ಕೇಂದ್ರ ಬಜೆಟ್‌ಗೆ ವಿರೋಧ


Team Udayavani, Feb 3, 2019, 10:19 AM IST

vij-2.jpg

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 2019ರ ಮಧ್ಯಂತರ ಬಜೆಟ್ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಶನಿವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕಾರ್ಮಿಕರು, ಮಧ್ಯಂತರ ಬಜೆಟ್ ಮಂಡನೆ ಮೂಲಕ ಕೇಂದ್ರ ಸರಕಾರ ದೇಶದ ಜನ ಸಮುದಾಯವನ್ನು ದಾರಿ ತಪ್ಪಿಸುವ ವ್ಯರ್ಥ ಪ್ರಯತ್ನ ನಡೆಸಿದೆ. ವಾಸ್ತವವಾಗಿ ರೈತರು, ಕಾರ್ಮಿಕರು ಮತ್ತು ಇತರೆ ಶೋಷಿತ ಜನ ಸಮುದಾಯಗಳು ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರವಾದ ನೀತಿಗಳಿಗೆ ಪ್ರಬಲ ಪ್ರತಿರೋಧ ವ್ಯಕ್ತಪಡಿಸಿದ್ದರು.

ಆರ್ಥಿಕ ಮಿತವ್ಯಯದ ನೆಪ ಮಾಡಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡದೆ ವಂಚಿಸುವ ಕೆಲಸ ಮಾಡಿತ್ತು. ಹಣಕಾಸು ಸಚಿವರೇ ರೈತರ ಪರ ನಿಲ್ಲುವುದು ಅಸಾಧ್ಯ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರು. ಇಂಥ ಸ್ಥಿತಿಯಲ್ಲಿ ಆಡಳತ ನಡೆಸಿದ ಐದು ವರ್ಷ ಸುಮ್ಮನಿದ್ದ ಸರ್ಕಾರ ಸುಧಾರಣೆ ನೆಪದಲ್ಲಿ ದೇಶಿಯ ಹಾಗೂ ವಿದೇಶಿ ಬಂಡವಾಳಗಾರರನ್ನು ಹರಿಬಿಟ್ಟು, ಮುದ್ದು ಸೇವಕನಾಗಿ ದೇಶದ ಸಂಪನ್ಮೂಲಗಳನ್ನು ಲೂಟಿ ಹೊಡೆಯಲು ಅವಕಾಶ ನೀಡಿದ್ದು, ಇದೀಗ ಮಧ್ಯಂತರ ಆಯವ್ಯಯದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ದೇಶದ ಸ್ವಾವಲಂಬನೆಗೆ ವಾಸ್ತವಿಕ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಕಾರ್ಮಿಕರು ಹಲವು ದಶಕಗಳಿಂದ ಹೋರಾಡುತ್ತ್ತಿರುವ 18 ಸಾವಿರ ರೂ. ಕನಿಷ್ಠ ವೇತನದ ಪ್ರಸ್ತಾಪವಿಲ್ಲ. ಉದ್ಯೋಗ ಖಾತ್ರಿ ಯೋಜನೆಗೆ ಅನುದಾನ ಕಡಿತ ಮಾಡಿ, ಕಾರ್ಮಿಕರಿಗೆ ಉದ್ಯೋಗ ದಿನಗಳ ಕಡಿತಕ್ಕೆ ಕಾರಣವಾಗಿದದೆ. ಅಸಂಘಟಿತ ಕಾರ್ಮಿಕರಿಗೆ ಯಾವೊಂದು ಯೋಜನೆ ರೂಪಿಸಿಲ್ಲ. ಬದಲಾಗಿ ಗೋ ರಕ್ಷಣೆಗೆ 750 ಕೋಟಿ ರೂ. 40 ಕೋಟಿ ಅಸಂಘಟಿತರಿಗೆ ಪಿಂಚಣಿಗಾಗಿ ಕೇವಲ 500 ಕೋಟಿ ರೂ. ಪ್ರಕಟಿಸುವ ಮೂಲಕ ತಮ್ಮ ಮನಸ್ಥಿತಿ ಪ್ರದರ್ಶಿಸಿದ್ದಾರೆ. ಒಬ್ಬ ಅಸಂಘಟಿತ ಕಾರ್ಮಿಕ 60 ವರ್ಷಕ್ಕೆ ಪಿಂಚಣಿ ಪಡೆಯಬೇಕಾದರೆ ಅವರು ನಿರಂತರವಾಗಿ ದೇಣಿಗೆ ಪಾವತಿಸುತ್ತಲೇ ಇರಬೇಕು ಎಂದು ದೂರಿದರು.

ಸಣ್ಣ-ಅತಿಸಣ್ಣ ರೈತ ಕುಟುಂಬಗಳಿಗೆ ದಿನಕ್ಕೆ 16.60 ರೂ.ನಂತೆ ವಾರ್ಷಿಕ 6 ಸಾವಿರ ರೂ. ನೀಡುವ ಭರವಸೆ ರೈತರಿಗೆ ಮಾಡಿದ ಅವಮಾನ. ಜನ ವಿರೋಧಿ ನೀತಿಗಳಿಂದ ಈಗಾಗಲೇ ಜನತೆಯ ಆಕ್ರೋಶ ಎದುರಿಸುತ್ತಿರುವ ಮೋದಿ ಸರಕಾರ, ಮತ್ತೆ ಅಧಿಕಾರಕ್ಕೇರುವ ಹುನ್ನಾರಕ್ಕಾಗಿ ಅಸ್ಪಷ್ಟ ಬಜೆಟ್ ಮಂಡಿಸಿದೆ ಎಂದು ಕಿಡಿ ಕಾರಿದರು.

ಅಣ್ಣಾರಾಯ ಈಳಗೇರ, ಲಕ್ಷ್ಮಣ ಹಂದ್ರಾಳ, ಭೀಮಶಿ ಕಲಾದಗಿ, ಸಂಗು ನಾಲ್ಕಮಾನ, ಸುನಂದಾ ನಾಯಕ, ಕಾಳಮ್ಮ ಬಡಿಗೇರ, ಭಾರತಿ ವಾಲಿ ಇದ್ದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.