ಕೋಳೂರ ತಾಂಡಾದಲ್ಲಿ ನವರಾತ್ರಿ ಪೂಜೆ


Team Udayavani, Oct 27, 2020, 4:09 PM IST

ಕೋಳೂರ ತಾಂಡಾದಲ್ಲಿ ನವರಾತ್ರಿ ಪೂಜೆ

ಮುದ್ದೇಬಿಹಾಳ: ಬಂಜಾರಾ (ಲಂಬಾಣಿ) ಸಮಾಜ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿ ಹೊಂದಿದ್ದು ಇವರ ಉಡುಗೆ, ತೊಡುಗೆ, ಆಚರಣೆಯಲ್ಲಿ ಹಿಂದೂ ಸಂಸ್ಕೃತಿಎದ್ದು ಕಾಣುತ್ತದೆ ಎಂದು ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಕೋಳೂರು ತಾಂಡಾದಲ್ಲಿ ಮುದ್ದೇಬಿಹಾಳದ ಎಸ್‌ ಎಸ್‌ವಿ ಸಂಘದ ಅಡಿಯಲ್ಲಿ ಏರ್ಪಡಿಸಿದ್ದ ನವರಾತ್ರಿ ಪೂಜಾ ಸಮಾರಂಭದಲ್ಲಿ ಗ್ರಾಮಸ್ಥರಿಂದ ಸನ್ಮಾನಸ್ವೀಕರಿಸಿ ಅವರು ಮಾತನಾಡಿದರು.

ಬಂಜಾರ ಸಮಾಜದ ಜನ ಶ್ರಮಜೀವಿಗಳು. ಬೇರೆಯವರ ತಂಟೆಗೆ ಹೋಗುವುದಿಲ್ಲ. ಈ ಸಮಾಜದವರಿಗೆ ಭೂಮಿ ಕಡಿಮೆ ಇರುವುದರಿಂದ ವರ್ಷದ ಆರು ತಿಂಗಳು ದುಡಿಯಲು ವಲಸೆಹೋಗುತ್ತಾರೆ. ಆದರೆ ಕೊರೊನಾದಿಂದಾಗಿ ಈ ವರ್ಷ ಬಹಳ ಕಷ್ಟ ಅನುಭವಿಸಿದ್ದಾರೆ. ಕೊರೊನಾ, ಪ್ರಕೃತಿ ವಿಕೋಪದ ಹೊಡೆತದ ನಡುವೆಯೂ ಬದುಕನ್ನು ಸವಾಲಾಗಿ ಸ್ವೀಕರಿಸಿ ಜೀವಿಸುತ್ತಿದ್ದಾರೆ ಎಂದರು.

ಈ ಮತಕ್ಷೇತ್ರದಲ್ಲಿ ಮುಂದಿನ 10 ವರ್ಷ ದಲಿತ, ಬಂಜಾರಾ ಸೇರಿ ಹಿಂದುಳಿದ ಸಮುದಾಯದ ಯುವಕರಿಗೆ ಈ ತಾಲೂಕಲ್ಲೇ ಉದ್ಯೋಗ ಸೃಷ್ಟಿಸುವುದುನನ್ನ ಕನಸು. ಹಂತ ಹಂತವಾಗಿ ಉದ್ಯೋಗ ಸೃಷ್ಟಿಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಸರ್ಕಾರದಲ್ಲಿ ಬಹಳಷ್ಟು ಯೋಜನೆಗಳಿವೆ. ಅವುಗಳ ಸದುಪಯೋಗ ಆಗಬೇಕು ಎಂದರು.

ಜಿಪಂ ಮಾಜಿ ಸದಸ್ಯ ಚಿದಾನಂದ ಸೀತಿಮನಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ಎಸ್‌ವಿ ಸಂಘದ ಕಾರ್ಯದರ್ಶಿ ರವಿ ನಾಯಕ, ತಾಪಂ ಸದಸ್ಯ ಪ್ರೇಮಸಿಂಗ್‌ ಚವ್ಹಾಣ, ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ, ದಿ ಕರ್ನಾಟಕ ಕೋ ಆಪ್‌ ಬ್ಯಾಂಕ್‌ ನಿರ್ದೇಶಕ ಶರಣು ಬೂದಿಹಾಳಮಠ, ಆರ್‌ಟಿಒ ಜಯರಾಮ ನಾಯಕ, ಡಿಎಸ್ಸೆಸ್‌ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ. ಮುದೂರ, ಬಿಜೆಪಿ ಧುರೀಣ ತುಳಜಾರಾಮ ಚವ್ಹಾಣ ವೇದಿಕೆಯಲ್ಲಿದ್ದರು.

ಪಿಎಸೈ ಮಲ್ಲಪ್ಪ ಮಡ್ಡಿ, ಪ್ರಮುಖರಾದ ಅಶೋಕ ಇರಕಲ್‌, ಸುಭಾಷ್‌ ಚವ್ಹಾಣ, ಸಿ.ಕೆ. ಚವ್ಹಾಣ, ಭೀಮಸಿಂಗ್‌ ಚವ್ಹಾಣ, ಸಂತೋಷ ಚವ್ಹಾಣ, ಪ್ರವೀಣ ಸೀತಿಮನಿ, ಸತೀಶ ರಾಠೊಡ, ಸಂತೋಷ ಸೀತಿಮನಿ, ಪ್ರತಾಪ ಸೀತಿಮನಿ, ಅನಿಲ ಜಾಧವ, ಅನಿಲ ರಾಠೊಡ, ರಾಮಸ್ವಾಮಿ ಮೇಲಿನಮನಿ, ವಿಜಯ ಮೇಲಿನಮನಿ, ಪ್ರಕಾಶ ಚವ್ಹಾಣ, ವಿಕಾಸ್‌ ಚವ್ಹಾಣ, ಜಗದೀಶ ಚವ್ಹಾಣ, ದಿಲೀಪ ರಾಠೊಡ, ಆಕಾಶ ಚವ್ಹಾಣ, ಸಚಿನರಾಠೊಡ, ಪ್ರಶಾಂತ ರಾಠೊಡ, ಬಾಲಾಜಿ ನಾಯಕ, ಬಲಭೀಮ ನಾಯಕಮಕ್ಕಳ ಇದ್ದರು.

ಎಸ್‌ಎಸ್‌ ಪಿಯು ಕಾಲೇಜು ಪ್ರಾಂಶುಪಾಲ ಬಿ.ಜಿ. ಬಿರಾದಾರ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಶಾಸಕರನ್ನು ಆರತಿ ಬೆಳಗುವ ಮೂಲಕ ಸ್ವಾಗತಿಸಿ ತಿಲಕ ಇರಿಸಲಾಯಿತು. ಶಾಸಕರು ದುರ್ಗಾದೇವಿ ಹಾಗೂ ಸೇವಾಲಾಲ್‌ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಪೂಜಾರಿಗಳಾದ ರಮೇಶ ಮಹಾರಾಜರು, ಸುಭಾಷ್‌ ಪೂಜೆ ನಡೆಸಿಕೊಟ್ಟರು. ಕಾರ್ಯಕ್ರಮದ ನಂತರ ಕಿರುತೆರೆ ಕಲಾವಿದರಾದ ಗೋಪಾಲ ಹೂಗಾರ, ಗೋಪಾಲ ಇಂಚಗೇರಿ ನೇತೃತ್ವದ ಕಲಾ ಸಿಂಚನಾ ಬಳಗದಿಂದ ಕೋವಿಡ್ ಜಾಗೃತಿ ಸಂಗೀತ ರಸಮಂಜರಿ ನಡೆಯಿತು.

ತಾಲೂಕಿನಲ್ಲಿರುವ ಸವುಳು ಜವುಳು ಸಮಸ್ಯೆಗೆ ಅಂತ್ಯ ಹಾಡಲು ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆ ಜಾರಿಗೆ ಸಿದ್ಧತೆ ನಡೆಸಿದ್ದೇನೆ. ಈ ಯೋಜನೆ ಅಡಿ ಒಂದು ಎಕರೆಯಲ್ಲಿ ಮೀನುಗಾರಿಕೆಯಿಂದ ವರ್ಷಕ್ಕೆ 4 ಲಕ್ಷ ರೂ. ಆದಾಯ ತೆಗೆಯಬಹುದು. ನಿರುದ್ಯೋಗಿಗಳಿಗೆ ಇದು ವರದಾನವಾಗಿದೆ. -ಎ.ಎಸ್‌. ಪಾಟೀಲ ನಡಹಳ್ಳಿ, ಶಾಸಕರು

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.