ಕೊನೆ ಭಾಗದ ರೈತರಿಗೆ ನೀರು ತಲುಪಿಸಿ

ನೀರಾವರಿ ಯೋಜನೆಗಳ ಯಶಸ್ಸಿಗೆ ಶ್ರಮಿಸಿಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮಹತ್ವ ನೀಡಿ

Team Udayavani, May 6, 2020, 12:23 PM IST

Udayavani Kannada Newspaper

ನಾರಾಯಣಪುರ: ಬಸವಸಾಗರ ಜಲಾಶಯ ಅಚ್ಚುಕಟ್ಟು ಭಾಗದ ಕಾಲುವೆಗಳ ಕೊನೆ ಭಾಗದ ರೈತರಿಗೆ ನೀರು ತಲುಪಿಸಲು ಅಧಿಕಾರಿಗಳು ಪ್ರಯತ್ನ ಮಾಡಬೇಕು. ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮಹತ್ವ ನೀಡಬೇಕು ಎಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ ಸೂಚಿಸಿದರು.

ಇಲ್ಲಿನ ಸ್ಕಾಡ್‌ ಸೆಂಟರ್‌ನಲ್ಲಿ ಮಂಗಳವಾರ ನಡೆದ ಕೃಷ್ಣಾ ಭಾಗ್ಯ ಜಲ ನಿಗಮದ ಬಸವಸಾಗರ ಅಣೆಕಟ್ಟು ವಲಯದ ವಿವಿಧ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ನೀರಾವರಿ ಯೋಜನೆಗಳಿಂದ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪಿದಾಗ ಮಾತ್ರ ರೈತರು ತೃಪ್ತಿಯಾಗಲು ಸಾಧ್ಯ. ನೀರು ಸದ್ಬಳಕೆಗಾಗಿ ಯಶಸ್ವಿ ಯೋಜನೆ ರೂಪಿಸಬೇಕು. ನೀರು ಪೋಲು ಆಗದಂತೆ ನೋಡಿಕೊಂಡು ಅಚ್ಚುಕಟ್ಟು ಭಾಗದ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬುವ ಬಗ್ಗೆ ಗಮನಹರಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿದ್ದ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ರಾಜುಗೌಡ, ಡಾ| ಶಿವರಾಜ ಪಾಟೀಲ, ಬಸವರಾಜ ದದ್ದಲ್‌, ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ, ಮಾನಪ್ಪ ವಜ್ಜಲ ತಮ್ಮ ಮತಕ್ಷೇತ್ರ ವ್ಯಾಪ್ತಿಯಲ್ಲಿ ನೀರಾವರಿ ಕಾಲುವೆಗಳ ನವೀಕರಣ, ಏತ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುವಂತೆ ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ ಅವರ ಗಮನಕ್ಕೆ ತಂದರು.

ಜಲಾಶಯಕ್ಕೆ ಭೇಟಿ: ಸಭೆಗೂ ಮುನ್ನ ಬಸವಸಾಗರ ಜಲಾಶಯಕ್ಕೆ ಭೇಟಿ ನೀಡಿದ ಸಚಿವರು, ಅಧಿಕಾರಿಗಳಿಂದ ಜಲಾಶಯದಲ್ಲಿ ಸಂಗ್ರಹವಿರುವ ನೀರಿನ ಮಾಹಿತಿ ಜತೆಗೆ ಎಡದಂಡೆ ಮುಖ್ಯ ಕಾಲುವೆಗೆ ಸ್ಕಾಡ್‌ ತಂತ್ರಜ್ಞಾನ ಗೇಟ್‌ ಅಳವಡಿಸಿರುವ ಬಗ್ಗೆ ಸಮಗ್ರ ಮಾಹಿತಿ ಪಡೆದರು. ಪ್ರಭಾರಿ ಮುಖ್ಯ ಅಭಿಯಂತರ ಎಸ್‌. ರಂಗಾರಾಮ್‌ ಯೋಜನೆಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಭೀಮರಾಯನಗುಡಿ ಮುಖ್ಯ ಇಂಜಿನಿಯರ್‌ ಪ್ರದೀಪ ಮಿತ್ರಾ ಮಂಜುನಾಥ, ಅಣೆಕಟ್ಟು ವಿಭಾಗಾಧಿಕಾರಿ ಶಂಕರ ನಾಯ್ಕೋಡಿ, ಎಇಇಗಳಾದ ಆರ್‌. ಎಲ್‌. ಹಳ್ಳೂರು, ರಾಮಚಂದ್ರ, ವಿದ್ಯಾಧರ, ಜಿಪಂ ಸದಸ್ಯ ಮರಲಿಂಗಪ್ಪನಾಯಕ ಕರ್ನಾಳ, ಎಚ್‌.ಸಿ. ಪಾಟೀಲ, ಬಿ.ಎಂ. ಹಳ್ಳಿಕೋಟೆ ಸೇರಿದಂತೆ ಅಣೆಕಟ್ಟು ವಲಯ ಅಭಿಯಂತರರು, ಜನಪ್ರತಿನಿಧಿಗಳು ಹಾಗೂ ರೈತರು ಇದ್ದರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.