ಬಬಲೇಶ್ವರದಲ್ಲಿ ಕಾಂಗ್ರೆಸ್‌ ಏಜೆಂಟರಂತೆ ಅಧಿಕಾರಿಗಳ ವರ್ತನ


Team Udayavani, Apr 7, 2018, 2:36 PM IST

vij-3.jpg

ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಎಂ.ಬಿ. ಪಾಟೀಲ ಅವರಿಂದ ಬಹಿರಂಗವಾಗಿಯೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಕ್ರಮಗಳು ನಡೆಯುತ್ತಿದೆ. ನಾವು ದೂರು ನೀಡಿದರೂ ಕ್ರಮ ಕೈಗೊಳ್ಳದ ಚುನಾವಣೆ ಅಧಿಕಾರಿಗಳು ಕಾಂಗ್ರೆಸ್‌ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಹೀಗಾಗಿ ವಿಜಯಪುರ ಜಿಲ್ಲೆಯ ಚುನಾವಣಾ ಅಧಿಕಾರಿಗಳ ವಿರುದ್ಧ ರಾಜ್ಯ ಹಾಗೂ ಕೇಂದ್ರ ಚುನಾವಣಾ ಅಧಿಕಾರಿಗಳಿಗೆ ಖುದ್ದು ದೂರು ನೀಡಲಿದ್ದೇನೆ ಎಂದು ಬಿಜೆಪಿ ಸಂಭಾವ್ಯ ಅಭ್ಯರ್ಥಿ ವಿಜುಗೌಡ ಪಾಟೀಲ ತಿಳಿಸಿದರು. 

ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಬಲೇಶ್ವರ ಕ್ಷೇತ್ರದಲ್ಲಿ ಮುಕ್ತ ನ್ಯಾಯ ಸಮ್ಮತ ಚುನಾವಣೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಮತದಾರರಿಗೆ ಬೆದರಿಕೆ ಹಾಕಲಾಗುತ್ತಿದೆ. ಹಣ ಹಾಗೂ ಇತರೆ ವಸ್ತುಗಳ ಹಂಚಿಕೆ, ಧರ್ಮದ ಹೆಸರಿನಲ್ಲಿ ಪ್ರವಾಸ ಆಯೋಜನೆ, ಎಂ.ಬಿ. ಪಾಟೀಲ ಅಧ್ಯಕ್ಷರಾಗಿರುವ ಬಿಎಲ್‌ಡಿಇ ಸಂಸ್ಥೆಯ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿಕೊಂಡು, ಅವರ ಮೂಲಕ ಅಕ್ರಮಗಳನ್ನು ನಡೆಸಲಾಗುತ್ತಿದೆ. ಈ ಎಲ್ಲ ಅಕ್ರಮಗಳ ಕುರಿತು ಲಿಖೀತ ದೂರು ನೀಡಿದರೂ ಜಿಲ್ಲೆಯ ಚುನಾವಣೆಯ ಯಾವ ಅಧಿಕಾರಿಗಳು ದೂರು ದಾಖಲಿಸಿಕೊಂಡು ಕ್ರಮಗೊಂಡಿಲ್ಲ ದೂರಿದರು. 

ಸಚಿವ ಎಂ.ಬಿ. ಪಾಟೀಲ ಅವರು ತಾವು ಅಧ್ಯಕ್ಷರಾಗಿರುವ ಬಿಎಲ್‌ಡಿಇ ಸಂಸ್ಥೆ ಆವರಣದಲ್ಲಿ ಬಹಿರಂಗವಾಗಿಯೇ ಅಕ್ರಮವಾಗಿ ಜನರಿಗೆ ಹಣ ಹಾಗೂ ತಮ್ಮ ಭಾವಚಿತ್ರ ಮುದ್ರಿಸಿರುವ ವಿವಿಧ ವಸ್ತುಗಳಿರುವ ಕಿಟ್‌ ಹಂಚುತ್ತಿದ್ದಾರೆ. ಪ್ರತಿ ಕಿಟ್‌ನಲ್ಲಿ ಒಂದು ಬ್ಯಾನರ್‌, ಕೊಡೆ, ಟಿ-ಶರ್ಟ್‌, ಕಾಂಗ್ರೆಸ್‌ ಪಕ್ಷದ ಧ್ವಜ, ಬೈಕ್‌ಗಳ ಹ್ಯಾಂಡಲ್‌ಗ‌ಳಿಗೆ ಅಳವಡಿಸುವ ಸ್ಟಿಕ್‌, ಬೈಕ್‌ ನೇಮ್‌ಪ್ಲೇಟ್‌ ಹೀಗೆ ಹಲವು ವಸ್ತುಗಳನ್ನು ಹಾಡಹಗಲೇ ಹಂಚಿಕೆ ಮಾಡುತ್ತಿದ್ದಾರೆ ಪರಿಕರಗಳನ್ನು ಪ್ರದರ್ಶಿಸಿದರು.

ಚುನಾವಣಾ ಅಧಿಕಾರಿಗಳ ಕಣ್ಮುಂದೆ ಇಷ್ಟೆಲ್ಲ ಅಕ್ರಮ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣ ಅವರು ಕಾಂಗ್ರೆಸ್‌ ಏಜೆಂಟರು ಎಂಬುದರಲ್ಲಿ ಅನುಮಾನ ಉಳಿದಿಲ್ಲ. ಲಿಖೀತ ದೂರು ನೀಡಿದರೂ ದಾಖಲಿಸಿಕೊಳ್ಳುತ್ತಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ, ಕರೆ ಸ್ವೀಕರಿಸಿದರೂ ಜಾಣ ಕುರುಡರಂತೆ ವರ್ತನೆ ತೋರುತ್ತಿದ್ದಾರೆ. ಹೀಗಾಗಿ ಚುನಾವಣಾ ಕಾನೂನು ಜಾರಿಯಲ್ಲೇ ಇಲ್ಲವೇನೋ ಎನಿಸುವ ಬಬಲೇಶ್ವರ ಕ್ಷೇತ್ರದಲ್ಲಿ ನಾವು ಸ್ಪರ್ಧೆ ಮಾಡಬೇಕೋ, ಬೇಡವೋ ಎಂಬ ಅನುಮಾನ ಮೂಡಿದೆ ಎಂದರು. ಮತ್ತೂಂದೆಡೆ ಬಬಲಾದ ಜಾತ್ರೆ ನೆಪದಲ್ಲಿ ಸುಮಾರು 2,000 ಬಾಕ್ಸ್‌ ಅಕ್ರಮ ಮದ್ಯ ಸಂಗ್ರಹಿಸಲಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಆಂಬ್ಯುಲೆನ್ಸ್‌ನಲ್ಲಿ ಹಣ ಹಾಗೂ ಚುನಾವಣಾ ಕ್ರಮ ವಸ್ತುಗಳನ್ನು ಸಾಗಿಸಲಾಗಿತ್ತು. ಅದೇ ಮಾದರಿಯಲ್ಲಿ ಈ ಬಾರಿಯೂ ಬಿಎಲ್‌ಡಿಇ ಸಂಸ್ಥೆ ವಾಹನಗಳನ್ನು ಚುನಾವಣೆ ಕರ್ತವ್ಯಕ್ಕೆ ಬಳಸಿಕೊಂಡು ಹಣ ಸಾಗಿಸುವ ಹುನ್ನಾರ ನಡೆಯುತ್ತಿದೆ. ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಗ್ಗಿಲ್ಲದೇ ಸಾಗಿದೆ. ಇಷ್ಟಾದರೂ ಚುನಾವಣಾಧಿ ಕಾರಿಗಳು ಕ್ರಮ ಕೈಗೊಂಡಿಲ್ಲ ಎಂದರು.

ಹೀಗಾಗಿ ವಿಜಯಪುರ ಜಿಲ್ಲೆಯಲ್ಲಿ ನ್ಯಾಯ ಸಮ್ಮತ ಚುನಾವಣೆ ನಡೆಸಲು ತಕ್ಷಣದಿಂದಲೇ ಅಕ್ರಮ ಚಟುವಟಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರನ್ನು ಖುದ್ದು ಭೇಟಿ ಮಾಡಿ ದಾಖಲೆ ಸಮೇತ ದೂರು ನೀಡಲು ಮುಂದಾಗುತ್ತೇನೆ ಎಂದರು. 

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.