Vijayapura ದಲಿತರಿಗೆ ಯಾರೂ ಬೆಂಬಲಿಸಲ್ಲ: ಸಂಸದ ರಮೇಶ ಜಿಗಜಿಣಗಿ
Team Udayavani, Nov 13, 2023, 8:27 PM IST
ವಿಜಯಪುರ: ಕಳೆದ 75 ವರ್ಷಗಳಿಂದ “ದೊಡ್ಡ ದೊಡ್ಡ ಗೌಡರು-ಸಾಹುಕಾರರಿಗೆ ’ ಕೈ ಎತ್ತಿಕೊಂಡೇ ಬಂದಿದ್ದೇವೆ. ಆದರೆ ಅಧಿಕಾರ ನೀಡುವ ಹಂತದಲ್ಲಿ ದಲಿತರಿಗೆ ಯಾರೂ ಬೆಂಬಲಿಸಲ್ಲ ಎಂದು ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ಹೊರಹಾಕಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮಗನನ್ನೇ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕೆಂದು ಪಕ್ಷ ನಿರ್ಣಯಿಸಿದೆ. ಇದರಿಂದಾಗಿ ನಮಗೇನೂ ಹೊಟ್ಟೆಯುರಿ ಇಲ್ಲ. ನಾನೇನು ಬಿಜೆಪಿ ರಾಜ್ಯಾಧ್ಯಕ್ಷ ಆಗಬೇಕೆಂದು ಅಂದುಕೊಂಡು ಕನಸು ಕಂಡವನಲ್ಲ. ದಲಿತರಾದ ನಾವು ಅಂಥ ಕನಸು ಕಾಣಲ್ಲ ಎಂದು ಹೇಳಿದರು.
ಅಸೆಂಬ್ಲಿಯಲ್ಲಿ, ಲೋಕಸಭೆಯಲ್ಲಿ ಕಳೆದ 75 ವರ್ಷಗಳಿಂದ ನೋಡುತ್ತ ಬಂದಿದ್ದೇವೆ. ಶ್ರೀಮಂತರು, ಗೌಡರಿಗಾಗಿ ದಲಿತರು ಕೈ ಎತ್ತುತ್ತಲೇ ಬಂದಿದ್ದೇವೆ. ದಲಿತರಾದ ನಮ್ಮ ಪರ ಯಾರಿದ್ದಾರೆ, ನಮಗಾಗಿ ಯಾರೂ ಕೈ ಎತ್ತಲು ಸಿದ್ಧರಿಲ್ಲ ಎಂದರು.
ಸತತ ಆರು ಬಾರಿ ಸಂಸದ, ಮೂರು ಬಾರಿ ಶಾಸಕರಾಗಿ, ರಾಜ್ಯ-ಕೇಂದ್ರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿರುವ ನಮ್ಮನ್ನು ದಲಿತರು ಎಂಬ ಕಾರಣಕ್ಕೆ ಅಧಿಕಾರದಿಂದ ಹೊರಗಿಡಲಾಗಿದೆ ಎಂದೂ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು