ನಿರಂತರ ಮಳೆ: ಜಲಾಶಯಗಳಿಗೆ ಒಳ ಹರಿವು ಹೆಚ್ಚಳ- ಕೃಷ್ಣೆಗೆ ಹರಿಯುತ್ತಿದೆ ಲಕ್ಷ ಕ್ಯೂಸೆಕ್ ನೀರು
Team Udayavani, Sep 26, 2020, 11:56 AM IST
ವಿಜಯಪುರ: ಜಿಲ್ಲೆಯಲ್ಲಿ ಕಳೆದ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ಹಳ್ಳಗಳು ತುಂಬಿ ಹರಿಯುತ್ತಿದ್ದು, ಕೃಷ್ಣಾ ನದಿಯೂ ಮೈದುಂಬಿ ಹರಿಯುತ್ತಿದೆ.
ಕೃಷ್ಣಾ ನದಿಗೆ ಆಲಮಟ್ಟಿ ಬಳಿ ನಿರ್ಮಿಸಿರುವ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ 52 ಕ್ಯೂಸೆಕ್ ಒಳಹರಿದ್ದು, ಜಿಲ್ಲೆಯ ಮಳೆ ನೀರು ಸೇರಿ ನದಿಪಾತ್ರದಲ್ಲಿ ಒತ್ತಡ ಹಚ್ಚಿದ್ದ, 82 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ನದಿಗೆ ಹರಿಸಲಾಗುತ್ತಿದೆ.
ಮತ್ತೊಂದೆಡೆ ನಾರಾಯಣಪುರ ಬಸವ ಸಾಗರ ಜಲಾಶಯಕ್ಕೆ 90 ಸಾವಿರ ಕ್ಯೂಸೆಕ್ ಒಳ ಹರಿವಿದ್ದು, ಮಳೆ ನೀರು ಸೇರಿ ಜಲಾಶಯ ಮತ್ತೊಮ್ಮೆ ಭರ್ತಿಯಾಗಿದೆ. ಹೀಗಾಗಿ ಜಲಾಶಯದ 16 ಗೇಟ್ ಮೂಲಕ 98,800 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.