ಜಲ್ಲಿ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ಡಾಂಬರೀಕರಣ ರಸ್ತೆ ಅಗೆದ ಅಧಿಕಾರಿಗಳ ವಿರುದ್ಧ ಅಳೇಹಳ್ಳಿ ಗ್ರಾಮಸ್ಥರ ಬೇಸರ

Team Udayavani, Mar 4, 2020, 1:08 PM IST

4–March-10

ಎನ್‌.ಆರ್‌.ಪುರ: ಡಾಂಬರ್‌ ರಸ್ತೆ ಅಗೆದು ಜಲ್ಲಿ ರಸ್ತೆ ಮಾಡಲು ಮುಂದಾದ ಜಿಲ್ಲಾ ಪಂಚಾಯ್ತಿ ಇಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳ ಕ್ರಮವನ್ನು ವಿರೋಧಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ರಸ್ತೆ ಕಾಮಗಾರಿಯನ್ನು ತಡೆಹಿಡಿದ ಘಟನೆ ನಡೆದಿದೆ.

ಬಾಳೆ ಗ್ರಾಮ ಪಂಚಾಯಿತಿ ಅಳೇಹಳ್ಳಿ ಗ್ರಾಮದ ಹೊಸೂರಿನ ನಲ್ಲಿಮಕ್ಕಿ ರಸ್ತೆಯ ಕಾಮಗಾರಿಯನ್ನು ತಡೆಹಿಡಿದ ನಲ್ಲಿಮಕ್ಕಿ ಗ್ರಾಮದ ಮುಖಂಡ ಧರ್ಮರಾಜ್‌, ವೇಣು ಹಾಗೂ ಇತರ ಗ್ರಾಮಸ್ಥರು ಪತ್ರಿಕೆಯೊಂದಿಗೆ ಮಾತನಾಡಿ, ಈ ಹಿಂದೆ ಡಾಂಬರೀಕರಣ ರಸ್ತೆಯ ಮಧ್ಯದಲ್ಲಿ ಸಣ್ಣಪುಟ್ಟ ಗುಂಡಿಗಳು ಬಿದ್ದಿದ್ದವು.

ಆದರೂ ನಾವು ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಪ್ರಯಾಣ ಮಾಡುತ್ತಿದ್ದೆವು. ಆದರೆ, ಈಗ ಜಿಲ್ಲಾ ಪಂಚಾಯ್ತಿ ಇಂಜಿನಿಯರಿಂಗ್‌ ವಿಭಾಗದವರು ಡಾಂಬರೀಕರಣ ರಸ್ತೆಯನ್ನು ಅಗೆದು ಜಲ್ಲಿ ರಸ್ತೆಯನ್ನು ಮಾಡಲು ಹೊರಟಿದ್ದಾರೆ ಎಂದು ದೂರಿದರು.

ರಸ್ತೆ ಕಾಮಗಾರಿಯ ವಿಚಾರ ಗ್ರಾಮಸ್ಥರ ಗಮನಕ್ಕೆ ತರದೇ ಭಾನುವಾರ ಸಂಜೆ ವೇಳೆ ಡಾಂಬರ್‌ ರಸ್ತೆಯನ್ನು ಅಗೆದು ರಸ್ತೆಯಲ್ಲಿದ್ದ ಜಲ್ಲಿಯನ್ನು ತೆಗೆದು ಅದೇ ಜಲ್ಲಿಯನ್ನು ರಸ್ತೆಯಲ್ಲಿ ಸಮತಟ್ಟು ಮಾಡಿದ್ದಾರೆ. ಜಲ್ಲಿ ಮೇಲೆ ಗ್ರಾವೆಲ್‌ ಮಣ್ಣು ಹಾಕಲು ಸಿದ್ಧತೆ ನಡೆಸಿದ್ದರು. ರಸ್ತೆಗೆ ಗ್ರಾವೆಲ್‌ ಮಣ್ಣು ಹಾಕಿದರೆ ಮಳೆಗಾಲದಲ್ಲಿ ರಸ್ತೆಯಲ್ಲಾ ಕೆಸರುಮಯವಾಗಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಡಾಂಬರೀಕರಣ ಮಾಡಿ ಎಂದರೆ ಜಿಲ್ಲಾ ಪಂಚಾಯಿತಿಯಿಂದ
2 ಲಕ್ಷ ರೂ. ಮಂಜೂರಾಗಿದೆ. ಅದರಲ್ಲಿ ಎಷ್ಟು ಕೆಲಸವಾಗುತ್ತದೇಯೋ ಅಷ್ಟನ್ನು ಮಾಡುತ್ತೇವೆ ಎಂದು ಅಧಿಕಾರಿಗಳು ಉತ್ತರಿಸುತ್ತಿದ್ದಾರೆ. ಆದ್ದರಿಂದ ನಾವು ರಸ್ತೆಗೆ ಗ್ರಾವೆಲ್‌ ಮಣ್ಣು ಹಾಕುವುದನ್ನು ತಡೆಹಿಡಿದ್ದೇವೆ. ಈ ರಸ್ತೆಗೆ ಮೊದಲಿನಂತೆ ಡಾಂಬರೀಕರಣ ಮಾಡಬೇಕು ಎಂಬುದೇ ನಮ್ಮ ಆಗ್ರಹವಾಗಿದೆ ಎಂದರು.

ಗ್ರಾಮಸ್ಥರ ಅನುಮತಿ ಪಡೆದೇ ಕಾಮಗಾರಿ
ಜಿಲ್ಲಾ ಪಂಚಾಯ್ತಿ ಇಂಜಿನಿಯರ್‌ ಮಮತಾ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮಸ್ಥರ ಅನುಮತಿ ಪಡೆದು ನಾವು ಈ ರಸ್ತೆ ಕಾಮಗಾರಿಗೆ ಮುಂದಾಗಿದ್ದೇವೆ. ಸಂಪೂರ್ಣ ಹಾಳಾಗಿದ್ದ ಡಾಂಬರ್‌ ರಸ್ತೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನಾವು ಕಾಮಗಾರಿ ಕೈಗೊಂಡಿದ್ದೇವೆ. ಈಗ ಅವರು ನಮಗೆ ಡಾಂಬರ್‌ ರಸ್ತೆಯೇ ಬೇಕು ಎನ್ನುತ್ತಿದ್ದಾರೆ. ಈಗಾಗಲೇ 200 ಮೀಟರ್‌ ರಸ್ತೆ ಅಗೆಯಲಾಗಿದೆ. ಗ್ರಾಮಸ್ಥರು ಹೇಳುವ ಪ್ರಕಾರ ಡಾಂಬರ್‌ ರಸ್ತೆಯೇ ಬೇಕು ಎಂದರೆ 2 ಲಕ್ಷ ರೂ.ನಲ್ಲಿ 130 ಮೀಟರ್‌ ಡಾಂಬರ್‌ ರಸ್ತೆ ಮಾತ್ರ ಮಾಡಬಹುದು. ಇನ್ನುಳಿದ 70 ಮೀಟರ್‌ ರಸ್ತೆ ಹಾಗೆಯೇ ಬಿಡಬೇಕಾಗುತ್ತದೆ ಎಂದರು.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.