ಶಿಕ್ಷಕರಿಗೆ ಬೇಡ ಅನಗತ್ಯ ಹೊಣೆ


Team Udayavani, Sep 30, 2018, 2:35 PM IST

vij-1.jpg

ಮುದ್ದೇಬಿಹಾಳ: ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಹೊಣೆ ಹೊತ್ತಿರುವ ಶಿಕ್ಷಕರನ್ನು ಇತರೆ ಚಟುವಟಿಕೆಗಳಿಂದ ಮುಕ್ತಗೊಳಿಸುವುದು ಅವಶ್ಯವಿದೆ ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಸರೂರು ಗ್ರಾಮದ ಗುರು ರೇವಣಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಡಾ|ಎಸ್‌.ರಾಧಾಕೃಷ್ಣನ್‌ ಜಯಂತಿ, ನಿವೃ ತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬದಲಾಗುತ್ತಿರುವ ಆಧುನಿಕ ಶಿಕ್ಷಣ ವ್ಯವಸ್ಥೆಗೆ ಸರ್ಕಾರಿ ಶಿಕ್ಷಕರು ಹೊಂದಿಕೊಳ್ಳಬೇಕು. ಟೀಕೆಗಳನ್ನು ಸ್ವೀಕರಿಸಬೇಕು. ಟೀಕಿಸುವವರು ಇದ್ದುದರಿಂದಲೇ ಮನುಷ್ಯ ಕ್ರಿಯಾಶೀಲವಾಗಿ ಕೆಲಸ ಮಾಡುವುದು ಸಾಧ್ಯವಾಗುತ್ತದೆ ಎಂದರು.

ದೈಹಿಕ ಶಿಕ್ಷಣಾಧಿಕಾರಿ ಎಸ್‌.ಬಿ. ಚಲವಾದಿ ಪ್ರಾಸ್ತಾವಿಕ ಮಾತನಾಡಿ, ಗುರು ದೇವರಾಗುತ್ತಾನೆ. ಗುರುವಾಗುವ ಶಕ್ತಿ ನೀಡಿದ ದೇವರನ್ನು ನಾವೆಲ್ಲ ಸ್ಮರಿಸಬೇಕು ಎಂದರು. ತಳೇವಾಡ ಸರ್ಕಾರಿ ಪ್ರೌಢಶಾಲೆ ಮುಖ್ಯಾಧ್ಯಾಪಕ ಸಂಗಮೇಶ ಪೂಜಾರಿ ವಿಶೇಷ ಉಪನ್ಯಾಸ ನೀಡಿದರು. ವೇದಮೂರ್ತಿಗಳಾದ ಸಿದ್ದಯ್ಯ ಗುರುವಿನ್‌, ಕರಿಸಿದ್ದಯ್ಯ ಗುರುವಿನ್‌ ದಿವ್ಯಸಾನ್ನಿಧ್ಯ, ಗ್ರಾಪಂ ಅಧ್ಯಕ್ಷೆ ಕಮಲಾಬಾಯಿ ರಾಠೊಡ ಅಧ್ಯಕ್ಷತೆ ವಹಿಸಿದ್ದರು.

ತಾಪಂ ಅಧ್ಯಕ್ಷೆ ಚನ್ನಮ್ಮ ತಂಗಡಗಿ, ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ಜಿಪಂ ಸದಸ್ಯೆ ಪದ್ಮಾವತಿ ವಾಲಿಕಾರ, ಕಣಕಾಲ ಗ್ರಾಮೀಣ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್‌.ವೈ.ಬ್ಯಾಲ್ಯಾಳ, ಜಿಲ್ಲಾ ಸಹಕಾರಿ ಯೂನಿಯನ್‌ ನಿರ್ದೇಶಕ ಸೋಮನಗೌಡ ಬಿರಾದಾರ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸಂಗಮೇಶ ಹೊಲ್ದೂರ, ಶಿಕ್ಷಕರ ದಿನಾಚರಣೆ ಸಮಿತಿ ಅಧ್ಯಕ್ಷ ತಾಪಂ ಇಓ ಡಾ.ಎಸ್‌.ವೈ.ಭಜಂತ್ರಿ, ಉಪಾಧ್ಯಕ್ಷ ತಹಶೀಲ್ದಾರ್‌ ಎಂ.ಎ.ಎಸ್‌. ಬಾಗವಾನ, ಕಾರ್ಯದರ್ಶಿ ಬಿಇಒ ಎಸ್‌.ಡಿ. ಗಾಂಜಿ, ಬಿಆರ್‌ಸಿಸಿ ಎಂ.ಎಂ. ಬೆಳಗಲ್ಲ, ರೇವಣಸಿದ್ದೇಶ್ವರ ಪ್ರೌಢಶಾಲೆ ಮುಖ್ಯಾಧ್ಯಾಪಕ ಪಿ.ಬಿ. ಕುಂಟರಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್‌.ಆರ್‌.ಕಟ್ಟಿಮನಿ, ಸ್ಥಳೀಯ ಗಣ್ಯವ್ಯಕ್ತಿ ಬಿ.ಜಿ. ಗೋಗಿ, ಪಿಡಿಒ ಖೂಬಾಸಿಂಗ್‌ ಜಾಧವ, ಶಿಕ್ಷಕರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಾದ ಎಸ್‌.ಎಸ್‌. ಬಾಣಿ, ಬಾಲಚಂದ್ರ

ನಡುವಿನಮನಿ, ಬಸಯ್ಯ ಹಿರೇಮಠ, ಕೆ.ಎಂ.ಇಬ್ರಾಹಿಂಪುರ, ಮುರುಗೇಶ ಹೊಕ್ರಾಣಿ, ಶಿವು ಬಿರಾದಾರ, ಕೆ.ಬಿ. ಸಜ್ಜನ, ಎಸ್‌.ಆರ್‌. ಸುಲ್ಪಿ, ಎನ್‌.ಎ. ತೊಂಡಿಹಾಳ, ಎಂ.ವೈ. ಗೌಂಡಿ, ಎಂ.ಎಸ್‌. ಬಿರಾದಾರ, ಬಿ.ಎಸ್‌. ಪಾಟೀಲ, ಟಿ.ಎಸ್‌. ಲಮಾಣಿ, ಅಶೋಕ ದಡ್ಡಿ ವೇದಿಕೆಯಲ್ಲಿದ್ದರು. ನಿವೃತ್ತ ಮುಖ್ಯಾಧ್ಯಾಪಕರಾದ ಅಶೋಕ ಮಣಿ, ಜಿ.ಎಸ್‌. ಅಥರ್ಗಾ, ಎಸ್‌.ಬಿ. ಕಿತ್ತೂರ, ಎಸ್‌.ಎ. ಹಾವರಗಿ, ವಿ.ಡಿ. ಐಹೊಳ್ಳಿ ಸೇರಿದಂತೆ ನಿವೃತ್ತ ಶಿಕ್ಷಕರನ್ನು, ದಾನಿಗಳನ್ನು ಸನ್ಮಾನಿಸಲಾಯಿತು. 

ಸಂಗೀತ ಶಿಕ್ಷಕ ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿ ನಾಡಗೀತೆ ಹಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಂ. ಬೆಳಗಲ್ಲ ಸ್ವಾಗತಿಸಿದರು. ಸಿಆರ್‌ಪಿ ಟಿ.ಡಿ. ಲಮಾಣಿ ಮತ್ತು ಶಿಕ್ಷಕ ಸಿದ್ದನಗೌಡ ಬಿಜೂರ ನಿರೂಪಿಸಿದರು. ಕಾರ್ಯಕ್ರಮಕ್ಕೆ ಬರುವ ಶಿಕ್ಷಕರಿಗಾಗಿ ವಿವಿಧೆಡೆಯಿಂದ ಖಾಸಗಿ ಶಾಲೆಗಳ ಶಾಲಾ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಗ್ರಾಮದ ಪ್ರಮುಖ ರಸ್ತೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಕಾರ್ಯಕ್ರಮ ಸ್ಥಳದಲ್ಲಿ ಶಿಕ್ಷಕರು ಮತ್ತು ಶಿಕ್ಷಕ ವೃತ್ತಿಯ ಮಹತ್ವ ಸಾರುವ ಬರಹಗಳಿದ್ದ ಫಲಕಗಳನ್ನು ಪ್ರದರ್ಶಿಸಲಾಗಿತ್ತು.

ಕೆಲ ಶಾಲೆಗಳಿಗೆ ನೋಟಿಸ್‌: ಮುದ್ದೇಬಿಹಾಳ ಪಟ್ಟಣದ ಸಂತ ಕನಕದಾಸ ಸೇರಿದಂತೆ ಕೆಲ ಖಾಸಗಿ ಶಾಲೆಗಳು ಬಿಇಒ ಕಚೇರಿ ಆದೇಶ ಉಲ್ಲಂಘಿಸಿವೆ. ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಿಕ್ಷಕರನ್ನೂ ಕಳಿಸಿಲ್ಲ, ಶಾಲೆಗೆ ರಜೆಯನ್ನೂ ಕೊಟ್ಟಿಲ್ಲ. ಇಂಥ ಶಾಲೆಗಳ ಪಟ್ಟಿ ಮಾಡಿ ಆಯಾ ಶಾಲೆಗಳ ಮುಖ್ಯಾಧ್ಯಾಪಕರಿಗೆ ನೋಟಿಸ್‌ ಜಾರಿಗೊಳಸಲಾಗುತ್ತದೆ ಎಂದು ಬಿಇಒ ಎಸ್‌.ಡಿ. ಗಾಂಜಿ ತಿಳಿಸಿದ್ದಾರೆ.

ತಾಲೂಕಿನ ಹಲವು ಸರ್ಕಾರಿ ಶಾಲೆಗಳು ದುಸ್ಥಿತಿಯಲ್ಲಿವೆ. ಮಕ್ಕಳಿಗೆ ಮೂಲಸೌಕರ್ಯ ಕೊರತೆ ಇದೆ. ಇವೆಲ್ಲವುಗಳ ಪರಿಹಾರಕ್ಕೆ 12.74 ಕೋಟಿ ರೂ. ಮೊತ್ತದ ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಬೇಡಿಕೆ ಮಂಡಿಸಿದ್ದು ಶಿಕ್ಷಣ ಸಚಿವರನ್ನೂ ಭೇಟಿ ಮಾಡಿ ಚರ್ಚಿಸಲಾಗಿದೆ. ಈ ಬಗ್ಗೆ ಇನ್ಸ್‌ಪೆಕ್ಷನ್‌ ನಡೆಸುವಂತೆ ಸಚಿವರಿಗೆ ಆಹ್ವಾನ ನೀಡಲಾಗಿದೆ. ಸಚಿವರು ಮುಂದಿನ ತಿಂಗಳು ಈ ತಾಲೂಕಿಗೆ ಬರುವ ನಿರೀಕ್ಷೆಯಿದೆ. 
ಎ.ಎಸ್‌. ಪಾಟೀಲ ನಡಹಳ್ಳಿ, ಶಾಸಕ

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.