19 ರಂದು ಸವದತ್ತಿಯಿಂದ ಸುವರ್ಣ ಸೌಧಕ್ಕೆ ಪಾದಯಾತ್ರೆ
2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಅಂತಿಮ ಹೋರಾಟ
Team Udayavani, Dec 18, 2022, 4:54 PM IST
ವಿಜಯಪುರ : ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವೇ ಕೊಟ್ಟ ಮಾತಿನಿಂದ ಡಿ.19 ರೊಳಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸಬೇಕು. ಮೀಸಲಾತಿಗಾಗಿ ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಡಿ.19 ರಿಂದ ಸವದತ್ತಿಯಿಂದ ಬೆಳಗಾವಿ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಡಿ.22 ರಂದು ಬೆಳಗಾವಿಯಲ್ಲಿ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಭಾನುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಸಮಾಜದ ಹೋರಾಟದ ವಿವರ ನೀಡಿದ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ, ಮೀಸಲು ಹೋರಾಟ ಸಮಿತಿ ಗೌರವಾಧ್ಯಕ್ಷ ಎಂ.ಎಸ್.ರುದ್ರಗೌಡರ, ಬೆಳಗಾವಿ ಸುರ್ವಣ ಸೌಧದಲ್ಲಿ ನಡೆಯುವ ಸಮಾವೇಶ ನಮ್ಮ ಸಮುದಾಯದ ಬಡವರ ಪರವಾದ ಮೀಸಲು ಹೋರಾಟದ ಅಂತಿಮ ಘಟ್ಟ. ಮಾಡಿ ಮಡಿ, ಮೀಸಲು ಪಡೆದೇ ಮಡಿ ಎಂಬ ಘೋಷಣೆಯೊಂದಿಗೆ ಬೆಳಗಾವಿಯಲ್ಲಿ 25 ಲಕ್ಷ ಜನರ ಶಕ್ತಿಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದರು.
ಬೆಳಗಾವಿ ಸಮಾವೇಸಕ್ಕೆ ಮುನ್ನ ಜನಜಾಗೃತಿಗಾಗಿ ಅದೇ ಜಿಲ್ಲೆಯ ಸವದತ್ತಿಯಲ್ಲಿ ಕಾರ್ಯಕ್ರಮದ ಬಳಿಕ ಡಿ.19 ರಂದು ಅಲ್ಲಿಂದಲೇ ಬೆಳವಡಿ, ಕಿತ್ತೂರು ಮಾರ್ಗವಾಗಿ ಡಿ.22 ರ ವರೆಗೆ ಪಾದಯಾತ್ರೆ ನಡೆಯಲಿದೆ. 100 ಎಕರೆ ಪ್ರದೇಶದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅದೇ ಜಿಲ್ಲೆಯ 10 ಲಕ್ಷ ಜನರು, ವಿಜಯಪುರ ಜಿಲ್ಲೆಯ 4 ಲಕ್ಷ ಜನರು ಸೇರಿದಂತೆ 25 ಜನರ ಬೃಹತ್ ಶಕ್ತಿ ಪ್ರದರ್ಶನ ನಡೆಸಲಾಗುತ್ತದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾವೇ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳ ಸಮ್ಮುಖದಲ್ಲಿ ಸಮಾಜದ ಪ್ರಮುಖರಿಗೆ ಮಾತು ಕೊಟ್ಟಂತೆ ಡಿ.19 ರೊಳಗೆ ಪಂಚಮಸಾಲಿ ಸಮಾಜಕ್ಕೆ ಮೀಸಲು ಘೋಷಿಸುವ ವಿಶ್ವಾಸವಿದೆ ಎಂದರು.
ಮೀಸಲು ಘೋಷಿಸಿದರೆ ಬೆಳಗಾವಿಲ್ಲಿ ಡಿ.22 ರಂದು ನಡೆಯಲಿರುವ ಶಕ್ತಿಪ್ರದರ್ಶನ ಸಮಾವೇಶವನ್ನೇ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅಭಿನಂದನಾ ಸಮಾವೇಶವಾಗಿ ಪರಿವರ್ತಿಸಲಿದ್ದೇವೆ. ಮುಖ್ಯಮಮತ್ರಿ ಮಾತುತಪ್ಪಿದರೆ ಸಮಾವೇಶ ಹೋರಾಟದ ವೇದಿಕೆಯಾಗಿ ಪರಿವರ್ತನೆಯಾಗಲಿದೆ. ಅಗತ್ಯ ಎನಿಸಿದರೆ ಅಹೋರಾತ್ರಿ ಧರಣಿ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.
ಸಮಾಜಕ್ಕೆ 28 ವರ್ಷಗಳಿಂದ ನಡೆಸಿದ್ದ ಹೋರಾಟಕ್ಕೆ ಯಾರ ಬಲಿಷ್ಠ ನಾಯಕತ್ವ ನೀಡಿದರು, ಹೋರಾಟವನ್ನು ಯಾರು ತಾರ್ಕಿಕ ಅಂತ್ಯಕ್ಕೆ ಕರೆದೊಯ್ದಿದ್ದಾರೆ ಎಂಬುದು ಸಮಾಜದ ಜನರಿಗೆ ಗೊತ್ತಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಮ್ಮದೇ ಸರ್ಕಾರವಿದ್ದರೂ ಸದನ ಬಾವಿಗಿಳಿದು ಹೋರಾಟ ಮಾಡಿದ್ದಾರೆ. ಸದನ ಹೊರಗೆ ಬಸವಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆದ ನಿರಂತರ ಹೋರಾಟಗಳಿಗೆಲ್ಲ ಯತ್ನಾಳ ಹಾಗೂ ವಿಜಯಾನಂದ ಕಾಶಪ್ಪನವರ ಸೇರಿದಂತೆ ಸಾವಿರಾರು ಜನರು ಸಾಥ್ ನೀಡಿದ್ದಾರೆ. ಹೀಗಾಗಿ ಹೋರಾದ ಕೀರ್ತಿ ಯಾರಿಗೆ ನೀಡಬೇಕೆಂದು ಜನರೇ ನಿರ್ಧರಿಸುತ್ತಾರೆ ಎಂದರು.
ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಗುತ್ತದೆ ಎಂದರಿತ ಕೆಲವು ಮಠಾಧೀಶರು, ನಾಯಕರು, ಶಾಸಕರು, ಸಚಿವರು ಇದೀಗ ಮನವಿ ಸಲ್ಲಿಸುವ, ಸಭೆಗಳಲ್ಲಿ ಭಾಗವಿಸುವ ನಾಟಕ ಆರಂಭಿಸಿದ್ದಾರೆ. ಇನ್ನಾದರೂ ಇಂಥವರೆಲ್ಲ ನಮ್ಮ ಹೋರಾಟದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಲು ಮುಂದಾದಲ್ಲಿ ನಮ್ಮ ತಕರಾರು ಏನಿಲ್ಲ ಎಂದರು.
ಹೋರಾಟದಲ್ಲಿ ಪಾಲ್ಗೊಳ್ಳುವ ಜನರು ಸ್ವಯಂ ಬುತ್ತಿ, ನೀರು, ಅಗತ್ಯ ಎನಿಸಿದರೆ ಅಹೋರಾತ್ರಿ ಹೋರಾಟಕ್ಕಾಗಿ ಹಾಸಿಗೆ, ಹೊದಿಕೆ ಸಮೇತ ಬೆಳಗಾವಿಗೆ ಬರಬೇಕು. ಸಮಾವೇಶದಲ್ಲಿ ಪಾಲ್ಗೊಳ್ಳಲು ಹಳ್ಳಿಗಳಿಂದ ಬರುವ ಸಮಾಜದ ಬಡವರಿಗಾಗಿ ವಾಹನ ಸೇವೆ ಒದಗಿಸಲು ಹೋರಾಟ ಸಮಿತಿ ವ್ಯವಸ್ಥೆ ಮಾಡುತ್ತದೆ ಎಂದರು.
ಮೀಸಲಾತಿಗಾಗಿ ನಡೆಯುತ್ತಿರುವ ಈ ಹೋರಾಟ ಅಂತಿಮ ಹಂತದ್ದಾಗಿದ್ದು, ಮನೆಗೆ ಒಬ್ಬರಲ್ಲ, ಮನೆಯಲ್ಲಿ ಒಬ್ಬರನ್ನು ಬಿಟ್ಟು ಇತರರು ಬೆಳಗಾವಿ ಸಮಾವೇಶಕ್ಕೆ ಆಗಮಿಸಿ ಸಮಾಜದ ಶಕ್ತಿ ಪ್ರದರ್ಶನ ನೀಡಬೇಕು. ರಾಜ್ಯದಾದ್ಯಂತ ಸುಮಾರು 1.40 ಕೋಟಿ ಜನಸಂಖ್ಯೆ ಇದ್ದು, ಮೂಲೆ ಮೂಲೆಯಿಂದ ಜನರು ಆಗಮಿಸಲು ಸಂಘಟನೆ ರೂಪಿಸಲಾಗಿದೆ ಎಂದರು. ಪಂಚಸೇನೆಯ ರಾಜ್ಯಾಧ್ಯಕ್ಷ ಬಿ.ಎಸ್.ಪಾಟೀಲ ನಾಗರಾಳಹುಲಿ, ನಿಂಗನಗೌಡ ಸೋಲಾಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು