ಮುದ್ದೇಬಿಹಾಳ ಭಾಗದ ಪಂಚರತ್ನ ರಥಯಾತ್ರೆ ನಾಳೆಗೆ ಮುಂದೂಡಿಕೆ
Team Udayavani, Jan 21, 2023, 8:07 AM IST
ಮುದ್ದೇಬಿಹಾಳ: ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಜ.21ರ ಶನಿವಾರ ನಡೆಯಬೇಕಿದ್ದ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಂಚರತ್ನ ರಥಯಾತ್ರೆಯನ್ನು ಸಿಂದಗಿ ಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜ್ಯಾಳ ಅವರ ಹಠಾತ್ ನಿಧನ ಹಿನ್ನೆಲೆ ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಡಾ. ಸಿ.ಎಸ್.ಸೋಲಾಪೂರ ತಿಳಿಸಿದ್ದಾರೆ.
ಜೆಡಿಎಸ್ ಪಕ್ಷವು ಒಬ್ಬ ಸಾಮಾನ್ಯ ಕಾರ್ಯಕರ್ತನಿಗೂ ಗೌರವ ಕೊಡುವಂತಹ ಪಕ್ಷವಾಗಿದೆ. ಇಂಥದ್ದರಲ್ಲಿ ಘೋಷಿತ ಅಬ್ಯರ್ಥಿ ಸಾವಿನ ಮೇಲೆ ರಥಯಾತ್ರೆ ನಡೆಸುವುದು ಸೂಕ್ತವಲ್ಲ. ಹೀಗಾಗಿ ಅವರ ಗೌರವಾರ್ಥ ಇಂದಿನ ರಥಯಾತ್ರೆ ಮುಂದೂಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸೂಚಿಸಿದ ಹಿನ್ನೆಲೆ ಈ ತೀರ್ಮಾನ ಕೈಕೊಳ್ಳಲಾಗಿದೆ ಎಂದು ತಿಳಿಸಿದರು.
ಭಾನುವಾರ ಪೂರ್ವ ನಿಗದಿಯಂತೆ ಬಸರಕೋಡ ಮಾರ್ಗವಾಗಿ ಮುದ್ದೇಬಿಹಾಳಕ್ಕೆ ಆಗಮಿಸಿ ನಂತರ ಮಿಣಜಗಿ, ತಾಳಿಕೋಟೆ ಮೂಲಕ ಬಳವಾಟಕ್ಕೆ ಆಗಮಿಸಿ ಅಲ್ಲಿ ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯ ನಡೆಸುವರು ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ