ಜನತಾ ಕರ್ಫ್ಯೂ ಕರೆಗೆ ಬೆಂಬಲಿಸೋಣ

ಕೊರೊನಾ ಹರಡದಂತೆ ಜಾಗೃತಿ ವಹಿಸಿ

Team Udayavani, Mar 21, 2020, 4:23 PM IST

21-March-19

ನಾಲತವಾಡ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನತಾ ಕರ್ಫ್ಯೂ ಕರೆಗೆ ಪಟ್ಟಣ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಜನರು ಪಾಲಿಸಬೇಕು ಎಂದು ಬಿಜೆಪಿ ಯುವ ಮುಖಂಡ ಗಿರೀಶಗೌಡ ಪಾಟೀಲ ಮನವಿ ಮಾಡಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ರೋಗ ನಿಯಂತ್ರಣಕ್ಕೆ ರವಿವಾರ ಸಾರ್ವಜನಿಕರು ತಮ್ಮ ಮನೆಯಿಂದ ಹೊರಗೆ ಬರಬಾರದು. ವೈರಸ್‌ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಭಾರತಿಯರಲ್ಲಿ ಮನವಿ ಮಾಡಿದ್ದಾರೆ.

ಅವರ ಕರೆಗೆ ನಾವೆಲ್ಲರು ಸಹಕಾರ ನೀಡಬೇಕು ಎಂದರು. ರವಿವಾರ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಜನರು ತಮ್ಮ ಮನೆಯಿಂದ ಯಾರೂ ಕೂಡ ಹೊರಗೆ ಬರಬೇಡಿ. ಪ್ರಧಾನಿ ಅವರ ಕಳಕಳಿಗೆ ನಾವೆಲ್ಲರು ಚಾಚು ತಪ್ಪದೆ ಪಾಲಿಸಬೇಕು. ಚೀನಾ ದೇಶದಿಂದ ಪ್ರಾರಂಭವಾದ ಈ ರೋಗ ಈಗ ಎಲ್ಲ ರಾಷ್ಟ್ರಗಳಿಗೆ ತಗುಲಿದೆ. ಇಟಲಿ, ಅಮೆರಿಕ, ಇರಾಕ್‌, ಇರಾನ್‌ ಹಾಗೂ ಇನ್ನಿತರ ದೇಶಗಳಲ್ಲಿ ಸಾಕಷ್ಟು ವೇಗದಲ್ಲಿ ರೋಗ ಹರುಡುತ್ತ ಇದೆ, ಆದರೆ ಭಾರತ ದೇಶದಲ್ಲಿ ಈ ರೋಗದ ಬಗ್ಗೆ ಕೇಂದ್ರ ಸರಕಾರ ಹೆಚ್ಚು ಜಾಗೃತಿ ವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ನಾವೆಲ್ಲರು ಕೂಡ ರೋಗದ ಬಗ್ಗೆ ಜಾಗೃತಿ ವಹಿಸಬೇಕಾಗಿದೆ. ಅನಗತ್ಯವಾಗಿ ನಾವು ಮನೆಯಿಂದ ಹೊರಗೆ ಬರುವುದನ್ನು ಮುಂದಿನ ದಿನಗಳಲ್ಲಿ ಕಡಿಮೆ ಮಾಡಬೇಕು. ಶಂಕಿತ ವ್ಯಕ್ತಿ ಕಂಡು ಬಂದಲ್ಲಿ ಕೂಡಲೆ ಆಸ್ಪತ್ರೆಗಳಿಗೆ ಮಾಹಿತಿ ನೀಡಿ ಎಂದರು.

ಮುದ್ದೇಬಿಹಾಳ ತಾಲೂಕು ಬಿಜೆಪಿ ಉಪಾಧ್ಯಕ್ಷ ಬಾಬುಗೌಡ ಅಮಾತಿಗೌಡರ ಮಾತನಾಡಿ, ಕೊರೊನಾ ಸೋಂಕಿನ ನಿಯಂತ್ರಣ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರ ದಿಟ್ಟ ನಿರ್ಧಾವನ್ನು ತೆಗೆದುಕೊಂಡಿದೆ.

ಸಾಮೂಹಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರು ಗುಂಪು ಪ್ರದೇಶದಿಂದ ದೂರ ಇರಬೇಕು ಎಂದು ಬಹಳ ಕಟ್ಟುನಿಟ್ಟಿನ ಆದೇಶವನ್ನು ನೀಡಿದ್ದಾರೆ. ಇದನ್ನು ಎಲ್ಲರು ಪಾಲಿಸುತ್ತಿದ್ದು ನಾವು ಇನ್ನು ಹೆಚ್ಚಿನ ಜಾಗೃತಿ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವೃದ್ಧರು ಮನೆಯಿಂದ ಹೊರಗೆ ಬರಲೆಬಾರದು. ಪ್ರಧಾನ ಮಂತ್ರಿ ಅವರು ರವಿವಾರ ದಿನ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಅವರ ಕರೆಗೆ ನಾವೆಲ್ಲರು ಸಹಕಾರ ನೀಡಬೇಕು. ಪಟ್ಟಣದಲ್ಲಿ ಈ ಬಗ್ಗೆ ಇನ್ನು ಹೆಚ್ಚಿನ ಜಾಗೃತಿ ಮೂಡಿಸಲಾಗುವುದು ಎಂದರು.

ಡಾ| ಸಿ.ಬಿ. ವಿರಕ್ತಮಠ ಮಾತನಾಡಿ, ಕೊರೊನಾ ಸೋಂಕಿನ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ವಿದೇಶದಿಂದ ಬಂದ ಈ ಸೋಂಕಿನ ಹರಡುವಿಕೆ ತಡೆಗಟ್ಟಲು ಆರೋಗ್ಯ ಇಲಾಖೆ ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕರು ಜಾಗೃತರಾಗಬೇಕು. ಮನೆ ಒಳಗೆ ಪ್ರವೇಶ ಮಾಡಬೇಕಾದರೆ ಸ್ವತ್ಛವಾಗಿ ಕೈ ತೊಳೆದುಕೊಂಡು ಪ್ರವೇಶ ಮಾಡಿ, ಹೊರಗಿನ ಆಹಾರ ಪದಾರ್ಥಗಳನ್ನು ಮುಟ್ಟಬೇಡಿ, ನಾವು ಇದರ ಭೀತಿಗೆ ಒಳಗಾಗದೆ ಇದರ ನಿಯಂತ್ರಣದ ಕ್ರಮಗಳನ್ನು ಚಾಚು ತಪ್ಪದೆ ಪಾಲಿಸಬೇಕು ಎಂದರು.

ಖಾಜಾಹುಸೇನ್‌ ಎತ್ತಿನಮನಿ, ಬಸಣ್ಣ ವಡಗೇರಿ, ಚನ್ನಪ್ಪಗೌಡ ಹಂಪನಗೌಡರ, ಜಗದೀಶ ಜಾಲಹಳ್ಳಿ, ಚಂದ್ರು ಹಂಪನಗೌಡರ, ಗೌಡಪ್ಪ ಹಂಪನಗೌಡ್ರ, ಚನ್ನಸಬಪ್ಪ ತಾಳಿಕೋಟಿ, ನಿಂಗಣ್ಣ ಬಿರಾದಾರ, ಅಮರೇಶ ಮದರಿ, ವೀರೇಶ ಗೌಡರ, ಶಿವು ಗಂಗನಗೌಡರ ಇದ್ದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.