ಮುದ್ದೇಬಿಹಾಳ ಭಾಗದ ಪಂಚರತ್ನ ರಥಯಾತ್ರೆ ಇಂದೇ ಸಂಜೆ 4ಕ್ಕೆ
Team Udayavani, Jan 21, 2023, 12:21 PM IST
ಮುದ್ದೇಬಿಹಾಳ: ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಜ.21ರ ಶನಿವಾರ ನಡೆಯಬೇಕಿದ್ದ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಂಚರತ್ನ ರಥಯಾತ್ರೆಯನ್ನು ಸಿಂದಗಿ ಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜ್ಯಾಳ ಅವರ ಹಠಾತ್ ನಿಧನ ಹಿನ್ನೆಲೆ ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ಈ ಮೊದಲು ತಿಳಿಸಲಾಗಿತ್ತು.
ಆದರೆ ಸೋಮಜ್ಯಾಳ ಅವರ ಅಂತ್ಯಕ್ರಿಯೆ ಇಂದೇ ಮದ್ಯಾಹ್ನ ನಡೆಯುವುದರಿಂದ ಅಂತ್ಯಕ್ರಿಯೆ ಮುಕ್ತಾಯಗೊಂಡ ಮೇಲೆ ಇಂದೇ ಅಂದರೆ ಜ. 21ರ ಶನಿವಾರ ಸಂಜೆ 4 ಕ್ಕೆ ನಡೆಯಲಿದೆ ಎಂದು ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಡಾ. ಸಿ.ಎಸ್.ಸೋಲಾಪೂರ ತಿಳಿಸಿದ್ದಾರೆ.
ಮುದ್ದೇಬಿಹಾಳ ಪಟ್ಟಣದಲ್ಲಿ ರೋಡ್ ಶೋ, ಬಹಿರಂಗ ಸಭೆ ಆಯೋಜಿಸಿ ನಂತರ ರಾತ್ರಿ ಬಳವಾಟದಲ್ಲಿ ಗ್ರಾಮ ವಾಸ್ತವ್ಯ ನಡೆಸಲು ಮಾಜಿ ಸಿಎಂ ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ