ಬರ ಕಾಮಗಾರಿ ನಿರ್ವಹಣೆಗೆ ಸೂಚನೆ
Team Udayavani, Jul 5, 2017, 1:37 PM IST
ವಿಜಯಪುರ: ಬರ ನಿರ್ವಹಣೆ ಮತ್ತು ನೀರಿನ ಕೊರತೆ ಎದುರಿಸಲು ಸಂಬಂಧಪಟ್ಟ ಇಲಾಖೆಯಲ್ಲಿರುವ
ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಬೇಕು. ನಿಖರ ಮಾಹಿತಿ ಸಂಗ್ರಹಿಸಿ ಮುಂದಿನ ಯೋಜನೆಗಳ
ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬರ ಹಾಗೂ ನೀರಿನ ಕೊರತೆ ಎದುರಿಸುತ್ತಿರುವ
ಜಿಲ್ಲೆಯಲ್ಲಿ ಕೇಂದ್ರದ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾ ಕ್ರಿಯಾಯೋಜನೆ ರಚಿಸುವ ಜಿಲ್ಲಾಮಟ್ಟದ ತಾಂತ್ರಿಕ
ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಗಾರು ಬಿತ್ತನೆ ಆರಂಭವಾಗಿರುವುದರಿಂದ
ಯಾವ ಬೆಳೆಗೆ ಎಷ್ಟು ನೀರಿನ ಅಗತ್ಯವಿದೆ ಎಂಬುವುದು ಅರಿತುಕೊಳ್ಳಬೇಕು. ಕೊಳವೆ ಬಾವಿ, ಕಾಲುವೆ ಸೇರಿದಂತೆ
ಮುಂತಾದ ನೀರಿನ ಮೂಲಗಳ ಮೂಲಕ ಬೆಳೆಗಳಿಗೆ ಅಗತ್ಯಾನುಸಾರ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು.
ಬ್ಲಾಕ್ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಮುಂದಿನ ಸಭೆಯಲ್ಲಿ ಪರಿಶೀಲನೆ ನಡೆಸಿ ಮುಂದಿನ ಯೋಜನೆ
ರೂಪಿಸಲಾಗುವುದು ಎಂದು ಹೇಳಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಭೆಗೆ ಮಾಹಿತಿ ನೀಡಿ, ರಾಜ್ಯದ 16 ಬರಪೀಡಿತ ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆಯೂ ಸೇರಿದೆ. ಕೃಷಿಯ ಸ್ಥಿರತೆ, ಅಂತರ್ಜಲ ಅಭಿವೃದ್ಧಿ, ಕಾಲುವೆ ನಿರ್ಮಾಣ, ಕೃಷಿ ಹೊಂಡ, ಸಣ್ಣ ನೀರಾವರಿ, ನೀರಿನ ಪೋಲು ತಡೆಗಟ್ಟುವಿಕೆ, ಮುಂತಾದ ಕ್ರಿಯಾಯೋಜನೆ ರೂಪಿಸಲು ಜಿಲ್ಲಾ ಧಿಕಾರಿ ಅಧ್ಯಕ್ಷತೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಜಿಪಂ ಸಿಇಒ ಎಂ.ಸುಂದರೇಶಬಾಬು, ಅಪರ ಜಿಲ್ಲಾಧಿಕಾರಿ ಎಚ್.ಬಿ. ಬೂದೆಪ್ಪ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ