ಮುದ್ದೇಬಿಹಾಳ ಆಸ್ಪತ್ರೆಗೆ ಆಕ್ಸಿಜನ್‌ ಪ್ಲಾಂಟ್‌ ಮಂಜೂರು


Team Udayavani, May 8, 2021, 1:06 PM IST

ಮುದ್ದೇಬಿಹಾಳ ಆಸ್ಪತ್ರೆಗೆ ಆಕ್ಸಿಜನ್‌ ಪ್ಲಾಂಟ್‌ ಮಂಜೂರು

ಮುದ್ದೇಬಿಹಾಳ: ಗೊಂದಲಕ್ಕೆ ಕಾರಣವಾಗಿದ್ದ ಮುದ್ದೇಬಿಹಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ನಿಮಿಷಕ್ಕೆ 500 ಲೀಟರ್‌ ಉತ್ಪತ್ತಿ ಸಾಮರ್ಥ್ಯದ ಆನ್‌ಸೈಟ್‌ ಆಕ್ಸಿಜನ್‌ ಜನರೇಶನ್‌ ಪ್ಲಾಂಟ್‌ ಮಂಜೂರು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೇ 5ರಂದೇ ಆದೇಶ ಹೊರಡಿಸಿದ್ದ ಘಟನೆ ಬೆಳಕಿಗೆ ಬಂದಿದೆ.

ಈ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ, ಮುದ್ದೇಬಿಹಾಳದಲ್ಲಿ ಘಟಕದ ಅವಶ್ಯಕತೆ ಕುರಿತು 2 ತಿಂಗಳ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಮೊದಲ ಲಿಸ್ಟ್‌ನಲ್ಲಿ ಮುದ್ದೇಬಿಹಾಳದ ಹೆಸರನ್ನು ಹೈ ಪವರ್‌ ಕಮಿಟಿಯಲ್ಲಿ ಕೈಬಿಡಲಾಗಿತ್ತು. ನಾನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಈ ವಿಷಯ ಗೊತ್ತಾಗಿ ಆರೋಗ್ಯ ಸಚಿವ ಡಾ| ಕೆ. ಸುಧಾಕರ ಅವರೊಂದಿಗೆ ಮಾತನಾಡಿ ಬೇಡಿಕೆ ಈಡೇರಿಸುವಂತೆ, ನಮ್ಮ ಜನರಿಗೆ ಆಕ್ಸಿಜನ್‌ ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿದ್ದೆ ಎಂದು ತಿಳಿಸಿದರು.

ಇದೇ ವಿಷಯಕ್ಕೆ ಸಂಬಂ ಧಿಸಿದಂತೆ ಮೇ 3ರಂದು ಸಚಿವ ಸುಧಾಕರ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀ ನ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ. ವಿಜಯಪುರದ ಜಿಲ್ಲಾ ಆರೋಗ್ಯಾಧಿ ಕಾರಿಯಿಂದಲೂ ಪತ್ರ ಬರೆಸಿದ್ದೆ. ನನ್ನ ಬೇಡಿಕೆ ಅವಶ್ಯಕತೆ ಮತ್ತು ಗಂಭೀರತೆ ಅರಿತ ಡಾ| ಸುಧಾಕರ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿ ಮಂಜೂರಾತಿ ಪತ್ರದಲ್ಲಿ ಮುದ್ದೇಬಿಹಾಳದ ಹೆಸರು ಸೇರ್ಪಡೆ ಮಾಡುವಂತೆ ಸೂಚಿಸಿದ್ದರು ಎಂದರು.

ಮೇ 5ರಂದು ಆರೋಗ್ಯ ಇಲಾಖೆ ನಿರ್ದೇಶಕರ ಸೂಚನೆ ಮೇರೆಗೆ ಆರೋಗ್ಯ ಇಲಾಖೆ ಇಂಜಿನಿಯರಿಂಗ್‌ ಘಟಕದವರು ಕಾರ್ಯಪಾಲಕ ಅಭಿಯಂತರರಿಗೆ ಪತ್ರ ಬರೆದು ಮುದ್ದೇಬಿಹಾಳ ಸೇರಿದಂತೆ ರಾಜ್ಯವ್ಯಾಪಿ 40 ಪ್ಲಾಂಟ್‌ಗಳ ಪರಿಷ್ಕೃತ ನಿರ್ದೇಶಕರ ಅನುಮೋದಿತ ಪಟ್ಟಿ ಲಗತ್ತಿಸಿ ಸಂಬಂ ಧಿಸಿದ ಸ್ಥಳಗಳಲ್ಲಿ ಸಿವಿಲ್‌ ಮತ್ತು ವಿದ್ಯುತ್‌ ಕಾಮಗಾರಿ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಕೋವಿಡ್‌ ಪರಿಸ್ಥಿತಿಯಲ್ಲಿ ಇದನ್ನು ಅತಿ ತುರ್ತು ಎಂದು ಪರಿಗಣಿಸಿ ಕೆಲಸ ಪ್ರಾರಂಭಿಸುವಂತೆಯೂ ಸೂಚಿಸಲಾಗಿದೆ ಎಂದು ಶಾಸಕರು ತಿಳಿಸಿದರು. ಒಟ್ಟಾರೆ ನಮ್ಮ ಜನರಿಗೋಸ್ಕರ ನಾನು ನಡೆಸಿದ ಪ್ರಯತ್ನಕ್ಕೆ ಯಶಸ್ಸು ದೊರಕಿದೆ. ನಮ್ಮ ಭಾಗದ ಜನರು ಇನ್ಮುಂದೆ ಆಕ್ಸಿಜನ್‌ ಸಮಸ್ಯೆಯಿಂದ ಮುಕ್ತರಾಗಲಿದ್ದಾರೆ.

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ 50, ತಾಳಿಕೋಟೆ ಸರ್ಕಾರಿ ಆಸ್ಪತ್ರೆಗೆ 40 ಹಾಗೂ ನಾಲತವಾಡ ಸರ್ಕಾರಿ ಆಸ್ಪತ್ರೆಗೆ 30 ಸಿಲಿಂಡರ್‌ ಆಕ್ಸಿಜನ್‌ ಸ್ಥಳೀಯವಾಗಿ ಲಭ್ಯವಾಗಿ ಸಮಸ್ಯೆ ನಿವಾರಣೆ ಆಗಲಿದೆ. ನನ್ನ ಮನವಿಗೆ ಸ್ಪಂದಿಸಿ ಮಂಜೂರಾತಿ ನೀಡಿದ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಡಾ| ಸುಧಾಕರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.