ಬಸವನಾಡಲ್ಲಿ ಆನ್‌ಲೈನ್‌ ವಂಚಕರ ಹಾವಳಿ


Team Udayavani, Jun 24, 2021, 7:38 PM IST

werfewefdew

ತಾಳಿಕೋಟೆ: ಲಾಕಡೌನ್‌ ವೇಳೆ ಕ್ರಿಯಾಶೀಲರಾಗಿರುವ ಸೈಬರ್‌ ಕದೀಮರು ಸಾಮಾಜಿಕ ಜಾಲತಾಣ ನಕಲಿ ಫೇಸ್‌ಬುಕ್‌ ಪ್ರೊಫೈಲ್‌ ಸೃಷ್ಟಿಸಿ ಸಂಬಂಧಿಕರಿಗೆ, ಸ್ನೇಹಿತರಿಗೆ ಮೆಸೆಜ್‌ ಮೂಲಕ ತುರ್ತಾಗಿ ಹಣ ಕಳುಹಿಸಿ ಎಂದು ವಂಚಿಸಲು ಯತ್ನಿಸಿರುವ ಪ್ರಕರಣಗಳು ಹೆಚ್ಚಾಗತೊಡಗಿದ್ದು ಆತಂಕಕ್ಕೆ ಕಾರಣವಾಗಿದೆ. ಫೇಸ್‌ಬುಕ್‌ ಖಾತೆಯಲ್ಲಿರುವ ಫೋಟೊ, ಇತರೆ ವಿವರಗಳನ್ನು ನಕಲಿ ಖಾತೆಗೆ ಜೋಡಿಸಿ ಆ ಅಸಲಿ ಖಾತೆಯಲ್ಲಿರುವ ಸಂಬಂಧಿಕರಿಗೆ, ಸ್ನೇಹಿತರ ಒಡನಾಟ ಗುರುತಿಸಿ ಮೆಸೇಜ್‌ ಮೂಲಕ ತುರ್ತಾಗಿ ಹಣವನ್ನು ಆನ್‌ಲೈನ್‌ ಮೂಲಕ ವರ್ಗಾವಣೆಗೆ ಯತ್ನಿಸುತ್ತಿದ್ದಾರೆ.

ಇನ್ನೂ ಕೆಲ ವಂಚಕರು ಫೋನ್‌ಪೇ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಸೈಬರ್‌ ಕದೀಮರು ಮುದ್ದೇಬಿಹಾಳ ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ), ಅವರ ಪತ್ನಿ ಮಹಾದೇವಿ ಹೆಸರಿನಲ್ಲಿ, ಪೊಲೀಸ್‌ ಅ ಧಿಕಾರಿ ಎಸ್‌. ಎಚ್‌. ಪವಾರ ಅಲ್ಲದೇ ಪತ್ರಕರ್ತರು, ಶಿಕ್ಷಕರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಆನ್‌ಲೈನ್‌ ಮೂಲಕ ಹಣ ವರ್ಗಾಯಿಸಿ ಎಂದು ಮನವಿ ಮಾಡಿ ವಂಚನೆಗೆ ಯತ್ನಿಸಿದ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಕಲಿ ಖಾತೆ ಸೃಷ್ಟಿಯಾಗಿದ್ದು ಕಂಡಕೆಲವರು ಯಾರೂ ಹಣ ಹಾಕಬೇಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಶಾಸಕ ನಡಹಳ್ಳಿ ದಂಪತಿ ಹೆಸರಿನಲ್ಲಿ ನಕಲಿ ಫೇಸ್‌ ಬುಕ್‌ ಖಾತೆ ಸೃಷ್ಟಿಸಿ 10ರಿಂದ 20 ಸಾವಿರ ರೂ.ವರೆಗೆ ತುರ್ತಾಗಿ ಹಣಕ್ಕೆ ಮನವಿ ಮಾಡುತ್ತಿದ್ದಾರೆ. ಪತ್ರಕರ್ತರ ಹೆಸರಲ್ಲೂ ನಕಲಿ ಖಾತೆ ಸೃಷ್ಟಿಸಿ ಹಣ ಬೇಡಿಕೆಯ ಮನವಿ ಮಾಡುತ್ತಿದ್ದಾರಲ್ಲದೇ, ಮರುದಿನ ನಿಮ್ಮ ಖಾತೆ ಮರಳಿಸುತ್ತೇನೆ ಸಂಕಷ್ಟದಲ್ಲಿದ್ದೇನೆ ಕೊಡಿ ಎಂಬ ಬೇಡಿಕೆ ಸಂದೇಶಗಳ ಕಥೆಗಳನ್ನು ಕಟ್ಟುತ್ತಿದ್ದಾರೆ. ಆಸ್ಪತ್ರೆ ನೆಪದ ಮೇಲೆ ಬೇಡಿಕೆ: ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸುವ ಮುನ್ನಾ ಫೇಸ್‌ಬುಕ್‌ ಖಾತೆದಾರನ ಬಗ್ಗೆ ಎಲ್ಲ ಅರಿತುಕೊಂಡು ನಾನು ಆಸ್ಪತ್ರೆಯಲ್ಲಿದ್ದೇನೆ, ಸಂಬಂಧಿಕರಿಗೆ ಹಣದ ಅವಶ್ಯಕತೆ ಬಿದ್ದಿದೆ. ಇನ್ನೂ ನಾಲ್ಕು ದಿನ ಆಸ್ಪತ್ರೆಯಲ್ಲಿರಬೇಕು. ಬಂದ ನಂತರ ಹಣ ಕೊಡುತ್ತೇನೆ.

ಲಾಕ್‌ಡೌನ್‌ ಕಾರಣ ವಾಹನ ಸೌಕರ್ಯವಿಲ್ಲ, ಅರ್ಜೆಂಟಾಗಿ ಹಣ ಹಾಕು ಎಂಬ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. ಇದನ್ನು ನೋಡಿದ ಕೆಲವು ಗೆಳೆಯರು ಫೇಸ್‌ಬುಕ್‌ ಖಾತೆದಾರನಿಗೆ ಫೋನ್‌ ಮಾಡಿ ಕೇಳಿದ್ದಾಗ ನಕಲಿ ಖಾತೆ ಸೃಷ್ಟಿಯಾಗಿರುವ ಮಾಹಿತಿಗಳು ಹೊರ ಬಿಳತೊಡಗಿದೆ. ದೂರು ನೀಡಿ: ತಮ್ಮ ಫೇಸ್‌ಬುಕ್‌ ಖಾತೆ ನಕಲಿ ಸೃಷ್ಟಿಯಾಗಿದೆ. ನಿಮ್ಮ ಹೆಸರಿನ ಮೇಲೆ ಹಣಕ್ಕೆ ಬೇಡಿಕೆ ಇಡುತ್ತಿರುವುದು ಗಮನಕ್ಕೆ ಬಂದ ತಕ್ಷಣ ಯುಆರ್‌ ಎಲ್‌ ಲಿಂಕ್‌ ಮೂಲಕ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿದರೆ ತನಿಖೆ ಮಾಡಲು ಸಹಕಾರಿಯಾಗಲಿದೆ ಎಂಬುದು ತಜ್ಞರ ಮಾಹಿತಿ

 

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.