![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ನರೇಗಾ ಅಕ್ರಮ; ಇಒ ಪರಿಶೀಲನೆ
Team Udayavani, Oct 9, 2020, 7:01 PM IST
![vp-tdy-2](https://www.udayavani.com/wp-content/uploads/2020/10/vp-tdy-2-4-620x372.jpg)
ಮುದ್ದೇಬಿಹಾಳ: 2018-19 ಹಾಗೂ 2019-20ನೇ ಸಾಲಿನ ಉದ್ಯೋಗ ಖಾತ್ರಿ (ನರೇಗಾ)ಯೋಜನೆಯಡಿ ದಾಖಲಾತಿ ಯಲ್ಲಿರುವಂತೆಕಾಮಗಾರಿಗಳು ನಡೆದಿಲ್ಲ ಎನ್ನುವ ಗ್ರಾಮಸ್ಥರ ಆರೋಪದ ಹಿನ್ನೆಲೆಯಲ್ಲಿಖುದ್ದು ಪರಿಶೀಲಿಸಲು ತಾಪಂ ಇಒ ಶಶಿಕಾಂತ ಶಿವಪುರೆ ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು.
ಕೆಲವು ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದ ಇಒ ಮೇಲ್ನೋಟಕ್ಕೆ ಅವುಗಳಲ್ಲಿನ ವ್ಯತ್ಯಾಸ ಕಂಡುಕೊಂಡು ದಾಖಲೆ ಪರಿಶೀಲಿಸಲು ಮುಂದಾಗಿದ್ದರು. ಆದರೆ ಎನ್ಆರ್ ಇಜಿ ವೆಬ್ಸೈಟ್ ತಾಂತ್ರಿಕ ದೋಷದಿಂದಬಂದ್ ಆಗಿದ್ದರಿಂದ ಪರಿಶೀಲನೆ ಸಾಧ್ಯವಾಗಲಿಲ್ಲ. ಇನ್ನು ಮೂರ್ನಾಲ್ಕುದಿನ ಈ ಕುರಿತು ಪರಿಶೀಲನೆ ನಡೆಸಿ ನಂತರ ವರದಿ ತಯಾರಿಸುವ ಹಾಗೂ ತಪ್ಪುಗಳು ಕಂಡುಬಂದಲ್ಲಿ ಪಿಡಿಒ ವಿರುದ್ಧ ಮೇಲಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.
ಪಿಡಿಒ ಎಸ್.ಐ. ಹಿರೇಮಠ ಅವರು ಎನ್ಆರ್ಇಜಿ ಕಾಮಗಾರಿಗಳನ್ನು ಯೋಜನಾ ವರದಿಯಲ್ಲಿರುವಂತೆಸರಿಯಾಗಿ ಮಾಡಿಲ್ಲ. ಪ್ರಾಯೋಗಿಕ ಕೆಲಸಕ್ಕೂ, ಯೋಜನಾ ವರದಿಯಲ್ಲಿ ಖರ್ಚಾದ ಹಣಕ್ಕೂ ತಾಳೆ ಆಗುವುದಿಲ್ಲ. ಬೀದಿದೀಪ ವಿಷಯದಲ್ಲಿ ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ಹಿರೇಮುರಾಳಕ್ಕೇ ಹೆಚ್ಚಿನ ಸೌಲಭ್ಯಒದಗಿಸಿದ್ದು, ಅರೇಮುರಾಳಕ್ಕೆ ಸೌಲಭ್ಯ ಕಲ್ಪಿಸಲು ಹಿಂದೇಟು ಹಾಕುತ್ತಿದ್ದಾರೆ.
ಕಂಪ್ಯೂಟರ್ ಉತಾರಕ್ಕೆ ಹಣ ಕೇಳುತ್ತಾರೆ. ಉದ್ಯೋಗ ಖಾತ್ರಿ ಕೆಲಸಕ್ಕೆ ಜೆಸಿಬಿ ಯಂತ್ರಬಳಸಿದ್ದಾರೆ ಎಂಬೆಲ್ಲ ಆರೋಪಗಳು ಗ್ರಾಮಸ್ಥರಿಂದ ಕೇಳಿಬಂದವು. ಆದರೆ ಆರೋಪಗಳನ್ನು ನಿರಾಕರಿಸಿದ ಪಿಡಿಒ ಹಿರೇಮಠ ಅವರು, 2018-19, 2019-20ನೇ ಸಾಲಿನ ಕಾಮಗಾರಿಗಳು ನರೇಗಾ ನಿಯಮದಂತೆ ಮಾಡಲಾಗಿದೆ. ಅಗತ್ಯ ಇರುವೆಡೆ ಲೇಬರ್ಬಳಸಿದ್ದು, ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಸೂಚನೆ ಪಾಲಿಸಿ ಕೆಲಸ ಮಾಡಿಸಲಾಗಿದೆ. ಬೀದಿದೀಪ ವಿಷಯದಲ್ಲಿ ಮಲತಾಯಿ ಧೋರಣೆಮಾಡಿಲ್ಲ. ಕಾನೂನುಬಾಹಿರವಾಗಿ ಕೆಲಸಮಾಡಲು ಕೇಳಿದವರು ನಾನು ಅದಕ್ಕೆ ಆಸ್ಪದ ಕೊಡದೆ ಇದ್ದಾಗ ನನ್ನ ಮೇಲೆ ದೂರು ಸಲ್ಲಿಸಿದ್ದಾರೆ. ತನಿಖೆ ನಡೆದು ಸತ್ಯಏನು ಎನ್ನುವುದು ಗೊತ್ತಾಗಲಿ ಎಂದು ಸಮಜಾಯಿಷಿ ನೀಡಲು ಯತ್ನಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.