ಹಸೆಮಣೆ ಏರಬೇಕಿದ್ದ ಯುವತಿ ಕೋವಿಡ್ಗೆ ಬಲಿ
Team Udayavani, May 12, 2021, 1:16 PM IST
ಮುದ್ದೇಬಿಹಾಳ: ಮೇ 23ರಂದು ಹಸೆಮಣೆ ಏರಿ ವೈವಾಹಿಕ ಜೀವನಕ್ಕೆ ಪದಾರ್ಪಣೆ ಮಾಡಬೇಕಿದ್ದ ಪಟ್ಟಣದ ಯುವತಿ ಶೃತಿ ಐಹೊಳ್ಳಿ (24) ಮಂಗಳವಾರ ಕೋವಿಡ್ ಮಹಾಮಾರಿಗೆ ಬಲಿಯಾದರು.
ಇಲ್ಲಿನ ವಿಬಿಸಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿರುವ ಸುಭಾಷಚಂದ್ರಐಹೊಳ್ಳಿಯವರ ಮೊದಲಪುತ್ರಿಯಾಗಿದ್ದ ಇವರು ಬಿಎಸ್ಸಿ, ಬಿಇಡಿ ಪದವೀಧರೆಯಾಗಿ ಗಣಿತ ವಿಷಯದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದರು. ಇಲ್ಲಿನ ಕೆಬಿಎಂಪಿ ಶಾಲೆಯಲ್ಲಿ 2018ರಿಂದ 2020ರವರೆಗೆಎರಡು ವರ್ಷಗಳ ಕಾಲ ಅತಿಥಿ ಶಿಕ್ಷಕಿಯಾಗಿದ್ದರು.
ಪಟ್ಟಣದಲ್ಲಿ ಹೆಚ್ಚುತ್ತಿರುವ ಕೋವಿಡ್ ಎರಡನೇಅಲೆಯಿಂದ ರಕ್ಷಿಸಿಕೊಳ್ಳಲು ಸ್ವಗ್ರಾಮಕ್ಕೆ ಹೋಗಿ ವಾಸವಾಗಿದ್ದರು. ಏಕಾಏಕಿ ಕೋವಿಡ್ ಕಾಣಿಸಿಕೊಂಡುಚಿಕಿತ್ಸೆ ಫಲಿಸದೆ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.
ಮದುವೆಗೆ ಎಲ್ಲ ತಯಾರಿ ಮಾಡಿಕೊಂಡು ಬಟ್ಟೆ, ಬಂಗಾರ, ಭಾಂಡೆ ಎಲ್ಲವನ್ನೂ ಖರೀದಿಸಿ ಮಗಳ ಮದುವೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲೀಗಸೂತಕದ ಛಾಯೆ ಮೂಡಿ ಎಲ್ಲರನ್ನೂ ಕಂಗೆಡಿಸಿದೆ. ಮೃತರಿಗೆ ತಂದೆ, ತಾಯಿ, ಸಹೋದರ, ಸಹೋದರಿ, ಅಪಾರ ಬಂಧುಬಳಗ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ