ಮತದಾನ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚನೆ


Team Udayavani, Mar 11, 2019, 7:17 AM IST

vij-1.jpg

ವಿಜಯಪುರ: ಲೋಕಸಭಾ ಚುನಾವಣೆಯಲ್ಲಿ ಮತದಾನ ಚಲಾಯಿಸುವ ಹಕ್ಕು ನೀಡಲು 18 ವರ್ಷ ಪೂರೈಸಿರುವ ನೂತನ ಯುವ ಮತದಾರರನ್ನು ಗುರುತಿಸುವ ಕೆಲಸವಾಗಬೇಕಿದೆ. ಇದಲ್ಲದೇ ಮತದಾರರ ಚೀಟಿ ಹೊಂದಿರುವ ಪ್ರತಿಯೊಬ್ಬ ಮತದಾರ ಮುಂದಿನ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಲು ಪ್ರೇರೇಪಿಸಬೇಕಿದೆ ಎಂದು ಸ್ವೀಪ್‌ ಸಮಿತಿ ಅಧ್ಯಕ್ಷ ವಿಕಾಸ ಸುರಳಕರ ಸೂಚಿಸಿದರು.

ನಗರದ ಜಿಪಂ ಸಿಇಒ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಸ್ವೀಪ್‌ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವ ಕುರಿತಂತೆ ಜಿಲ್ಲೆಯ ಶಾಲಾ-ಕಾಲೇಜ್‌ ವಿದ್ಯಾರ್ಥಿಗಳ ಜಾಗೃತಿ ಜಾಥಾ ಹಮ್ಮಿಕೊಳ್ಳಬೇಕು. ಮಾನವ ಸರಪಳಿ ನಿರ್ಮಾಣ, ಸೈಕಲ್‌ ರ್ಯಾಲಿ, ದ್ವಿಚಕ್ರ ವಾಹನಗಳ ಜಾಥಾ, ಸಂಚಾರಿ ವಾಹನಗಳ ಮೂಲಕ ಪ್ರಚಾರ ಕಾರ್ಯಕ್ರಮ ವಿವಿಧ ವಾಹನಗಳ ಮೇಲೆ ಮತದಾನ ನೋಂದಣಿ ಮತ್ತು ಮತದಾನ ಮಾಡುವ ಕುರಿತ ಪೋಸ್ಟರ್‌ ಹಾಗೂ ಸ್ಟೀಕರ್‌ ಅಳವಡಿಕೆ, ಜನನಿಬಿಡ ಪ್ರದೇಶಗಳಲ್ಲಿ ಜಿಂಗಲ್ಸ್‌ಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಈವರೆಗೆ ಮತದಾರ ಪಟ್ಟಿಯಲ್ಲಿ ನೋಂದಣಿಯಾಗದೇ ಇರುವ ಮತದಾರರನ್ನು ಗುರುತಿಸಬೇಕು. ಅದರಂತೆ 18 ವರ್ಷ ಪೂರೈಸಿದ ಯುವ ಮತದಾರರ ನೋಂದಣಿಗೆ ಅವಕಾಶ ಕಲ್ಪಿಸಬೇಕು. ಪಪೂ, ಪದವಿ ಕಾಲೇಜುಗಳಲ್ಲಿ ಯುವ ಮತದಾರರ ನೋಂದಣಿಗೆ ಪ್ರೋತ್ಸಾಹಿಸಿ, ಚುನಾವಣೇ ಸಂದರ್ಭದಲ್ಲಿ ಕಡ್ಡಾಯ ಮತದಾನ ಮಾಡುವ ಕುರಿತು ಮನವರಿಕೆ ಮಾಡಿಕೊಡಬೇಕು. ಮತ ಚಲಾಯಿಸುವ ಕುರಿತು ಸ್ಥಳೀಯ ಸಂಸ್ಥೆಗಳ ಕಸ ಸಂಗ್ರಹಣಾ ವಾಹನ ಸೇರಿದಂತೆ ಇತರೆ ವಾಹನದ ಮೂಲಕ ಆಡಿಯೋ ಮೂಲಕ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಇದಲ್ಲದೇ ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ಜಾತ್ರೆಗಳು, ಸಂತೆಗಳು ವಿವಿಧ ವೃತ್ತಗಳ ಪಟ್ಟಿ ಮಾಡಿಕೊಂಡು ಆ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮ ರೂಪಿಸಬೇಕು. ಸಾಕ್ಷé ಚಿತ್ರ ಸಿದ್ಧಪಡಿಸಿ ಜನರಿಗೆ ಪ್ರದರ್ಶಿಸಬೇಕು. ವಿವಿಧ ಸಮೂಹ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನೀಡಲಾಗಿರುವ  ಜವಾಬ್ದಾರಿಗಳನ್ವಯ ಕ್ರಿಯಾಯೋಜನೆ ಸಿದ್ಧಪಡಿಸುವ ಜೊತೆಗೆ ಖರ್ಚು ವೆಚ್ಚಗಳ ಮಾಹಿತಿ ಒದಗಿಸುವಂತೆ ಸೂಚಿಸಿದರು.

ಅದರಂತೆ ಜಿಲ್ಲೆಯಲ್ಲಿರುವ ದಿವ್ಯಾಂಗ ಮತದಾರರನ್ನು ಗುರುತಿಸಲು ಸಮೀಕ್ಷೆ ನಡೆಸಬೇಕು. ಕಳೆದ ಚುನಾವಣೆಗಳಲ್ಲಿ ಅತಿ ಕಡಿಮೆ ಮತದಾನವಾಗಿರುವ ಮತಗಟ್ಟೆವಾರು ಜಾಗೃತಿಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿನ ದಿವ್ಯಾಂಗ ಮತದಾರರು, ಮತದಾರರ ಪಟ್ಟಿಯಿಂದ ಹೊರಗೆ ಉಳಿದ ಮತದಾರ ಪಟ್ಟಿಗೆ ಸೇರಿಸಲು ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರು, ಸರ್ಕಾರೇತರ ಸಂಘ-ಸಂಸ್ಥೆಗಳ ಸಹಕಾರ ಪಡೆಯಬೇಕು. ಅಲ್ಲದೇ ಅವರ ದೂರವಾಣಿ ಸಂಖ್ಯೆ ಸಹಿತ ಮಾಹಿತಿ ಸಿದ್ಧಪಡಿಸಿ ಇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
 
ಜಿಲ್ಲೆಯ ವಿವಿಧ ಹಾಸ್ಟೆಲ್‌ಗ‌ಳ ವ್ಯಾಪ್ತಿಯಲ್ಲಿ, ವಿವಿಧ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಮತಯಂತ್ರ ಮತ್ತು ವಿವಿ ಪ್ಯಾಟ್‌ ಕುರಿತಂತೆ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಂಡು ಸೂಕ್ತ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಕೈಗೊಳ್ಳಲಾಗುವ ಕಾರ್ಯಕ್ರಮಗಳ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಿದರು. ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಯೋಜನಾಧಿಕಾರಿ ಕುಂಬಾರ ಸೇರಿದಂತೆ ಜಿಲ್ಲಾ ಸ್ವೀಪ್‌ ಸಮಿತಿ ಸದಸ್ಯರುಗಳಾದ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.