ವಿಶ್ವಕರ್ಮ ಸಮುದಾಯ ಪ.ಪಂಗಡಕ್ಕೆ ಸೇರ್ಪಡೆಗೆ ಬೀದರ್- ಬೆಂಗಳೂರು ಪಾದಯಾತ್ರೆ: ಕೆ.ಪಿ.ನಂಜುಂಡಿ


Team Udayavani, Aug 28, 2022, 12:55 PM IST

ವಿಶ್ವಕರ್ಮ ಸಮುದಾಯ ಪ.ಪಂಗಡಕ್ಕೆ ಸೇರ್ಪಡೆಗೆ ಬೀದರ್- ಬೆಂಗಳೂರು ಪಾದಯಾತ್ರೆ: ಕೆ.ಪಿ.ನಂಜುಂಡಿ

ವಿಜಯಪುರ: ವಿಶ್ವಕರ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹಿಸಿ ಬೀದರ್ ನಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಮೇಲ್ಮನೆ ಶಾಸಕ ಕೆ.ಪಿ.ನಂಜುಂಡಿ ಹೇಳಿದರು.

ಭಾನುವಾರ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಕುರಿತು ನಡೆಯುವ ಹೋರಾಟ ಸರ್ಕಾರದ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು,  ಸಮುದಾಯದ ಸಂಘಟನೆ ಬಳಿಕ 2023 ರಲ್ಲಿ ಬೀದರ್ ನಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸುವುದಾಗಿ ವಿವರಿಸಿದರು.

ನಮ್ಮ ಸಮುದಾಯ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಿಂದುಳಿದಿದೆ. ಬಹುತೇಕ ಅನಕ್ಷರಸ್ಥ ಸಮುದಾಯ ಕೌಶಲ್ಯಯುಕ್ತ ಕೆಲಸ ಮಾಡಿಕೊಂಡಿದ್ದು, ಸಂವಿಧಾನ, ಸರ್ಕಾರದ ಸೌಲಭ್ಯ ಪಡೆಯುವಲ್ಲಿ ವಿಫಲವಾಗಿದೆ ಎಂದರು.

ಹೊಗಳಿಗೆ, ಗೌರವ ಮಾತ್ರ ಸಿಗುತ್ತಿದ್ದು, ಇದೇ ನಮ್ಮನ್ನು ಮೂಢರನ್ನಾಗಿ ಮಾಡಿದೆ. ನಮ್ಮನ್ನು ನಾವು ಉನ್ನತ ಜಾತಿಯರು ಎಂದು ಅಹಂಕಾರದಿಂದ ಮೆರೆಯುತ್ತಿರುವ ಕಾರಣ ವಿಶ್ವಕರ್ಮ ಸಮುದಾಯ ತೀರಾ ಹಿಂದುಳಿಯಲು ಪ್ರಮುಖ ಕಾರಣ ಎಂದು ವಿವರಿಸಿದರು.

ರಾಜಕೀಯ ಶಕ್ತಿ ಪಡೆಯದ ಹೊರತು ವಿಶ್ವಕರ್ಮ ಸಮುದಾಯ ಅಭಿವೃದ್ಧಿ ಅಸಾಧ್ಯ. ಇದಕ್ಕಾಗಿ ಕಳೆದ ಎರಡುವರೆ ದಶಕದಿಂದ ಸಮುದಾಯದ ಸಂಘಟನೆ ಆರಂಭಿಸಿದ್ದೇನೆ ಎಂದರು.

ಜಾತಿವಾರು ಜನಗಣತಿ ನಡೆಸುವ ಕುರಿತು ಸದನದಲ್ಲೇ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದೇನೆ. ಆದರೆ ಸದನದಲ್ಲಿ ಸ್ಪಂದನೆ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹಾವನೂರು ಆಯೋಗ ಕುಲ ಶಾಸ್ತ್ರ ಅಧ್ಯಯನ ಮಾಡದೇ 41 ಪಂಗಡಗಳಿರುವ ವಿಶ್ವಕರ್ಮ ಸಮುದಾಯವನ್ನು ಶೇ.15 ರಷ್ಟು ಮಾತ್ರ ಮೀಸಲಿರುವ ಹಾಗೂ 102 ಜಾತಿಗಳಿರುವ ಹಿಂದುಳಿದ 2ಎ ಪ್ರವರ್ಗಕ್ಕೆ ಸೇರಿಸಲಾಯಿತು. ಇದರಿಂದಾಗಿ ಬಲಿಷ್ಠ ಸಮುದಾಯಗಳು ಮೀಸಲು ಸೌಲಭ್ಯದ ಪ್ರಧಾನ ಲಾಭ ಪಡೆಯುತ್ತಿವೆ. ಹೀಗಾಗಿ ಒಳ ಮೀಸಲಾತಿ ಎಂಬುದೂ ಗಗನ ಕುಸುಮ ಎಂದರು.

ಇದನ್ನೂ ಓದಿ: ಕೊಟ್ಟಿಗೆಹಾರ: ಅಡ್ಡ ಬಂದ ಕಾಡು ಹಂದಿಯನ್ನು ತಪ್ಪಿಸಲು ಹೋಗಿ ಆಟೋ ಪಲ್ಟಿ; ಮೂವರಿಗೆ ಗಾಯ 

ದೇಶದ ಹಲವು ರಾಜ್ಯಗಳ ಪರಿಶಿಷ್ಟ ಜಾತಿ, ಪಂಗಡದಲ್ಲೂ ಇದ್ದೇವೆ. ಎಲ್ಲೆಡೆಯೂ ಪರಿಶಿಷ್ಟ ಸಮುದಾಯದ ವ್ಯಾಪ್ತಿಗೆ ಸೇರದ ಕಾರಣ ಸರ್ಕಾರದ ಮೀಸಲು ಸೌಲಭ್ಯ ಪಡೆಯುವಲ್ಲಿ ವಿಫಲವಾಗಿದೆ ಎಂದರು.

ರಾಜ್ಯದಲ್ಲಿ ಪ್ರತಿ ಗ್ರಾಮದಲ್ಲೂ ನಮ್ಮ ಸಮುದಾಯದ ಜನ ಇದ್ದು, 40 ಲಕ್ಷ ಜನಸಂಖ್ಯೆ ಹೊಂದಿದೆ. ಪ್ರತಿ ಹಳ್ಳಿಯಲ್ಲೂ ಇರುವ ನಮ್ಮ ಸಮಾಜ ವರ್ಷದ ಅನ್ನದ ಆಧಾರದಲ್ಲಿ ಕುಲಕಸಬು ನಂಬಿ ಜೀವಿಸುತ್ತಿವೆ. ಮತ್ತೊಂದೆಡೆ ಪ್ರಸ್ತುತ ಸಂದರ್ಭದಲ್ಲಿ ಕುಲಕುಸಬು ಮಾಡಲಾಗದೇ, ಮೀಸಲಾತಿಯಿಂದ ಸಾಮಾಜಿಕ ನ್ಯಾಯವೂ ಸಿಗದೇ ಅನ್ಯಾಯಕ್ಕೀಡಾಗಿದೆ ಎಂದು ವಿವರಿಸಿದರು.

745 ಹೋಬಳಿ ಸಂಚರಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಆಗ್ರಹಕ್ಕಾಗಿ ಸಮುದಾಯದ ಸಮಾವೇಶದ ಮೂಲಕ ಸಂಘಟನೆ ನಡೆಸಲಾಗುತ್ತಿದೆ ಎಂದರು.

ವಿಶ್ವಕರ್ಮ ಸಮಯದ ಪ್ರಮೋದ ಬಡಿಗೇರ, ಎಂ.ಕೆ.ಪತ್ತಾರ, ಬಾಳು ಗಿರಿಗಾಂವಕರ, ಸಂತೋಷ ವಿಶ್ವಕರ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.