ಮೋದಿ ಆಯುಷ್ಯ-ಆರೋಗ್ಯವೃದ್ದಿಗಾಗಿ ಮೃತ್ಯುಂಜಯ ಹೋಮ
Team Udayavani, Jan 8, 2022, 10:40 PM IST
ವಿಜಯಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆಯುರಾರೋಗ್ಯ ವೃದ್ಧಿಗೆ ಪ್ರಾರ್ಥಿಸಲು ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಶುಕ್ರವಾರ ನಗರದ ಶಂಕರಲಿಂಗ ದೇವಸ್ಥಾನದಲ್ಲಿ ಮಹಿಳೆಯರು ಸಾಮೂಹಿಕ ಮಹಾಮೃತ್ಯುಂಜಯ ಮಂತ್ರ ಜಪಸಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ಪಂಜಾಬ್ ಪ್ರವಾಸದ ವೇಳೆ ಭದ್ರತೆಯಲ್ಲಿ ಅತ್ಯಂತ ಘನಗೋರ ಲೋಪವಾಗಿದ್ದು ಖಂಡನೀಯ. ದೇವರ ಕೃಪೆಯಿಂದ ಪ್ರಧಾನಮಂತ್ರಿಗಳು ಸುರಕ್ಷಿತವಾಗಿ ಮರಳುವಂತಾಯಿತು, ಕೆಲವೊಂದು ಮಹತ್ವಪೂರ್ಣ ವಾಸ್ತವಾವಂಶದ ಆಧಾರದಲ್ಲಿ ಪಂಜಾಬಿನ ಕಾಂಗ್ರೆಸ್ ಸರ್ಕಾರ ಪ್ರಧಾನಿ ಮೋದಿ ಅವರ ಭದ್ರತೆಯಲ್ಲಿ ಘೋರ ಲೋಪ ಎಸಗಿದೆ ಎಂದು ಕಿಡಿ ಕಾರಿದರು. ಪಂಜಾಬ್ನಲ್ಲಿ ಅಲ್ಲಿನ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕ ನಿರ್ಲಕ್ಷé ವಹಿಸಿರುವುದು ಸ್ಪಷ್ಟವಾಗಿದೆ.
ಈ ಘಟನೆ ಇಡಿ ದೇಶ ಒಕ್ಕೊರಲಿನಿಂದ ಖಂಡಿಸುತ್ತಿದೆ ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಪಂಜಾಬಿನ ಕಾಂಗ್ರೆಸ್ ಸರ್ಕಾರವನ್ನು ಕಿತ್ತೂಗೆಯಬೇಕೆಂದು ಆಗ್ರಹಿಸಿದರು. ಕರ್ನಾಟಕ ರಾಜ್ಯ ಸಾವಯವ ಬೀಜ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಜೋಗೂರ, ಭಾರತಿ ಭುಯ್ನಾರ, ಗೀತಾ ಕುಗನೂರ, ಶಾಂತಾ ಉತ್ಲಾಸ್ಕರ, ರಜನಿ ಸಂಬಂಣ್ಣಿ, ಸುಮಂಗಲಾ ಕೋಟಿ, ಮಲ್ಲಮ್ಮ ಜೋಗೂರ, ಸಂಜಯ ಪಾಟೀಲ ಕನಮಡಿ, ಮಳುಗೌಡ ಪಾಟೀಲ, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ರಾಜಶೇಖರ ದೇವಗಿರಿ, ರಾಜು ಮಗಿಮಠ, ರಾಹುಲ್ ಜಾಧವ, ಸೂರಪ್ಪ ಮಿರ್ಜಿ, ಗುರು ಗಚ್ಚಿನಮಠ, ವಿಜಯ ಜೋಶಿ, ಪ್ರವೀಣ ಹೆರಲಗಿ, ವಿನಾಯಕ ದಹಿಂಡೆ, ರಾಜೇಶ ತವಸೆ, ಕೃಷ್ಣಾ ಗುನ್ಹಾಳಕರ, ಸಿದ್ದು ಮಲ್ಲಿಕಾರ್ಜುನಮಠ, ಛಾಯಾ ಮಸಿಯಣ್ಣವರ, ಸಂಗು ಉಕ್ಕಲಿ, ಸಂತೋಶ ನಿಂಬರಗಿ, ಅಡಿವೆಪ್ಪ ಗಿಡವೀರ, ಸುವರ್ಣ ಕುರ್ಲೆ, ಸಂತೋಷ ಹುಣಶ್ಯಾಳ, ಅಮೀತ ಕುರ್ಲೆ, ಸಿದ್ದು ಬೆಲ್ಲದ, ಗಿರೀಶ ಕುಲಕರ್ಣಿ, ಅನೀತಾ ಜಾಲವಾದಿ, ಸಮೀರ ಕುಲಕರ್ಣಿ, ಭಾರತಿ ಗಿಡವೀರ, ಗೀತಾ ಗಿಡವೀರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ