ಕರ್ನಾಟಕ ಸೇರುವೆವು…; ಗಡಿನಾಡ ಕನ್ನಡಿಗರ ಒಕ್ಕೊರಲ ಧ್ವನಿ

 ಮಹಾ ಸರಕಾರಕ್ಕೆ ಒಂದು ವಾರ ಗಡುವು

Team Udayavani, Nov 27, 2022, 6:48 AM IST

ಕರ್ನಾ ಟಕ ಸೇರುವೆವು…; ಗಡಿನಾಡ ಕನ್ನಡಿಗರ ಒಕ್ಕೊರಲ ಧ್ವನಿ

ವಿಜಯಪುರ: ಒಂದು ವಾರದೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ನಮ್ಮ ಮಾತೃ ಭೂಮಿ ಕರ್ನಾಟಕಕ್ಕೆ ಸೇರಲು ಅನುಮತಿ ನೀಡಿ ಎಂದು ಮರಾಠಿ ನೆಲದಲ್ಲಿರುವ ಗಡಿನಾಡ ಕನ್ನಡಿಗರು ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜತ್‌ ತಾಲೂಕಿನ ಉಮದಿ ಪಟ್ಟಣದ ಮಲಕಾರ ಸಿದ್ಧ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಸಭೆ ಸೇರಿದ್ದ ಗಡಿನಾಡ ಕನ್ನಡಿಗರು, ಮಹಾರಾಷ್ಟ್ರ ಸರಕಾರಕ್ಕೆ ಒಂದು ವಾರದ ಗಡುವು ನೀಡಿದ್ದಾರೆ. “ನೀರು ಕೊಡಿ, ಇಲ್ಲವೇ ನಮ್ಮನ್ನು ಕರ್ನಾಟಕ ಸೇರಲು ಬಿಡಿ’ ಎಂದು ಎಚ್ಚರಿಕೆ ನೀಡಿದ್ದಾರೆ.

ಮಹಾಜನ ಆಯೋಗದ ವರದಿ ಪ್ರಕಾರ ಜತ್‌, ಮಹಾರಾಷ್ಟ್ರದಲ್ಲಿರುವ ಅಕ್ಕಲಕೋಟ, ಲಾತೂರ, ಸೋಲಾಪುರ, ಕೊಲ್ಲಾಪುರ ಸೇರಿದಂತೆ ಕನ್ನಡಿಗರೇ ವಾಸ ಇರುವ ಪ್ರದೇಶ ಕರ್ನಾಟಕಕ್ಕೆ ಸೇರುವುದು ಖಚಿತ. ಹೀಗಾಗಿ ಈ ಭಾಗದಲ್ಲಿ ಅಭಿವೃದ್ಧಿ ಮಾಡಿ ದರೂ ವ್ಯರ್ಥ ಎಂದರಿತ ಮಹಾರಾಷ್ಟ್ರ ಸರಕಾರ ತನ್ನ ನೆಲದಲ್ಲಿರುವ ಕನ್ನಡದ ಗ್ರಾಮಗಳ ಅಭಿವೃದ್ಧಿ ಮಾಡು ತ್ತಿಲ್ಲ ಎಂಬುದು ಗಡಿನಾಡ ಕನ್ನಡಿಗರ ಆರೋಪ.

ಸಾಂಗ್ಲಿ ಜಿಲ್ಲೆಯ ಜತ್‌ ತಾಲೂಕಿನ 42 ಹಳ್ಳಿಗಳಿಗೆ ನೀರಾವರಿ ಕಲ್ಪಿಸುವುದಕ್ಕಾಗಿ ಮಹಿಷಾಳ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಹೋರಾಟ ನಡೆಯುತ್ತಲೇ ಇದೆ. ಇದಕ್ಕಾಗಿ ಮಹಿಷಾಳ ಪಾಣಿ ಸಂಘರ್ಷ ಪರಿಷತ್‌ ಹೆಸರಿನಲ್ಲಿ ಸಂಘಟನೆ ಸ್ಥಾಪಿಸಿ ಹೋರಾಟ ನಡೆಸುತ್ತಲೇ ಇದ್ದಾರೆ. ಅಲ್ಲದೆ ಗಡಿ ಭಾಗದಲ್ಲಿರುವ ಕನ್ನಡದ ಹಳ್ಳಿಗಳಿಗೆ ಕುಡಿಯುವ ನೀರು, ಆರೋಗ್ಯ, ಕನ್ನಡ ಶಾಲೆಗಳ ಬಲವರ್ಧನೆಗೆ ಅಗತ್ಯ ಅನುದಾನ, ರಸ್ತೆ, ಸಾರಿಗೆ, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವಂತೆ ಹೋರಾಟಗಳು ನಡೆಯುತ್ತಲೇ ಇವೆ. ಆದರೂ 4 ದಶಕಗಳಲ್ಲಿ ಗಡಿನಾಡ ಕನ್ನಡಿಗರ ಭಾವನೆಗೆ ಮಹಾರಾಷ್ಟ್ರ ಸರಕಾರ ಸ್ಪಂದಿಸಿಲ್ಲ. ನೀಡಿದ ಭರವಸೆಗಳು ಈಡೇರಿಲ್ಲ.
ಹೀಗಾಗಿ ದಶಕದ ಹಿಂದೆ 42 ಗ್ರಾಮ ಪಂಚಾಯತ್‌ಗಳು ಅಂಗೀಕರಿಸಿದ ನಿರ್ಣಯದಂತೆ ಕರ್ನಾಟಕ ಸೇರಲು ಅನುಮತಿ ನೀಡಿ ಎಂದು ಮಹಾರಾಷ್ಟ್ರ ಸರಕಾರವನ್ನು ಆಗ್ರಹಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಈಗ ಮಹಾರಾಷ್ಟ್ರದ ರಾಜಕಾರಣಿಗಳು ನೀಡಿರುವ ಕನ್ನಡ ವಿರೋಧಿ ಹೇಳಿಕೆಗಳು, ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಗಡಿನಾಡ ಕನ್ನಡಿಗರ ಕುರಿತು ಆಡಿರುವ ಆತ್ಮವಿಶ್ವಾಸದ ಮಾತುಗಳು ಮಹಾರಾಷ್ಟ್ರದ ಕನ್ನಡ ಹಳ್ಳಿಗಳಲ್ಲಿ ಸಂಚಲನ ಮೂಡಿಸಿದೆ.

ಚಳಿವಳಿ ರೂಪಿಸಲು ಸಿದ್ಧತೆ
ಮರಾಠಿ ನೆಲದಲ್ಲಿರುವ ಕನ್ನಡದ ಗ್ರಾಮಗಳ ಕನ್ನಡಿಗರಲ್ಲಿ ದಿನೇದಿನೆ ಹೋರಾಟದ ಕಿಚ್ಚು ಹೆಚ್ಚುತ್ತಿದೆ. ಉಮದಿ ನೀರಾವರಿ ಹೋರಾಟ ಸಮಿತಿ ಸಭೆಯ ಬೆನ್ನಲ್ಲೇ ತಿಕ್ಕುಂಡಿ ಗ್ರಾಮದಲ್ಲಿ ಬೈಕ್‌ ರ್ಯಾಲಿ ನಡೆಸಿರುವ ಕನ್ನಡಿ ಗರು, “ಜೈ ಕರ್ನಾಟಕ, ಜೈ ಕನ್ನಡಿಗ’ ಎಂದು ಘೋಷಣೆ ಕೂಗಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರ ನಾಯಕರ ಸಿನಿಕ ಮಾತುಗಳಿಗೆ ತಿರುಗೇಟು ನೀಡಿರುವ ಗಡಿ ನಾಡ ಕನ್ನಡಿಗರು “ಕರ್ನಾಟಕ ಸೇರಲು ಅವಕಾಶ ನೀಡಿ’ ಎಂದು ಆಗ್ರಹಿಸುವ ಚಳವಳಿ ರೂಪಿಸಲು ನಿರ್ಧರಿಸಿದ್ದಾರೆ.

ಕರ್ನಾಟಕ ಸಿಎಂ ಬೊಮ್ಮಾಯಿ ಗಡಿನಾಡ ಕನ್ನಡಿಗರ ಹಿತರಕ್ಷಣೆಗೆ ಧ್ವನಿ ಎತ್ತಿರುವುದು ಆತ್ಮವಿಶ್ವಾಸ ಮೂಡಿಸಿದೆ. ಮಹಿಷಾಳ ನೀರಾವರಿ ಯೋಜನೆ ಜಾರಿ ಆಗದಿದ್ದರೆ ಕರ್ನಾಟಕಕ್ಕೆ ಹೋಗಲು ಬಿಡಿ ಎಂಬುದು ಮಹಾರಾಷ್ಟ್ರ ಸರಕಾರಕ್ಕೆ ನಮ್ಮ ಎಚ್ಚರಿಕೆ.
-ಸುನಿಲ ಪೋತದಾರ,
ತಾಲೂಕು ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ, ಉಮದಿ

ದಶಕದ ಹಿಂದೆಯೇ ಜತ್‌ ತಾಲೂಕಿನ 42 ಗ್ರಾ.ಪಂ.ಗಳು ಕರ್ನಾಟಕ ಸೇರಲು ನಿರ್ಣಯ ಅಂಗೀಕರಿಸಿವೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹಾರಾಷ್ಟ್ರ ನೆಲದಲ್ಲಿರುವ ಕನ್ನಡದ ಹಳ್ಳಿಗಳನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಲು ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು.
-ಸಂಜಯ ತೇಲಿ,
ಕಾರ್ಯದರ್ಶಿ, ಮಹಿಷಾಳ ಏತ ನೀರಾವರಿ ಹೋರಾಟ ಸಮಿತಿ, ಉಮದಿ

ಅಭಿವೃದ್ಧಿಯ ವಿಷಯದಲ್ಲಿ ಮಲತಾಯಿ ಧೋರಣೆ ತೋರಿದ್ದರಿಂದಲೇ ಉಪವಾಸ ಸತ್ಯಾಗ್ರಹ, ಪಾದಯಾತ್ರೆ, ಧರಣಿಗಳಂಥ ಹೋರಾಟದ ಮೂಲಕ ಗಮನ ಸೆಳೆದರೂ ನಮ್ಮ ಭಾವನೆಗೆ ಸ್ಪಂದಿಸಿಲ್ಲ. ಹೀಗಾಗಿ ನಾವು ಕರ್ನಾಟಕ ಸೇರಲು ಬಿಡಿ ಎಂದು ಪಟ್ಟು ಹಿಡಿದಿದ್ದೇವೆ.
-ಗೈಬುಲಾಲ್‌ ಶೇಖ್‌,
ತಾಲೂಕು ನೀರಾವರಿ ಹೋರಾಟ ಸಮಿತಿ, ಉಮದಿ

ಗಡಿ ವಿವಾದ ಸಂಬಂಧ ಯಾವುದೇ ಕಾರಣಕ್ಕೂ ಯಾರೂ ಕಾನೂನು ಕೈಗೆತ್ತಿಕೊಳ್ಳಕೂಡದು. ಎರಡೂ ರಾಜ್ಯಗಳ ಸಾಮರಸ್ಯ ಹದಗೆಡುವುದು ಬೇಡ. ಕರ್ನಾಟಕ ಬಸ್‌ಗಳಿಗೆ, ಜನರಿಗೆ ಹಾಗೂ ಆಸ್ತಿಗೆ ಸಂಪೂರ್ಣ
ರಕ್ಷಣೆ ನೀಡಬೇಕು.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.