ಕಳಪೆ ಕಾಮಗಾರಿಗೆ ಆಕ್ರೋಶ
Team Udayavani, Sep 29, 2018, 4:38 PM IST
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ 50ರ ಅಂಡರ್ ಪಾಸ್ (ಮೇಲ್ಸೇತುವೆ) ಕಾಮಗಾರಿ ಕಳಪೆ ಮಟ್ಟದಿಂದ ನಡೆದಿದೆ ಎಂದು ಆರೋಪಿಸಿ ಮನಗೂಳಿ ಪಪಂ ಅಧ್ಯಕ್ಷ ಹಾಗೂ ಸದಸ್ಯರು ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಒಂದು ಗಂಟೆ ಕಾಲಧರಣಿ ನಡೆಸಿದರು.
ಶುಕ್ರವಾರ ಮಧ್ಯಾಹ್ನ ಪ್ರತಿಭಟನಾಕಾರರು ಕಾಮಗಾರಿ ನಡೆಯುವ ಸ್ಥಳಕ್ಕೆ ಆಗಮಿಸಿ, 36 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಕಳಪೆಯಾಗಿದ್ದು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದಾಗ ಕಾರ್ಮಿಕರು ಕೆಲಸ ಬಿಟ್ಟು ತೆರಳಿದರು.
ನಂತರ ಸ್ಥಳಕ್ಕೆ ಪರಿಶೀಲನೆಗೆ ಆಗಮಿಸಿದ್ದ ಪ್ರೊಜೆಕ್ಟ್ಡೈ ರೆಕ್ಟರ ಹಾಗೂ ಜನರಲ್ ಮ್ಯಾನೇಜರ್ (ಸದ್ಬವ ಕಂಪನಿ) ಆಗಮಿಸಿದ ಸಂದರ್ಭದಲ್ಲಿ ಮನಗೂಳಿ ಪಪಂ ಅಧ್ಯಕ್ಷ ಸದಾಶಿವ ಕಾಂಬಳೆ ಹಾಗೂ ಗ್ರಾಮದ ಮುಖಂಡ ಭೀಮಗೊಂಡ ಹತ್ತರಕಿ ಅವರು ಇವರಿಬ್ಬರ ಬಳಿ ಸಮಸ್ಯೆ ಕುರಿತು ಹೇಳಲು ಮುಂದಾದಾಗ ಅದಕ್ಕೆ ಅವರು ಪ್ರತಿಕ್ರಿಯೆ ಮಾಡದೆ ಹಾಗೆ ಅಲ್ಲಿಂದ ತೆರಳಿದರು.
ಆಗ ಆಕ್ರೋಶಗೊಂಡ ಭೀಮಗೊಂಡ ಹತ್ತರಕಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಮಗಾರಿ ಕಳಪೆಯಾಗಿ ನಡೆಯುತ್ತಿದೆ ಎಂದು ಹೇಳಲು ಮುಂದಾದರೆ ಪರಿಶೀಲನೆ ಆಗಮಿಸಿದ ಅಧಿಕಾರಿಗಳು ನಾಮಕಾ ವಾಸ್ತೆ ಪರಿಶೀಲನೆ ಮಾಡುತ್ತಿದ್ದಾರೆ.
ಕಾಮಗಾರಿ ಬಗ್ಗೆ ಸಮಗ್ರ ತನಿಖೆ ಮಾಡಲು ಜಿಲ್ಲಾಧಿಕಾರಿಗಳು ಮುಂದಾಗಬೇಕೆಂದು ಒತ್ತಾಯಿಸಿದರು. ಒಂದು ವೇಳೆ ಕಾಮಗಾರಿ ಆರಂಭಿಸಿದರೆ ಜಿಲ್ಲಾ ಧಿಕಾರಿಗಳ ಕಚೇರಿ ಮುಂದೆ ಮನಗೂಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಮನಗೂಳಿ ಪಪಂ ಸದಸ್ಯರಾದ ಶರಣು ಬೀರಕಬ್ಬಿ, ಶಿವಯ್ಯ ನಂದಿಕೋಲಮಠ, ಮುಖಂಡರಾದ ರಮೇಶ ಗಚ್ಚಿನವರ, ಶಿವು ಸಿಂದಗಿ, ಅಭಿಷೇಕ ಹೇಳವರ, ಮಂಜುನಾಥ ಮಡಿವಾಳರ, ಅಪ್ಪು ಬಿರಾದಾರ, ಮಲ್ಲಯ್ಯ ಚೌಕಿಮಠ, ವಿಠuಪ್ಪ ದಿಂಡವಾರ, ಮುದಕು ಮನಹಳ್ಳಿ, ಶಿವು ಹೊನ್ನುಟಗಿ, ಸಿದ್ದು ಕವಲಗಿ, ನಾಗರಾಜ ಗುಂದಗಿ ಸೇರಿದಂತೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?