ನಿಡಗುಂದಿ: ಕ್ರಿಮಿನಾಶಕ ಸಿಂಪಡಣೆಗೆ ಡ್ರೋಣ್‌ ಬಳಕೆ


Team Udayavani, Sep 24, 2022, 7:28 PM IST

16-drone

ನಿಡಗುಂದಿ: ಇಸ್ರೇಲ್‌ ಮಾದರಿ ಕೃಷಿಗೆ ರೈತರು ಮುಂದಾಗುತ್ತಿದ್ದು, ತಂತ್ರಜ್ಞಾನ ಯುಗ ಕೃಷಿ ಕೇತ್ರಕ್ಕೂ ಲಗ್ಗೆ ಇಟ್ಟಿದೆ. ತಂತ್ರಜ್ಞಾನದ ಮೂಲಕ ಅನೇಕ ಆವಿಷ್ಕಾರಗಳನ್ನು ಮಾಡುವ ಮೂಲಕ ಸಮಸ್ತವೂ ವರ್ಚುವಲ್ಲ ರೈತರ ಕೃಷಿಯೂ ತಂತ್ರಜ್ಞಾನದ ನೆರವಿನಿಂದ ರೈತ ಸ್ನೇಹಿಯಾಗುವತ್ತ ಹೆಜ್ಜೆ ಹಾಕಿದೆ.

ಇದಕ್ಕೆ ಸಾಕ್ಷಿ ಎಂಬಂತೆ ನಿಡಗುಂದಿಯಲ್ಲಿನ ರೈತ ಆಂಜನೇಯ, ಲಾವಣಿ ಪಡೆದ ತನ್ನ 27 ಎಕರೆ ಪ್ರದೇಶದಲ್ಲಿ ಕಬ್ಬು, ಬದನಿ, ಚೆಂಡುಹೂವು, ಟಮೋಟೆ, ಹಗಲಕಾಯಿ, ಕಲ್ಲಂಗಡಿ, ಬಾಳಿ ವಿವಿಧ ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡನೆ ಮಾಡಲು ಡ್ರೋಣ್‌ ಬಳಸಿ ಗಮನ ಸೆಳೆದಿದ್ದಾರೆ. ದೊಡ್ಡ ದೊಡ್ಡ ಸಭೆಗಳಲ್ಲಿ ದೃಶ್ಯ ಚಿತ್ರೀಕರಿಸಲು ಹಾಗೂ ಭದ್ರತೆ ಬಳಸುವ ಸಾಧನವಾಗಿದ್ದ ಈ ಡ್ರೋಣ್‌, ಈಗ ರೈತರ ಹೊಲ ಗದ್ದೆಗಳ ಮೇಲೆ ಹಾರಾಡುತ್ತಾ ರಾಸಾಯನಿಕ ಸಿಂಪಡಿಸುತ್ತಿದೆ.

ಕಡಿಮೆ ವೆಚ್ಚ: ಪ್ರತಿ ಎಕರೆಗೆ ಕಡಿಮೆ ವೆಚ್ಚದಿಂದ ಡ್ರೋಣ್‌ ಮೂಲಕ ಕ್ರಿಮಿನಾಶಕ ಸಿಂಪಡಣೆ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಒಂದು ಎಕರೆ ಕ್ರಿಮಿನಾಶಕ ಸಿಂಪಡಣೆ ಮಾಡಲು ಹೆಚ್ಚು ಸಮಯ ಬೇಕು. ಆದರೆ, ಡ್ರೋಣ್‌ ಮೂಲಕ ಕೆಲವೇ ನಿಮಿಷಗಳಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಬಹುದು. ಇದರಿಂದ ಹಣ ಹಾಗೂ ಸಮಯದ ಉಳಿತಾಯವಾಗುತ್ತದೆ ಎನ್ನುತ್ತಾರೆ ರೈತರು.

ಜಿಪಿಎಸ್‌ ಅಳವಡಿಕೆ: ಈ ಡ್ರೋಣ್‌ ಸಾಧನಕ್ಕೆ ಜಿಪಿಎಸ್‌ ಅಳವಡಿಸಲಾಗಿದ್ದು, ಹೊಲದ ಬದುವಿನಲ್ಲೇ ಕುಳಿತು ರಿಮೋಟ್‌ ಕಟ್ರೋಲ್‌ನಿಂದ ಇಡಿ ಹೊಲಕ್ಕೆ ಕ್ರಿಮಿನಾಶಕ ಸಿಂಪಡಿಸಬಹುದಾಗಿದೆ. ಇದರಿಂದ ಕೂಲಿಯಾಳು ಸಮಸ್ಯೆಯಿಲ್ಲ, ಕ್ರಿಮಿನಾಶಕದ ಸೈಡ್‌ ಎಫೆಕ್ಟ್ ಸಹ ಇಲ್ಲ.

ಲೆಕ್ಕ ಕೊಡುತ್ತೆ ಈ ಡ್ರೋಣ್‌: ಸುಮಾರು 10 ಲಕ್ಷ ರೂಪಾಯಿಯ ಈ ಡ್ರೋಣ್‌ಗೆ 12 ಲೀಟರ್‌ ಸಾಮರ್ಥ್ಯದ ಕ್ಯಾನ್‌ ಅಳವಡಿಸಲಾಗಿದೆ. ಇದರ ಜತೆಗೆ ಜಿಪಿಎಸ್‌ ಸಹ ಅಳವಡಿಸಿದ ಪರಿಣಾಮ ಎಷ್ಟು ಎಕರೆಗೆ ಕ್ರಿಮಿನಾಶಕ ಸಿಂಪಡಣೆ ಮಾಡಲಾಗಿದೆ ಎಂಬುದರ ನಿಖರ ಲೆಕ್ಕ ತಿಳಿಯಬಹುದಾಗಿದೆ.

ತೋಟಗಾರಿಕೆ ಬೆಳೆಗಳಿಗೂ ಸೈ: ಭತ್ತ, ಕಡಲೆ, ತೊಗರಿ ಮಾತ್ರವಲ್ಲದೆ ತೋಟಗಾರಿಕೆ ಬೆಳೆಗಳಾದ ನಿಂಬೆ, ಮಾವು, ಸಪೋಟಾ ಸೇರಿ ಎತ್ತರದ ಮರಗಳಿಗೂ ಸುಲಭವಾಗಿ ಕ್ರಿಮಿನಾಶಕ ಸಿಂಪಡಿಸಬಹುದು. ಕ್ರಿಮಿನಾಶಕ ಮಿಶ್ರಣ ಬೆರೆಸಿ ಜಿಪಿಎಸ್‌ ಮೂಲಕ ಕೆಲಸ ನಿಗದಿ ಮಾಡಿದ್ರೆ ಸಾಕು ಕೆಲಸ ಮುಗಿದಂತೆ.

ಬಾಡಿಗೆ ಲಭ್ಯ: ನಿಡಗುಂದಿಯ ರೈತ ಆಂಜನೇಯ ರೆಡ್ಡಿ, ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡನೆಗಾಗಿ ಬಳಸುತ್ತಿರುವ ಡ್ರೋಣ್‌, ಬಾಡಿಗೆಗೂ ಲಭ್ಯವಿದೆ. ಕಡಿಮೆ ವೆಚ್ಚ ಹಾಗೂ ಸಮಯದ ಉಳಿತಾಯ ಮಾಡುವ ನಿಟ್ಟಿನಲ್ಲಿ ಸುತ್ತಲಿನ ರೈತರಿಗೆ ಡ್ರೋಣ್‌ ಬಾಡಿಗೆ ಸಿಗಲಿದೆ. ಆದರೆ, ಡ್ರೋಣ್‌ ಸ್ವತಃ ಅವರೆ ತಂದು ಕ್ರಿಮಿನಾಶಕ ಸಿಂಪಡಿಸುತ್ತಾರೆ. ಡ್ರೋಣ್‌ ಕ್ರಿಮಿನಾಶಕ ಸಿಂಪಡಣೆ ಅಷ್ಟೆ ಅಲ್ಲದೇ ಬಿತ್ತನೆಗೆ ಸಾಲು ಕೂಡಾ ಬಿಡಲಿದೆ ಎಂದು ರೈತ ಆಂಜನೇಯ. ಮಾಹಿತಿಗೆ ಮೊ. 9611148409 ಗೆ ಸಂಪರ್ಕಿಸಬಹುದು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.