ಫೋನ್‌ ಕದ್ದಾಲಿಕೆ ಬಗ್ಗೆ ನಿಖರ ಮಾಹಿತಿ ಇಲ್ಲ


Team Udayavani, Aug 18, 2019, 5:15 AM IST

MB

ವಿಜಯಪುರ: ಫೋನ್‌ ಕದ್ದಾಲಿಕೆ ಸುಲಭವಲ್ಲ. ದೇಶದ್ರೋಹಿ, ಸಮಾಜ ಘಾತುಕ ಶಕ್ತಿಗಳ ನಿಗ್ರಹ, ಭಯೋತ್ಪಾದಕ ಕೃತ್ಯಗಳ ಮೇಲೆ ನಿಗಾ ಹಾಗೂ ಆದಾಯ ತೆರಿಗೆ ವಂಚನೆ ಕೃತ್ಯಗಳನ್ನು ಪತ್ತೆ ಹಚ್ಚಲು ಅನುಮತಿ ಪಡೆದು ಟೆಲಿಫೋನ್‌ ಕದ್ದಾಲಿಕೆ ಮಾಡಲಾಗುತ್ತದೆ. ಆದರೆ, ಫೋನ್‌ ಕದ್ದಾಲಿಕೆ ನಡೆದಿರುವ ಕುರಿತು ನನಗೆ ನಿಖರ ಮಾಹಿತಿ ಇಲ್ಲ ಎಂದು ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಇಲಾಖೆ ಕೆಲವು ಅಧಿಕಾರಿಗಳನ್ನು ಈ ಕುರಿತು ಕೇಳಿದಾಗ ಕೆಲವರು ಹೌದು ಎಂದರೆ, ಮತ್ತೆ ಕೆಲವರು ಇಲ್ಲ ಎಂದಿದ್ದಾರೆ. ಸಾರ್ವಜನಿಕ ವಲಯದಲ್ಲಿ ಮಾಧ್ಯಮಗಳ ಮೂಲಕ ನಡೆಯುತ್ತಿರುವ ಈ ಗಂಭೀರ ವಿಷಯ ಕುರಿತು ತನಿಖೆಯಿಂದ ಸಂಪೂರ್ಣ ಸತ್ಯ ಹೊರ ಬರಬೇಕಿದೆ ಎಂದರು.

ಯಾರೂ ನನ್ನೊಂದಿಗೆ ಚರ್ಚಿಸಿಲ್ಲ: ನಾನು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಫೋನ್‌ ಟ್ಯಾಪ್‌ ಕುರಿತು ಅಧಿಕಾರಿಗಳು ಸೇರಿ ಯಾರೂ ನನ್ನೊಂದಿಗೆ ಫೋನ್‌ ಕದ್ದಾಲಿಕೆ ಕುರಿತು ಚರ್ಚಿಸಿಲ್ಲ. ಯಾವುದೇ ಫೋನ್‌ ಕದ್ದಾಲಿಕೆಗೆ ಯಾವುದೇ ಅಧಿಕಾರಿಗೆ ಸೂಚಿಸಿಲ್ಲ. ನೈತಿಕತೆ ಇರಿಸಿಕೊಂಡಿರುವ ನಾನು ಇತರರ ಖಾಸಗಿತನ ಗೌರವಿಸುವ ವ್ಯಕ್ತಿ ಎಂದರು.

ಸತ್ಯಾಸತ್ಯತೆ ಹೊರಬರಲಿ: ಮುಖಮಂತ್ರಿ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರ ಕುರಿತು ನಾನು ಮಾತನಾಡಿಲ್ಲ. ನಾನು ಗೃಹ ಸಚಿವನಾಗಿದ್ದ ಸಂದರ್ಭದಲ್ಲಿ ನನ್ನ ಆಪ್ತ ಕಾರ್ಯದರ್ಶಿಯಾಗಿದ್ದ ಭೀಮಾಶಂಕರ ಹಾಗೂ ವಿಶೇಷ ಅಧಿಕಾರಿಯಾಗಿದ್ದ ಶಶಿ ಹಿರೇಮಠ ಅವರ ಫೋನ್‌ ಕದ್ದಾಲಿಕೆ ಕುರಿತು ವರದಿಗಳಾಗಿರುವ ಕಾರಣ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.

ಸಿಬಿಐಗೆ ವಹಿಸುವುದು ಬೇಡ: ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದು ಬೇಡ. ದೇಶದ ಹಲವು ಪ್ರಕರಣಗಳ ತನಿಖೆ ನಡೆಸಿರುವ ಸಿಬಿಐ ಏನು ತನಿಖೆ ಮಾಡಿದೆ ಎಂದು ಎಲ್ಲರಿಗೂ ಗೊತ್ತಿದೆ. ಕರ್ನಾಟಕದ ಪೊಲೀಸರು ಗೌರಿ ಲಂಕೇಶ, ಡಾ| ಎಂ.ಎಂ. ಕಲಬುರ್ಗಿ ಹತ್ಯೆಯಂತಹ ಕಠಿಣ ಸವಾಲು ಎನಿಸಿದ್ದ ಪ್ರಕರಣಗಳನ್ನು ಸಮರ್ಥವಾಗಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ರಾಜ್ಯದ ಉನ್ನತಮಟ್ಟದ ಪೊಲೀಸ್‌ ಅಧಿಕಾರಿಗಳಿಂದ ತನಿಖೆ ನಡೆಸಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.