ಫುಟ್‌ ಪಾತ್‌ ಕಾಮಗಾರಿ ವಿರುದ್ಧ ಆಕ್ರೋಶ


Team Udayavani, Apr 10, 2021, 7:54 PM IST

zdfgfdgfsda

ಇಂಡಿ: ನಗರದಲ್ಲಿ ನಿರ್ಮಿಸಿದ ಫುಟ್‌ ಪಾತ್‌ ಕಾಮಗಾರಿ ಕಳಪೆ ಮಟ್ಟದ್ದಾಗಿದ್ದು, ಪುರಸಭೆಯಿಂದ ಮೂರನೇ ಪಾರ್ಟಿ ಇನ್ಸ್‌ಪೆಕ್ಷನ್‌ ಮಾಡಿಸಬೇಕು ಮತ್ತು ಫುಟ್‌ಪಾತ್‌ ಮರು ನಿರ್ಮಾಣ ಮಾಡಬೇಕು ಎಂದು ಪುರಸಭೆ ಸದಸ್ಯ ಅನಿಲಗೌಡ ಬಿರಾದಾರ ಆಕ್ರೋಶ ಭರಿತವಾಗಿ ಹೇಳಿದರು.

ಶುಕ್ರವಾರ ಪುರಸಭೆ ಸಭಾ ಭವನದಲ್ಲಿ ಪುರಸಭೆ ಅಧ್ಯಕ್ಷೆ ಶೈಲಜಾ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಫುಟ್‌ಪಾತ್‌ ನಿರ್ಮಾಣದ ಕುರಿತು ಚರ್ಚಿಸಲಾಯಿತು. ಪುರಸಭೆಯಿಂದ ಟೆಂಡರ್‌ ಪಡೆದುಕೊಂಡಿರುವ ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅ ಧಿಕಾರಿಗಳು ಗುತ್ತಿಗೆದಾರರ ಮೇಲೆ ಒತ್ತಡ ಹೇರಬೇಕು. ಗುಣಮಟ್ಟದ ಕಾಮಗಾರಿ ಮಾಡಿಸಬೇಕು. ನಗರದಲ್ಲಿ ಫುಟ್‌ ಪಾತ್‌ ಕಾಮಗಾರಿ ಆರಂಭವಾಗಿದೆ.

ಗುತ್ತಿಗೆದಾರರು ತಮ್ಮ ಮನಬಂದ ಹಾಗೆ ಕಾಮಗಾರಿ ಮಾಡುತ್ತಿದ್ದಾರೆ. ಮುಂದೆ ಕಾಮಗಾರಿ ನಡೆಯುತ್ತಿದೆ. ಹಿಂದೆ ಫುಟ್‌ಪಾತ್‌ ಮೇಲೆ ಸಣ್ಣ ಗಾಡಿ ಹಾಯ್ದರೂ ಫುಟ್‌ಪಾತ್‌ ಮೇಲಿನ ಕಾಂಕ್ರೀಟ್‌ ಕುಸಿದು ಬೀಳುತ್ತಿದೆ. ಕಾಮಗಾರಿ ಮಾಡಿದ ನಂತರ ಕನಿಷ್ಠ 25-30 ವರ್ಷವಾದರೂ ಸುಸಜ್ಜಿತ ಸ್ಥಿತಿಯಲ್ಲಿರಬೇಕು.ಆದರೆ ಫುಟ್‌ ಪಾತ್‌ ಕಾಮಗಾರಿ ಮಾಡಿದ ಎರಡೇ ವರ್ಷದಲ್ಲಿ ಹಾಳಾಗುತ್ತಿದೆ. ಪುರಸಭೆ ಅಧಿ ಕಾರಿಗಳು ಮತ್ತು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಈ ಕುರಿತು ಹೇಳಿದರೂ ಪ್ರಯೋಜನವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಭೆ ಆರಂಭವಾಗುತ್ತಿದ್ದಂತೆ ಸದಸ್ಯ ವಿಜಯಕುಮಾರ ಮೂರಮನ್‌ ಪಂಚಶೀಲ ನಗರದಲ್ಲಿ ಚರಂಡಿ ನೀರು ಮನೆಗಳ ಪಕ್ಕದಲ್ಲಿಯೇ ನಿಂತುಕೊಂಡು ಸಮಸ್ಯೆಯಾಗುತ್ತಿದೆ.

ಸೊಳ್ಳೆಗಳು ಹೆಚ್ಚಾಗಿವೆ. ದುರ್ವಾಸನೆ ಹೆಚ್ಚಿದ್ದು, ಸುತ್ತಮುತ್ತಲಿನ ಕುಟುಂಬಗಳಿಗೆ ತೊಂದರೆಯಾಗಿದೆ. ಕೂಡಲೆ ಚರಂಡಿ ನೀರು ಬೇರೆಡೆಗೆ ಹರಿದು ಹೋಗುವಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಎಸ್‌.ಎಸ್‌. ಪೂಜಾರಿ ಮಧ್ಯ ಪ್ರವೇಶಿಸಿ ಪಂಚಶೀಲ ನಗರದಲ್ಲಿ ಕೆಲ ಪ್ರದೇಶದಲ್ಲಿ ನಿಲ್ಲುವ ಚರಂಡಿ ನೀರು ಬೇರೆಡೆ ಸಾಗಿಸಲು ಕಾಮಗಾರಿ ಟೆಂಡರ್‌ ಕರೆಯಲಾಗಿದೆ. ಶೀಘ್ರದಲ್ಲಿ ಚರಂಡಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಪುರಸಭೆ ಉಪಾಧ್ಯಕ್ಷ ಇಸ್ಮಾಯಿಲ್‌ ಅರಬ, ಲೆಕ್ಕಾ ಧಿಕಾರಿ ಅಸ್ಲಮ ಖಾದಿಮ, ಅಶೋಕ ಚಂದನ್‌, ಶಬ್ಬಿರ್‌ ರೇವೂರಕರ, ಸದಸ್ಯರಾದ ಅಯೂಬ ಭಾಗವಾಬ, ಶಬ್ಬಿರ್‌ ಖಾಜಿ, ದೇವೇಂದ್ರ ಕುಂಬಾರ, ಭೀಮನಗೌಡ ಪಾಟೀಲ, ಅಸ್ಲಮ ಕಡಣಿ, ಮುಸ್ತಾಕ್‌ ಇಂಡಿಕರ, ಉಮೇಶ ದೇಗಿನಾಳ, ಪಿಂಟು ರಾಠೊಡ, ಲಿಂಬಾಜಿ ರಾಠೊಡ, ಜಹಾಂಗಿರ ಸೌದಾಗರ, ಬನ್ನೆಮ್ಮ ಹದರಿ, ರೇಣುಕಾ ಉಟಗಿ, ಸೈಫನ್‌ ಪವಾರ, ಭಾಗೀರಥಿ ಕುಂಬಾರ, ಸಂಗೀತಾ ಕರಕಟ್ಟಿ, ಜ್ಯೋತಿ ರಾಠೊಡ, ಕವಿತಾ ರಾಠೊಡ ಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.