ದೇಶ ದ್ರೋಹಿಗಳಿಗೆ ಇನ್ನು ಜೈಲಿಲ್ಲ, ನೇರವಾಗಿ ಗುಂಡೇಟು: ಯತ್ನಾಳ್ ಎಚ್ಚರಿಕೆ
Team Udayavani, Feb 25, 2020, 2:53 PM IST
ವಿಜಯಪುರ: ದೇಶದ್ರೋಹಿ ಕೃತ್ಯ ಎಸಗುವ, ಪಾಕ್ ಪರ ಘೋಷಣೆ ಕೂಗುವ, ಫೇಸಬುಕ್ ಪೋಸ್ಟ್ ಹಾಕುವ ದೇಶದ್ರೋಹಿಗಳಿಗೆ ಗುಂಡೇಟು ಬೀಳುತ್ತವೆ ಹುಷಾರ್ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಎಚ್ಚರಿಸಿದ್ಧಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇಶದ್ರೋಹದ ಕೆಲಸದಲ್ಲಿ ತೊಡಗುವವರಿಗೆ ಇನ್ನು ಮುಂದೆ ಜೈಲು ಶಿಕ್ಷೆ ಇಲ್ಲ, ಗುಂಡಿಟ್ಟು ನೇರವಾಗಿ ಮೇಲಿರುವ ಜನ್ನತ್ತಿಗೆ ಕಳಿಸಲಾಗುತ್ತದೆ ಎಂದು ಹರಿಹಾಯ್ದರು.
ದೇಶದಲ್ಲಿ ಪಾಕ್ ಪರ ಘೋಷಣೆ ಕೂಗುವ ವ್ಯಕ್ತಿಗಳನ್ನು ಸಮರ್ಥಿಸುವಂತೆ ಹೇಳಿಕೆ ನೀಡುತ್ತಿರುವ ಎಚ್. ಎಸ್ ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಪಾಕ್ ಏಜೆಂಟ್ ಎಂದು ಟೀಕಾ ಪ್ರಹಾರ ನಡೆಸಿದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೋದಿ, ಅಮಿತ್ ಶಾ ಪಾಲ್ಗೊಂಡಿದ್ದಾರೆಯೇ ಎಂದು ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಯತ್ನಾಳ, ಸೋನಿಯಾ ಗಾಂಧಿ, ಸಿದ್ಧರಾಮಯ್ಯ ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದರೆ? ಅಟಲ್ ಬಿಹಾರಿ ವಾಜಪೇಯಿ ಅವರಂಥ ನಾಯಕರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿರಲಿಲ್ಲವೇ ಎಂದು ಪ್ರಶ್ನಿಸಿದರು.
ಇಷ್ಟಕ್ಕೂ ನೇತಾಜಿ ಭೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರಧಾನಿ ಆಗಿದ್ದರೆ ಪಾಕ್ ಎಂಬ ಅಕ್ರಮ ಸಂತಾನ ಹುಟ್ಟುತ್ತಲೇ ಇರಲಿಲ್ಲ. ತಮ್ಮ ಮಗನನ್ನು ಪ್ರಧಾನಿ ಮಾಡುವ ಮೋತಿಲಾಲ್ ನೆಹರು ಸ್ವಾರ್ಥಕ್ಕಾಗಿ ಪಾಕ್ ಎಂಬ ಬಚ್ಚಾ ಹುಟ್ಟಿಕೊಂಡಿತು ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ