ಮಧ್ಯರಾತ್ರಿವರೆಗೂ ಪೌಷ್ಟಿ ಕಾಂಶ ಕಿಟ್‌ ವಿತರಣೆ


Team Udayavani, May 19, 2020, 5:21 PM IST

ಮಧ್ಯರಾತ್ರಿವರೆಗೂ ಪೌಷ್ಟಿ ಕಾಂಶ ಕಿಟ್‌ ವಿತರಣೆ

ಮುದ್ದೇಬಿಹಾಳ: ಸರ್ಕಾರದ ನಿರ್ದೇಶನದಂತೆ ತಾಲೂಕಿನ ಎಲ್ಲ 30 ಸಾಂಸ್ಥಿಕ ಕ್ವಾರೆಂಟೈನ್‌ ಕೇಂದ್ರಗಳಲ್ಲಿರುವ ಮಹಾರಾಷ್ಟ್ರ, ಗುಜರಾತ, ತಮಿಳುನಾಡು ಮುಂತಾದ ರಾಜ್ಯಗಳಿಂದ ಮರಳಿ ಬಂದಿರುವ ವಲಸೆ ಕೂಲಿ ಕಾರ್ಮಿಕರಿಗೆ ವಿಶೇಷ ಸಾಮಗ್ರಿಗಳ ಕಿಟ್‌ ಹಂಚಿಕೆ ಕಾರ್ಯವನ್ನು ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಸೋಮವಾರ ಸಂಜೆ ಪೂರ್ಣಗೊಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ತಮ್ಮ ಮಕ್ಕಳ ಅಪೇಕ್ಷೆಯಂತೆ ಕಿಟ್‌ಗಳ ಹಂಚಿಕೆಗೆ ರವಿವಾರ ಸಂಜೆ ಜಮ್ಮಲದಿನ್ನಿಯ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಚಾಲನೆ ನೀಡಿದ್ದ ಶಾಸಕರು, ಮುದ್ದೇಬಿಹಾಳ ಭಾಗದಲ್ಲಿರುವ 15ಕ್ಕೂ ಹೆಚ್ಚು ಕೇಂದ್ರಗಳಿಗೆ ಮಧ್ಯರಾತ್ರಿವರೆಗೂ ಖುದ್ದು ತಾವೇ ತೆರಳಿ ಮಕ್ಕಳು, ಗರ್ಭಿಣಿಯರು ಸೇರಿ ಕೇಂದ್ರದಲ್ಲಿದ್ದ ಎಲ್ಲರಿಗೂ ಕಿಟ್‌ ವಿತರಿಸಿದ್ದರು. ಸೋಮವಾರ ಬೆಳಗ್ಗೆ ಢವಳಗಿಯ ಸರ್ಕಾರಿ ವಸತಿ ನಿಲಯದಿಂದ ಪ್ರಾರಂಭಿಸಿ ಮಧ್ಯಾಹ್ನದವರೆಗೆ ನಾಲತವಾಡ ಭಾಗ, ಸಂಜೆವರೆಗೆ ತಾಳಿಕೋಟೆ ಭಾಗದ ಕೇಂದ್ರಗಳಿಗೆ ವಿಶ್ರಾಂತಿ ರಹಿತವಾಗಿ ಭೇಟಿ ನೀಡಿ ಕಿಟ್‌ ವಿತರಿಸಿದರು.

ಈ ವೇಳೆ ಆಯಾ ಕೇಂದ್ರಗಳಲ್ಲಿರುವ ಕಾರ್ಮಿಕರ ಸಮಸ್ಯೆ ಆಲಿಸಿದ ಶಾಸಕರು, ಅವುಗಳ ಪಟ್ಟಿ ಮಾಡಿಕೊಂಡು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕ್ರಮ ಕೈಕೊಂಡರು. ತಮ್ಮ ಮಕ್ಕಳಾದ ಭರತ್‌, ಶರತ್‌, ತಮ್ಮ ಸಹೋದರರ ಮಕ್ಕಳಾದ ಸುನೀಲ್‌, ಸುಷ್ಮಿತಾ ಅವರು ಉಳಿತಾಯ ಮಾಡಿದ್ದ ಪಾಕೆಟ್‌ ಮನಿಯಿಂದ ಸಾಮಗ್ರಿ ಖರೀದಿಸಿ ಅಂದಾಜು 2000 ಜನರಿಗೆ ಹಂಚಿಕೆ ಮಾಡುತ್ತಿರುವುದಾಗಿ ತಿಳಿಸಿದರು.

ಯಾರೂ ತಮಗೆ ನಿಗದಿಪಡಿಸಿದ ಸ್ಥಳ ಬಿಟ್ಟು ಹೊರಗಡೆ ತಿರುಗಾಡಬಾರದು.= ಸಾರ್ವಜನಿಕರ ಸಂಪರ್ಕಕ್ಕೆ ಬರಬಾರದು. ಕ್ವಾರೆಂಟೈನ್‌ ಅವಧಿ  ಪೂರ್ಣಗೊಳಿಸಿ ಆರೋಗ್ಯವಂತರಾಗಿ ಮನೆಗೆ ತೆರಳುವಾಗ ಎಲ್ಲರಿಗೂ ಆಹಾರ ಸಾಮಗ್ರಿ ಕಿಟ್‌ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಮುದ್ನಾಳ, ಗೆದ್ದಲಮರಿ, ಚಲಮಿ, ಯರಝರಿ, ಜಟ್ಟಗಿಕ್ರಾಸ್‌, ಹುಲ್ಲೂರತಾಂಡಾ, ಕಾಳಗಿತಾಂಡಾ, ಕೊಪ್ಪತಾಂಡಾ, ರೂಢಗಿತಾಂಡಾ, ಢವಳಗಿ, ನಾಲತವಾಡದ ಮೊರಾರ್ಜಿ ವಸತಿ ಶಾಲೆ, ಚವನಬಾವಿ, ಅಡವಿಸೋಮನಾಳ, ಡೊಂಕಮಡು, ಕ್ಯಾತನಡೋಣಿ ಗ್ರಾಮಗಳ ಕಾರ್ಮಿಕರಿರುವ ಶ್ರೀ ರೇವಣಸಿದ್ದೇಶ್ವರ ಶಾಲೆ, ಅಡವಿಹುಲಗಬಾಳತಾಂಡಾ, ಹಗರಗುಂಡ ತಾಂಡಾ, ಇಂಗಳಗೇರಿ, ಲಿಂಗದಳ್ಳಿ ಮತ್ತು ಹಂದ್ರಾಳದ ಕಾರ್ಮಿಕರಿರುವ ಲಿಂಗದಳ್ಳಿ ಸರ್ಕಾರಿ ಪ್ರೌಢಶಾಲೆ, ಮಡಿಕೇಶ್ವರ ಮುಂತಾದೆಡೆ ಸಂಚರಿಸಿ ಕಿಟ್‌ ಹಂಚಿದ ಶಾಸಕರ ಜತೆ ವಿಜಯಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ ಸೇರಿದಂತೆ ಆಯಾ ಭಾಗದ ಸ್ಥಳೀಯ ಧುರೀಣರು ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.