ನಮ್ಮ ಶಿಕ್ಷಣ ವ್ಯವಸ್ಥೆ ಅನುಕರಣೀಯ
Team Udayavani, Jan 8, 2018, 2:32 PM IST
ಮುದ್ದೇಬಿಹಾಳ: ಮಕ್ಕಳ ಬಗ್ಗೆ ಪ್ರಾಮಾಣಿಕ ಕಳಕಳಿ, ಕಾಳಜಿ ಇರುವ ಶಿಕ್ಷಕರನ್ನು ಈ ನಾಡು ಪಡೆದಿರುವುದರಿಂದಲೇ ದೇಶದ ಸಂಸ್ಕಾರಯುತ ಶಿಕ್ಷಣ ವ್ಯವಸ್ಥೆ ಪ್ರಶಂಶೆಗೊಳಗಾಗಿದೆ ಎಂದು ಹಿರಿಯ ಸಾಹಿತಿ ಪ್ರೊ| ಬಿ.ಎಂ. ಹಿರೇಮಠ ಹೇಳಿದರು.
ಮುದ್ದೇಬಿಹಾಳ ತಾಲೂಕಿನ ಬಸರಕೋಡದಲ್ಲಿ ಏರ್ಪಡಿಸಿದ್ದ ಪವಾಡ ಬಸವೇಶ್ವರ ಪ್ರೌಢಶಾಲೆ ಮತ್ತು ಮಾತೋಶ್ರೀ ಶಿವಲಿಂಗಮ್ಮ ನಾಡಗೌಡರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಳೇ ವಿದ್ಯಾರ್ಥಿಗಳ ಸಂಘ ಉದ್ಘಾಟನೆ, ಪದಗ್ರಹಣ ಮತ್ತು ಗುರುವಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ನಿಜವಾದ ಶಿಕ್ಷಕರು ತಮಗೆ ಎಷ್ಟೇ ಕಷ್ಟ, ಕಾರ್ಪಣ್ಯ, ದುಃಖ, ನೋವುಗಳಿದ್ದರೂ ತೋರಿಸಿಕೊಳ್ಳದೇ ನಿಷ್ಠೆಯಿಂದ ಮಕ್ಕಳಿಗೆ ಮನ ಮುಟ್ಟುವಂತೆ ಬೋಧಿಸುತ್ತಾರೆ. ಇವರು ಸಂಬಳಕ್ಕಾಗಿ ಕೆಲಸ ಮಾಡುವವರಲ್ಲ. ಇಂಥ ಶಿಕ್ಷಕರೇ ಮಕ್ಕಳ ಹೃದಯದಲ್ಲಿ ಶಾಶ್ವತವಾಗಿ ಮತ್ತು ಜನಮಾನಸದಲ್ಲಿ ಸ್ಥಿರವಾಗಿ ಉಳಿಯುತ್ತಾರೆ ಎಂದು ಹೇಳಿದರು.
ಚಡಚಣ ಕಾಲೇಜು ಪ್ರಾಧ್ಯಾಪಕ ಡಾ| ಎಸ್. ಎಸ್. ದೇಸಾಯಿ ಮಾತನಾಡಿದರು. ಪವಾಡ ಬಸವೇಶ್ವರ ಪ್ರೌಢಶಾಲೆ ಚೇರ್ಮನ್ ಎಂ.ಆರ್. ನಾಡಗೌಡ್ರ ಉದ್ಘಾಟಿಸಿದರು. ಸಂಸ್ಥೆ ಅಧ್ಯಕ್ಷ ಕೆ.ವೈ. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಶರಣ ಸೋಮನಾಳದ ಮಹದೇವಯ್ಯ ಶಾಸ್ತ್ರೀ ಸಾನ್ನಿಧ್ಯ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಕವಿತಾ ಮೇಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನವಲಿ, ಎಚ್.ಆರ್. ಪತ್ತಾರ, ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ, ಕಾರ್ಯದರ್ಶಿ ಅಶೋಕ ಮಣಿ, ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಿಜಯಕುಮಾರ ವಣಿಕ್ಯಾಳ, ಕಾರ್ಯದರ್ಶಿ ವಿ.ಜಿ. ಹಿರೇಮಠ, ಪವಾಡ ಬಸವೇಶ್ವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯರು, ಮುಖ್ಯಗುರುಗಳು, ನಿವೃತ್ತ ಶಿಕ್ಷಕರು ವೇದಿಕೆಯಲ್ಲಿದ್ದರು.
ಹಳೇ ವಿದ್ಯಾರ್ಥಿಗಳು ತಮಗೆ ವಿದ್ಯಾದಾನ ಮಾಡಿದ ನಿವೃತ್ತ ಮತ್ತು ಸದ್ಯ ಸೇವೆಯಲ್ಲಿರುವ ಗುರುಗಳಿಗೆ ಗುರುವಂದನಾ ಕಾರ್ಯಕ್ರಮ ನಡೆಸಿಕೊಟ್ಟರು. ಹಳೆ ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಯಿತು. ವೈಶಾಲಿ ಬೇಲಾಳ ಮತ್ತು ವೀಣಾ ಪಾಟೀಲ ಭರತನಾಟ್ಯ ಪ್ರದರ್ಶಿಸಿದರು.
ವಿದ್ಯಾರ್ಥಿನಿಯರಾದ ಶೃತಿ, ಶಾಂತಾ, ಕಾವೇರಿ, ಅಶ್ವಿನಿ, ಸುವರ್ಣಾ ನಾಡಗೀತೆ ಹಾಡಿದರು. ಶಿಕ್ಷಕ ವಿ.ಪಿ. ಮೇಲಿನಮನಿ ಸ್ವಾಗತಿಸಿದರು. ಪ್ರೌಢಶಾಲೆ ಮುಖ್ಯಾಧ್ಯಾಪಕ ಎ.ಪಿ. ಮಣಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಎಸ್.ಬಿ. ಬಿದ್ನಾಳಮಠ ನಿರೂಪಿಸಿದರು. ಶಿಕ್ಷಕ ಗುರಿಕಾರ ವಂದಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ