ಅತಿಕ್ರಮಣ ಸ್ವಯಂ ತೆರವಿಗೆ ಸೂಚನೆ


Team Udayavani, Mar 23, 2022, 5:38 PM IST

24shops

ಮುದ್ದೇಬಿಹಾಳ: ಪಟ್ಟಣದ ಬಸವೇಶ್ವರ ವೃತ್ತದಿಂದ ಇಂದಿರಾ ವೃತ್ತದವರೆಗೆ ಪ್ರಗತಿಯಲ್ಲಿರುವ ಅಂದಾಜು 5 ಕೋಟಿ ರೂ. ಅನುದಾನದ ಮುಖ್ಯ ರಸ್ತೆಯನ್ನು ಸಿಮೆಂಟ್‌ ಕಾಂಕ್ರೀಟ್‌ ರಸ್ತೆಯಾಗಿ ಪರಿವರ್ತಿಸುವ ಕಾಮಗಾರಿಗೆ ಅಡ್ಡಿಯಾಗಿರುವ ಅತಿಕ್ರಮಣದ ಭಾಗವನ್ನು ಮತ್ತು ಡಬ್ಟಾ ಅಂಗಡಿಗಳನ್ನು ಆಯಾ ಅಂಗಡಿಕಾರರು ಸ್ವಯಂಪ್ರೇರಿತರಾಗಿ ತೆರವುಗೊಳಿಸಿಕೊಳ್ಳಬೇಕು. ಇಲ್ಲದಿದ್ದರೆ ಪುರಸಭೆಯಿಂದ ತೆರವುಗೊಳಿಸುವ ವೇಳೆ ಸಂಭವಿಸುವ ಹಾನಿಗೆ ಪುರಸಭೆ ಜವಾಬ್ದಾರಿ ಆಗುವುದಿಲ್ಲ ಎಂದು ಪುರಸಭೆ ಆಡಳಿತ ಮಂಡಳಿ ಅಂಗಡಿಕಾರರಿಗೆ, ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಿದೆ.

ಮಂಗಳವಾರ ಪಟ್ಟಣದ ಇಂದಿರಾ ವೃತ್ತದಿಂದ ಪ್ರಾರಂಭಗೊಂಡಿರುವ ಸಿಸಿ ರಸ್ತೆ ಕಾಮಗಾರಿಯ ಪರಿಶೀಲನೆ ವೇಳೆ ಪುರಸಭೆ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವು ಶಿವಪುರ, ಸದಸ್ಯರಾದ ಸದಸ್ಯರಾದ ಮಹೆಬೂಬ ಗೊಳಸಂಗಿ, ರಿಯಾಜ್‌ ಢವಳಗಿ, ಯಲ್ಲಪ್ಪ ನಾಯಕಮಕ್ಕಳ, ರಾಜಶೇಖರ ಹೊನ್ನುಟಗಿ, ಪ್ರಭಾರ ಮುಖ್ಯಾ ಧಿಕಾರಿ ಸುರೇಖಾ ಬಾಗಲಕೋಟ ಅವರ ತಂಡ ಕಾಮಗಾರಿ ಪರಿಶೀಲನೆಗೆ ಆಗಮಿಸಿದ ವೇಳೆ ಈ ಎಚ್ಚರಿಕೆ ನೀಡಿದರು.

ಮುಖ್ಯ ಬಜಾರ್‌ನಲ್ಲಿರುವ ಸರ್ಕಾರಿ ಹೆಣ್ಣು ಮಕ್ಕಳ ಶಾಲೆ ನಂಬರ್‌-2 ಮುಂದೆ, ಹಳೇಯ ಕೋರ್ಟ್‌ ಹತ್ತಿರ ಮತ್ತು ಇತರೆ ಕಡೆಗಳಲ್ಲಿ ಕೆಲವರು ಡಬ್ಟಾ ಅಂಗಡಿಗಳನ್ನು ಅನಧಿಕೃತವಾಗಿ ಇಟ್ಟುಕೊಂಡಿದ್ದಾರೆ. ಪುರಸಭೆಯ ಜಾಗೆಯಲ್ಲಿ ಇಟ್ಟುಕೊಂಡಿರುವ ಈ ಅಂಗಡಿಗಳಿಗೆ ಪುರಸಭೆಯಿಂದ ಯಾವುದೇ ಅನುಮತಿ ನೀಡಿಲ್ಲ. ಈಗ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಈ ಡಬ್ಟಾ ಅಂಗಡಿಗಳು ಅಡ್ಡಿ ಒಡ್ಡುತ್ತಿವೆ. ಇವುಗಳನ್ನು ಸ್ವಯಂ ಪ್ರೇರಿತರಾಗಿ ತೆರವುಗೊಳಿಸಿಕೊಂಡು ಅಭಿವೃದ್ಧಿ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದರು.

ಈ ವೇಳೆ ಸರ್ಕಾರಿ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕರು ಪುರಸಭೆ ಆಡಳಿತ ಮಂಡಳಿಯವರನ್ನು ಭೇಟಿ ಮಾಡಿ ಶಾಲೆಯ ಮುಂದೆ ಇಟ್ಟಿರುವ ಡಬ್ಟಾ ಅಂಗಡಿಗಳನ್ನು ಪುರಸಭೆಯವರೇ ಮುಂದೆ ನಿಂತು ತೆರವುಗೊಳಿಸಿಕೊಳ್ಳಬೇಕು. ಈ ಹಿಂದೆ ಡಬ್ಟಾ ಅಂಗಡಿಗಳಿಂದ ಶಾಲೆಯ ಕಲಿಕಾ ಚಟುವಟಿಕೆಗಳಿಗೆ ತೊಂದರೆ ಆಗುತ್ತದೆ, ಅಂಗಡಿ ಇಡಬೇಡಿ ಎಂದು ಹಲವು ಬಾರಿ ಮನವಿ ಮಾಡಿಕೊಂಡರೂ ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಶಾಲೆಯ ಕಲಿಕಾ ಚಟುವಟಿಕೆಗಳಿಗೆ, ಮಕ್ಕಳಿಗೆ ತೊಂದರೆ ಒಡ್ಡುತ್ತಿರುವ ಡಬ್ಟಾ ಅಂಗಡಿಗಳನ್ನು ತೆರವುಗೊಳಿಸುವಂತೆ ಈಗಾಗಲೇ ಪುರಸಭೆಗೆ ಲಿಖೀತ ಮನವಿ ಕೊಡಲಾಗಿದೆ. ಆದರೂ ಪುರಸಭೆಯವರು ಗಂಭೀರವಾಗಿ ಪರಿಗಣಿಸಿಲ್ಲ. ಈಗ ರಸ್ತೆ ಕಾಮಗಾರಿ ನಡೆದಿದ್ದು ಈಗಲಾದರೂ ಡಬ್ಟಾ ಅಂಡಗಿ ತೆರವುಗೊಳಿಸಿ ಮಕ್ಕಳ ಕಲಿಕಾ ಚಟುವಟಿಕೆಗೆ ಅನುಕೂಲ ಮಾಡಿಕೊಡಬೇಕು ಎಂದು ಕೋರಿದರು. ಇದಕ್ಕೆ ಸ್ಪಂದಿಸಿದ ಆಡಳಿತ ಮಂಡಳಿಯವರು ಇನ್ನೊಮ್ಮೆ ಲಿಖೀತ ಅರ್ಜಿ ಕೊಡುವಂತೆ ಮುಖ್ಯಾಧ್ಯಾಪಕರಿಗೆ ತಿಳಿಸಿದರು.

ಕಾಂಗ್ರೆಸ್‌ ಮುಖಂಡ ರುದ್ರಗೌಡ ಅಂಗಡಗೇರಿ, ಪುರಸಭೆ ಕಂದಾಯ ಅಧಿಕಾರಿ ಭಾರತಿ ಮಾಡಗಿ, ಆರೋಗ್ಯ ನಿರೀಕ್ಷಕ ಮಹಾಂತೇಶ ಕಟ್ಟಿಮನಿ, ಗುತ್ತಿಗೆದಾರ ರಾಜುಗೌಡ ಪಾಟೀಲ ಐನಾಪುರ ಸೇರಿ ಹಲವರು ಇದ್ದರು.

ಪುರಸಭೆ ಆಡಳಿತ ಕಾಮಗಾರಿ ಪರಿಶೀಲನೆಗೆ ಬಂದ ಸಂದರ್ಭ ಹಲವು ಅಂಗಡಿಕಾರರು ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. ಆದರೆ ಅಭಿವೃದ್ಧಿ ಕೆಲಸ ನಡೆದಾಗ ಎಲ್ಲರೂ ಸಹಕರಿಸಬೇಕು ಎನ್ನುವ ನಿಲುವನ್ನು ಆಡಳಿತ ಮಂಡಳಿ ತಳೆದಿದ್ದರಿಂದ ಯಾವುದೇ ಭರವಸೆ ಸಿಗದೆ ನಿರಾಶರಾದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.