ನಾರಾಯಣ ಗುರೂಜಿ ತತ್ವಾದರ್ಶ ಪಾಲಿಸಿ


Team Udayavani, Sep 7, 2017, 1:09 PM IST

vij-.jpg

ವಿಜಯಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ತ್ರೀಯರ, ಹಿಂದುಳಿದ ವರ್ಗದವರ ಶೋಷಿತ ಸಮುದಾಯದವರ ಧ್ವನಿಯಾಗಿ, ಅಸಮಾನತೆ ಹೋಗಲಾಡಿಸಿ ಸಮಾನತೆಯ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು
ಎಂದು ಅಪರ ಜಿಲ್ಲಾಧಿಕಾರಿ ಡಾ| ಎಚ್‌.ಬಿ. ಬೂದೆಪ್ಪ ಹೇಳಿದರು.

ಬುಧವಾರ ನಗರದ ಕಂದಗಲ್‌ ಹನುಮಂತರಾಯ ಜಿಲ್ಲಾ ರಂಗಮಂದಿರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಳ್ಳೆಯದನ್ನು ಮಾಡದಿದ್ದರೂ ಕೆಟ್ಟದ್ದನ್ನು ಮಾಡಬಾರದೆಂಬ
ಸಂದೇಶ ಸಾರಿದ ನಾರಾಯಣ ಗುರುಗಳ ಜೀವನ ಸಂದೇಶ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.

ಅರವಿಂದ ಕೊಪ್ಪ ಉಪನ್ಯಾಸ ನೀಡಿ, ದೌರ್ಜನ್ಯ, ಹಿಂಸೆ, ಶೋಷಣೆಯಿಂದ ಬಳಲುತ್ತಿರುವ ವರ್ಗವನ್ನು ಅದರಿಂದ ಹೊರತಂದು, ಜಾತಿಯಿಂದ ಹೊರತಾದ ಸಮಾಜ ನಿರ್ಮಾಣದಲ್ಲಿ, ಸಮಾಜವಾದಿ ತತ್ವಗಳೊಂದಿಗೆ ಹಿಂದುತ್ವ ಸುಧಾರಣೆಗೆ ವಿವೇಕಾನಂದರ ಮಾತಿನಂತೆ ಶ್ರಮಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಬಣ್ಣಿಸಿದರು.

ನಾರಾಯಣ ಗುರುಗಳ ಬದುಕೇ ಒಂದು ಸನಾತನ ಧರ್ಮದಂತಿತ್ತು ಎಂದು ಥಿಯೋಸಾಫಿಕಲ್‌ ಸೊಸೈಟಿಯ ಆ್ಯನಿಬೆಸೆಂಟ್‌ ಹೊಗಳಿದ್ದಾರೆ. ಇದು ನಾರಾಯಣ ಗುರುಗಳ ಆದರ್ಶ ಜೀವನಕ್ಕೆ ಸಾಕ್ಷಿ. ಸಮಾಜವನ್ನು ಸುಧಾರಿಸಲು ದ್ವೇಷ, ಸಂಘರ್ಷ ರಹಿತ ಹಾದಿ ತುಳಿದರು. ಶೂದ್ರ ವರ್ಗವನ್ನು ಸಮಾಜದ ಸಮಾನತೆಯ ಮಾರ್ಗಕ್ಕೆ ತಂದರು. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವದಂತೆ 19ನೇ ಶತಮಾನದ ಅಂತ್ಯದಲ್ಲಿ 20ನೇ ಶತಮಾನದ ಆದಿಯ ಆ ಕಾಲದಲ್ಲಿದ್ದ ಅನೇಕ ಅನಿಷ್ಠ ಪದ್ಧತಿಗಳನ್ನು ವಿರೋಧಿಸುತ್ತ ಕೇರಳದ ಬಸವಣ್ಣ ಎಂದು ಹೆಸರು ಪಡೆದಿದ್ದರು. ಇವರ ಚಿಂತನೆಗಳಿಂದ ರವೀಂದ್ರನಾಥ ಟ್ಯಾಗೋರ್‌ರವರು ಪ್ರಭಾವಿತರಾಗಿದ್ದರು ಎಂದು ಹೇಳಿದರು.

ಬಾಲ್ಯ ವಿವಾಹದಂತಹ ಅನಿಷ್ಠ ಪದ್ಧತಿ ವಿರೋಧಿಸಿದಲ್ಲದೇ, ಸಮಾಜದಲ್ಲಿ ವಿಧವಾ ವಿವಾಹ ಪ್ರೋತ್ಸಾಹಿಸಿದರು. ತಮ್ಮ ತತ್ವ ಆದರ್ಶಗಳಿಂದ ಜಗತ್ತಿನಲ್ಲಿ ಆದರ್ಶರಾದರು. ಸಮಗ್ರ ಸಮಾಜದ ಅಭಿವೃದ್ಧಿ ಕನಸು ಕಂಡಿದ್ದ ಅವರನ್ನು ಯಾವುದೇ ಒಂದು ವರ್ಗ, ಜಾತಿ, ಧರ್ಮಕ್ಕೆ ಸೀಮಿತಗೊಳಿಸುವ ಸಂಕುಚಿತ ಕೆಲಸ ಮಾಡಬಾರದು ಎಂದು ಮನವಿ ಮಾಡಿದರು.

ಪೊಲೀಸ್‌ ಅಧಿಕಾರಿ ಸಿಂಧೂರ, ಬಸವರಾಜ ಈಳಗೇರ, ಡಿ.ಎಸ್‌. ಬಿರಾದಾರ, ಸುನೀಲ ಗುತ್ತೇದಾರ, ಯಶವಂತ ಈಳಗೇರ, ಆಂಜನೇಯ ಈಳಗೇರ, ಡಾ| ಎಸ್‌.ಕೆ. ಬಿರಾದಾರ ವೇದಿಕೆಯಲ್ಲಿದ್ದರು. ಈ ವೇಳೆ ಸುರೇಶ ಶಹಾ ನೇತೃತ್ವದ ನೂಪುರ ಕಲಾ ಸಂಸ್ಥೆಯಿಂದ ನೃತ್ಯ ರೂಪಕ ಜರುಗಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಜೆ.ಎಸ್‌. ಪೂಜೇರಿ ಸ್ವಾಗತಿಸಿದರು. ಶಿಕ್ಷಕ ಹುಮಾಯುನ ಮಮದಾಪುರ ನಿರೂಪಿಸಿದರು. ಇದಕ್ಕೂ ಮೊದಲು ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್‌ ಹನುಮಂತರಾಯ ರಂಗಮಂದಿರದವರೆಗೆ ನಾರಾಯಣ ಗುರುಗಳ ಭಾವಚಿತ್ರ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.