ಅಂಗನವಾಡಿ ವ್ಯವಸ್ಥೆಗಿಲ್ಲ ಪೆಟ್ಟು


Team Udayavani, Oct 9, 2020, 6:56 PM IST

vp-tdy-1

ವಿಜಯಪುರ: 21ನೇ ಶತಮಾನದಲ್ಲಿ ಭವಿಷ್ಯದ ಪೀಳಿಗೆಗೆ ಅಗತ್ಯವಿರುವ ಕೌಶಲ್ಯ ಬೆಳೆಸಲು ಮಕ್ಕಳನ್ನು ಸ್ಫೂ ರ್ತಿ ದಾಯಕ ಚಿಂತನೆಗೆ ಹಚ್ಚಬೇಕು. “ಓದಲು ಕಲಿ, ನಂತರ ಕಲಿಯಲು ಓದು’ ಎಂಬ ತತ್ವ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲ ಆಶಯ. ಇದಕ್ಕಾಗಿ ಪಾಲಕರು,ಶಿಕ್ಷಕರು ಮಕ್ಕಳಿಗೆ ಸೂಕ್ತ ಮಾರ್ಗದರ್ಶನನೀಡಬೇಕು ಎಂದು ರಾಷ್ಟ್ರೀಯ ಶಿಕ್ಷಣನೀತಿ-2020ರ ಕಾರ್ಯಪಡೆ ಸದಸ್ಯರಾದಮೇಲ್ಮನೆ ಸದಸ್ಯ ಅರುಣ ಶಹಾಪುರ ಹೇಳಿದರು.

ನಗರದ ಕರ್ನಾಟಕ ರಾಜ್ಯಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ವೆಬಿನಾರ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳು ಶೈಶವಾವಸ್ಥೆಯಲ್ಲಿ ಅತೀ ಹೆಚ್ಚು ಚುರುಕಾಗಿರುತ್ತಾರೆ. ಕಲಿಯುವ ಶಕ್ತಿ ಅವರಲ್ಲಿ ಅಗಾಧವಾಗಿರುತ್ತದೆ. ಆದ್ದರಿಂದ ಶಿಕ್ಷಣ ನೀತಿಯಲ್ಲಿ ಮಕ್ಕಳಶೈಶವಾವಸ್ಥೆ ಕಲಿಕೆಗೆ ಅತೀ ಹೆಚ್ಚು ಒತ್ತು ನೀಡಲಾಗಿದೆ. ನಾವು ಏನು ಚಿಂತಿಸಬೇಕು ಎಂಬುದಕ್ಕಿಂತ ಹೇಗೆ ಚಿಂತಿಸಬೇಕು ಎಂಬುದನ್ನು ಕಲಿಸಬೇಕು ಎಂದು ಮೋದಿಅವರು ಹೇಳಿದ್ದಾರೆ. ಈ ಕಾರಣಕ್ಕಾಗಿಯೇ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಈ ನೀತಿ ಜಾರಿಗೆ ಮುಂದಾಗಿದ್ದಾರೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಜನರ ಸಲಹೆಗಳನ್ನು ಪಡೆದು ತಯಾರಾದ ನೀತಿ. ಇದರಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಕಳೆದ 34 ವರ್ಷಗಳಿಂದ ಶೈಕ್ಷಣಿಕ ನೀತಿಯಲ್ಲಿ ಯಾವುದೇ ನೀತಿಗಳು ಜಾರಿಗೆ ಬಂದಿರಲಿಲ್ಲ. ಈಗ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‌ ಅವರ ನೇತೃತ್ವದಲ್ಲಿ ಈ ನೀತಿಯ ಕರಡು ಪ್ರತಿಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

ನೂತನ ಶಿಕ್ಷಣ ನೀತಿಯಿಂದ ಅಂಗನವಾಡಿ ವ್ಯವಸ್ಥೆಗೆ ಪೆಟ್ಟು ಬೀಳಲಿದೆ ಎಂಬ ಆತಂಕ ಕಾರ್ಯಕರ್ತೆಯರಿಗೆ ಬೇಡ. ಅಂಗನವಾಡಿ ಕಾರ್ಯಕರ್ತೆಯರಿಗೆತರಬೇತಿ ನೀಡಿ ಅವರನ್ನು ಶಿಕ್ಷಕರನ್ನಾಗಿಪರಿವರ್ತಿಸುವ ಉದ್ದೇಶ ಹೊಂದಿದೆ.ಅಂಗನವಾಡಿ ಕಾರ್ಯಕರ್ತೆಯರುಇನ್ನು ಶಿಕ್ಷಕಿ ಎನಿಸಿಕೊಳ್ಳಲಿದ್ದಾರೆ. ಔಪಚಾರಿಕ ಶಿಕ್ಷಣ ದೊರಕಿಸುವ ಆಶಯ ಹೊಂದಲಾಗಿದೆ. ತಳಮಟ್ಟದಲ್ಲೇ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಇದರ ಆಶಯ ಎಂದರು.

ಕುಲಪತಿ ಪ್ರೊ| ಓಂಕಾರ ಕಾಕಡೆ, ಕುಲಸಚಿವೆ ಪ್ರೊ| ಆರ್‌. ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪ್ರೊ|ಪಿ.ಜಿ. ತಡಸದ ಮಾತನಾಡಿದರು. ಐಕ್ಯೂಎಸಿ ಸಹಾಯಕ ನಿರ್ದೇಶಕ ಮಠಪತಿ ಸ್ವಾಗತಿಸಿದರು. ರೇಣುಕಾ ಮೇಟಿ ನಿರೂಪಿಸಿದರು. ರೋಹಿಣಿಭೂಸನೂರಮಠ ವಂದಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.