ಸಂಕ್ರಾಂತಿ ಬಳಿಕ ಪಂಚಮಸಾಲಿ ಸಮಾಜಕ್ಕೆ ಶುಕ್ರದೆಸೆ: ಮೃತ್ಯುಂಜಯ ಸ್ವಾಮೀಜಿ

ಯಾವ ಸರಕಾರ ನಮ್ಮ ಬಗ್ಗೆ ಗಮನ ಹರಿಸಿಲ್ಲ. ಈ ಬಾರಿ ಗಮನ ಹರಿಸಿ

Team Udayavani, Jan 12, 2021, 4:29 PM IST

ಸಂಕ್ರಾಂತಿ ಬಳಿಕ ಪಂಚಮಸಾಲಿ ಸಮಾಜಕ್ಕೆ ಶುಕ್ರದೆಸೆ: ಮೃತ್ಯುಂಜಯ ಸ್ವಾಮೀಜಿ

ಬಸವನಬಾಗೇವಾಡಿ: ಪಂಚಮಸಾಲಿ ಸಮಾಜದ ಜನರು ಎದ್ರೇ ವೀರಭದ್ರಾ ಮಲಿಗಿದರೆ ಕುಂಭಕರ್ಣ, ಈಗ ಎದ್ದಿದ್ದಾರೆ. ಮೀಸಲಾತಿ ಸಿಗುವುದು ನಿಚ್ಚಿತ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸೋಮವಾರ ಪಟ್ಟಣದ ವಿಜಯಪುರ ರಸ್ತೆಯ ಯಾತ್ರಿ ನಿವಾಸದಲ್ಲಿ ನಡೆದ ಪಂಚಮಸಾಲಿ ಸಮಾಜಕ್ಕೆ 2ಎ ಹಾಗೂ ಒಬಿಸಿ ಮೀಸಲಾತಿಗೆ ಒತ್ತಾಯಿಸಿ ಜ. 14ರಂದು ಕೂಡಲಸಂಗಮದಿಂದ ಬೆಂಗಳೂರವರೆಗಿನ ಪಾದಯಾತ್ರೆ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಅವರು, ಸಂಕ್ರಾತಿ ಬಳಿಕ ಪಂಚಮಸಾಲಿ ಸಮಾಜದ ಜನರ ದಿಕ್ಕು ಬದಲಾಗುವುದು ನಿಶ್ಚಿತ ಎಂದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧಿಕಾರಕ್ಕೆ ಬರಲು ಪಂಚಮಸಾಲಿ ಸಮಾಜದ ಜನರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಅವರು ಇನ್ನೆರೆಡು ದಿನದಲ್ಲಿ ಸಮಾಜದ ಜನರಿಗೆ ಮೀಸಲಾತಿ ನೀಡುತ್ತಾರೆ ಎಂಬ ನಂಬಿಕೆ ಅಪಾರವಾಗಿದೆ. ನೀಡಿದರೆ 14ರಂದು ಬಿ.ಎಸ್‌. ಯಡಿಯೂರಪ್ಪನವರಿಗೆ ಅಭಿನಂದೆ ಕಾರ್ಯಕ್ರಮ ಇಲ್ಲದಿದ್ದರೆ ಪಾದಯಾತ್ರೆ ಅನಿವಾರ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅಖೀಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ಇದು ಪಂಚಮಸಾಲಿ ಸಮಾಜದವರ ಕೊನೆ ಹಂತದ ಹೋರಾಟ. ಈ ಬಾರಿ ಜೀವ ಕೊಡುತ್ತೇವೆ ಹೊರತು ಮೀಸಲಾತಿ ಬಿಡುವುದಿಲ್ಲ ಎಂದರು.

ನಮ್ಮ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವುದು ನಿನ್ನೆ ಮೊನ್ನೆಯದಲ್ಲ. 1994ರಿಂದ ಹೋರಾಟ ನಡೆಸುತ್ತ ಬಂದಿದ್ದೇವೆ. ಆದರೂ ಯಾವ ಸರಕಾರ ನಮ್ಮ ಬಗ್ಗೆ ಗಮನ ಹರಿಸಿಲ್ಲ. ಈ ಬಾರಿ ಗಮನ ಹರಿಸಿ ನಮ್ಮ ಹಕ್ಕನ್ನು ಪಡೆಯುವುದು ನಿಶ್ಚಿತ. ನಾವು ಮೀಸಲಾತಿಗೆ  ಹೋರಾಡುತ್ತಿರುವುದು ರಾಜಕೀಯ ಉದ್ದೇಶಕ್ಕಲ್ಲ.

ನಮ್ಮ ಮಕ್ಕಳ ಶಿಕ್ಷಣ, ಉದ್ಯೋಗ ಮತ್ತು ಪಂಚಮಸಾಲಿ ಸಮಾಜದ ಜನಾಂಗದ ಕೃಷಿಕರ ಚಟುವಟಿಕೆಗೆ ಅಗತ್ಯವಿರುವ ಸೌಲಭ್ಯಕ್ಕಾಗಿ ಎಂದು ಹೇಳಿದರು. ಜ. 14ರಂದು ಕೂಡಲಸಂಗಮದಿಂದ ಶುರುವಾಗುವ ಪಾದಯಾತ್ರೆಯಲ್ಲಿ ಸಮಾಜದ 2 ಲಕ್ಷ ಜನರು ಭಾಗವಹಿಸಲಿದ್ದಾರೆ. ಬೆಂಗಳೂರು ವಿಧಾನಸೌಧಕ್ಕೆ ಮುತ್ತಿಗೆ ಹಾಕುವಾಗ ಸುಮಾರು 10ರಿಂದ 15 ಲಕ್ಷ ಜನರು ಭಾಗವಹಿಸಲಿದ್ದಾರೆ. ಈ ಹೋರಾಟದಲ್ಲಿ ರಾಜ್ಯದ ಪ್ರತಿ ಜಿಲ್ಲೆ, ಹಳ್ಳಿ ಹಳ್ಳಿಯಿಂದ ಜನರು ಭಾಗವಹಿಸಲಿದ್ದಾರೆ
ಎಂದರು.

ಪೂರ್ವಭಾವಿ ಸಭೆಯಲ್ಲಿ ಜೆಡಿಎಸ್‌ ಮುಖಂಡ ಅಪ್ಪುಗೌಡ ಪಾಟೀಲ, ಪಿ.ಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಡಾ| ಬಸವನಗೌಡ ಪಾಟೀಲ, ಲ.ರು. ಗೊಳಸಂಗಿ, ಬಿ.ಎಲ್‌. ಪಾಟೀಲ, ಸಂಜುಗೌಡ ಪಾಟೀಲ, ಡಾ| ಮಹಾಂತೇಶ ಜಾಲಗೇರಿ, ಸಿ.ಎಸ್‌. ಸೋಲ್ಲಾಪುರ, ಮಲ್ಲಿಕಾರ್ಜುನ ಹಿರೇಕೊಟ್ರಿ, ಅಂಬರೀಶ ನಾಗೂರ, ಬಸವರಾಜ ಗೊಳಸಂಗಿ, ಶಂಕರಗೌಡ ಬಿರಾದಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಹೋರಾಟಕ್ಕೆ ಶ್ರೀಗಳ ಬೆಂಬಲ
ಲಿಂಗಾಯತ ಪಂಚಮಸಾಲಿ ಪೀಠ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಬೇರೆ ಬೇರೆಯಾದರು ಕೂಡಾ ಸಮಾಜದ ವಿಷಯ ಬಂದಾಗ ಎರಡು ಪೀಠದ ಜಗದ್ಗುರು ನಮ್ಮ ಹಿಂದೆ ಇರುತ್ತಾರೆ. ಕೇವಲ ಪಂಚಮಸಾಲಿ ಸಮಾಜಕ್ಕೆ ಮಾತ್ರ ಮೀಸಲಾತಿಗಾಗಿ ಹೋರಾಟ ಮಾಡುತ್ತಿಲ್ಲ. ನಮ್ಮ ಅಣ್ಣ ತಮ್ಮಂದಿರಾದ ಲಿಂಗಾಯತ ಒಳಪಂಗಡದ ಜನರಿಗೂ ಉದ್ಯೋಗ ಶಿಕ್ಷಣದ ವಿಚಾರದಲ್ಲಿ ಕೇಂದ್ರ ಸರಕಾರಕ್ಕೆ ಒಬಿಸಿ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ.

ವಿಜಯಾನಂದ ಕಾಶಪ್ಪನವರ, ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.