ಉದ್ಯಾನವನ ಅಭಿವೃದ್ದಿಗೆ ಚಾಲನೆ
Team Udayavani, Apr 4, 2022, 5:41 PM IST
ಸಿಂದಗಿ: ಪಟ್ಟಣದಲ್ಲಿನ ಉದ್ಯಾನವನಗಳ ಅಭಿವೃದ್ಧಿಯಿಂದ ವಾರ್ಡ್ಗಳ ಸೌಂದರ್ಯ ಹೆಚ್ಚಾಗುವ ಜೊತೆಗೆ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಪುರಸಭೆ ಅಧ್ಯಕ್ಷ ಡಾ| ಶಾಂತವೀರ ಮನಗೂಳಿ ಹೇಳಿದರು.
ಪಟ್ಟಣದ ವಾರ್ಡ್ ನಂ. 3ರ ಸಂಗಮೇಶ್ವರ ಬಡಾವಣೆಯಲ್ಲಿನ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಪಟ್ಟಣದ ವಾರ್ಡ್ಗಳಲ್ಲಿ ಅಭಿವೃದ್ಧಿ ಮಾಡಿದ ನಂತರ ಸಾರ್ವಜನಿಕರು ಸ್ವತ್ಛತೆ ಕಾಪಾಡಿಕೊಳ್ಳಬೇಕು. ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ. ವಾರ್ಡ್ ನಂ. 3ರಲ್ಲಿನ ಸಂಗಮೇಶ್ವರ ಲೇಔಟ್ನಲ್ಲಿನ ಉದ್ಯಾನವನ್ನು ಪುರಸಭೆಯ 2021-22ನೇ ಸಾಲಿನ 15ನೇ ಹಣಕಾಸಿನ ಯೋಜನೆ ಅಡಿಯಲ್ಲಿ 4ಲಕ್ಷ ರೂ. ಅನುದಾನದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.
ಪುರಸಭೆ ಉಪಾಧ್ಯಕ್ಷ ಹಾಸಿಂಪೀರ ಆಳಂದ, ಮುಖ್ಯಾಧಿಕಾರಿ ಪ್ರಕಾಶ ಮದುಗೋಳಕರ, ವಾರ್ಡ್ ಸದಸ್ಯ ಶ್ರೀಶೈಲ ಭೀರಗೊಂಡ, ಅಭಿಯಂತರ ಅಜರುದ್ಧಿನ ನಾಟಿಕಾರ, ಶಿವು ಬಡಿಗೇರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ