀರು ಹರಿಯುತ್ತಿದೆ. ಮೊದಲ ಹಂತವಾಗಿ ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಸದರಿ ಏತ ನೀರಾವರಿ ಯೋಜನೆಯ ನಾಲೆಗೆ ನೀರು ಹರಿಸುವ ಪ್ರಾಯೋಗಿಕ ಕಾರ್ಯಕ್ಕೆ ಚಾನೆ ದೊರೆತಿದೆ. ಬೃಹದ್ದಾಕಾರದ ಫೈಲುಗಳು ಉಗುಳುತ್ತಿರುವ ನೀರು ಕಂಡು ರೈತರ ಮೊಗದಲ್ಲಿ ಸಂತಸ ಉಕ್ಕಿ ಹರಿಯುತ್ತಿದೆ. 

ಮುಳವಾಡ ಏತ ನೀರಾವರಿ ಯೋಜನೆಗಾಗಿ ಹತ್ತು ಹಲವು ಸ್ವರೂಪದಲ್ಲಿ ನಡೆಸಿದ್ದ ಹೋರಾಟಗಳು ಒಂದು ಹಂತದಲ್ಲಿ ಬೃಹತ್‌ ಪ್ರತಿಭಟನೆಯ ಸ್ವರೂಪವನ್ನೇ ಪಡೆದಿತ್ತು. ಆದರೆ ಸರ್ಕಾರಗಳ ನಿರ್ಲಕ್ಷ್ಯ, ಆಳುವವರ ನಿರಾಸಕ್ತಿ, ಇಚ್ಛಾಶಕ್ತಿ ಕೊರತೆ ಪರಿಣಾಮ ಮುಳವಾಡ ಯೋಜನೆ ನೀರು ಹರಿಸುವ ಬದಲು ಕಣ್ಣೀರು ಹರಿಸುತ್ತದೆ ಅಷ್ಟೇ ಎಂಬ ನಿರಾಸೆಯೂ ಮೂಡಿತ್ತು. 

ಇದೀಗ ಹಲವು ದಶಕಳ ಹೋರಾಟದ ಫಲ ಹಾಗೂ ಹಿರಿಯರು ಕಂಡಿದ್ದ ಕನಸು ನನಸಾಗಿದೆ ಎಂದು ಯೋಜನೆ ಅನುಷ್ಠಾನದ ಹೋರಾಟದ ಮುಂಚೂಣಿಯಲ್ಲಿದ್ದ ನೀಲಗುಂದ ಶ್ರೀಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಡಾ| ಎಂ.ಬಿ. ಪಾಟೀಲ ಅವರು ಜಲ ಸಂಪನ್ಮೂಲ ಸಚಿವರಾದ ಕಾರಣ ಹಾಗೂ ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡುವ ಕನಸು ಕಟ್ಟಿಕೊಂಡು, ಸಾಕಾರ ಮಾಡುವ ಛಲದ ಪರಿಣಾಮವೇ ಬಬಲೇಶ್ವರದಂಥ ಹಳ್ಳಿಗಳ ರೈತರ ಮನೆ ಬಾಗಿಲಿಗೆ ಕೃಷ್ಣೆ ತಲುಪುವಂತಾಗಿದೆ. ಬಸವ ನಾಡಿನಲ್ಲೇ ನಾನು ಜನಿಸಿ, ಈ ಜಿಲ್ಲೆಯ ಜನರ ಆಶೀರ್ವಾದದ ಫಲವಾಗಿ ಸಚಿವ ಮಾತ್ರವಲ್ಲ ಜಲಸಂಪನ್ಮೂಲ ಖಾತೆ ದೊರೆತಿದೆ.

ಅದನ್ನು ಸಮರ್ಥವಾಗಿ ಬಳಸಿಕೊಂಡು ಜಿಲ್ಲೆಯ ಜನರ ಋಣ ತೀರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಅಷ್ಟೇ ಎಂದು ಯೋಜನೆಗೆ ಚಾಲನೆ ನೀಡಿದ ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಅವರು ಹೇಳುವ ಮೂಲಕ ವಿನೀತ ಭಾವ ಪ್ರದರ್ಶಿಸಿರುವುದು ನಿಜಕ್ಕೂ ಅನುಕರಣೀಯ.

ಯೋಜನೆ ಅನುಷ್ಠಾನಕ್ಕೆ ಕಳೆದ ಹಲವು ದಶಕಗಳಿಂದ ನಡೆಸಿದ ಹೋರಾಟಗಾರರ ಪರಿಶ್ರಮ, ಜನರ ಮನದಲ್ಲಿ ನೀರಿನ ಜಾಗೃತಿ ಹೋರಾಟ ರೂಪಿಸಲು ಪ್ರೇರಕ ಶಕ್ತಿಯಾಗಿದ್ದ ಜಿಲ್ಲೆ ಮಠಾಧೀಶರು, ಜಿಲ್ಲೆಯ ನಾಯಕರ ಐಕ್ಯತೆ ಹಾಗೂ ಸಂಘಟಿತ ಹೋರಾಟದ ಫಲ ಇದೀಗ ನಾಲೆಗೆ ನೀರಾಗಿ ಹರಿಸು ಬರುತ್ತಿದೆ. ಈ ಕೆಲಸದಲ್ಲಿ ಅಧಿಕಾರಿಗಳು ಮಾಡಿದ ಪರಿಶ್ರಮವನ್ನು ಮರೆಯಬಾರದು ಎನ್ನುತ್ತಾರೆ ಸಚಿವ ಡಾ| ಎಂ.ಬಿ. ಪಾಟೀಲ.

64 ಸಾವಿರ ಎಕರೆ ಭೂಮಿ ನೀರಾವರಿ ಒಟ್ಟಾರೆಯಾಗಿ 5 ಲಕ್ಷ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಮಹತ್ವದ
ಯೋಜನೆಯಾಗಿದ್ದು, ಅದರಲ್ಲಿ 4 ಎ ಲಿಫ್ಟ್‌ ಅಡಿಯಲ್ಲಿಯೇ 64,210 ಎಕರೆ ಭೂಮಿ ನೀರಾವರಿಗೊಳಪಡಲಿದೆ. ಮುಳವಾಡ, ಕಾರಜೋಳ, ಕಾಖಂಡಕಿ, ಬಬಲೇಶ್ವರ, ನಿಡೋಣಿ, ತೊನಶ್ಯಾಳ, ಕುಬಕಡ್ಡಿ, ಸಾರವಾಡ, ದೂಡಿಹಾಳ, ಮದಗುಣಕಿ, ಶೇಗುಣಸಿ, ಕಂಬಾಗಿ, ಹಲಗಣಿ, ಯಕ್ಕುಂಡಿ, ಕನಮುಚನಾಳ, ದಾಶ್ಯಾಳ, ತಿಗಣಿಬಿದರಿ, ನಾಗರಾಳ, ಕುಮಠೆ, ಅರ್ಜುಣಗಿ, ಹೊಕ್ಕುಂಡಿ, ಜಮಖಂಡಿ ತಾಲೂಕಿನ ಖಾಜಿಬೀಳಗಿ, ಗೋಠೆ, ತೊದಲಬಾಗಿ, ಕಲಬೀಳಗಿ, ಗದ್ಯಾಳ ಗ್ರಾಮಗಳ 64,210 ಎಕರೆ ಭೂಮಿ ನೀರಾವರಿಗೊಳಪಡಲಿದೆ.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.