ಅಪಘಾತ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಗಾಯಾಳುಗಳು ಪರದಾಟ
Team Udayavani, Oct 28, 2019, 11:09 AM IST
ವಿಜಯಪುರ:ಎರಡು ಬೈಕ್ ಗಳ ನಡುವೆ ನಡೆದ ಅಪಘಾತ ಗಾಯಗೊಂಡಿದ್ದ ಇಬ್ಬರು ಬೈಕ್ ಸವಾರರನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ವೈದ್ಯರಿಲ್ಲದೇ ಚಿಕಿತ್ಸೆ ದೊರೆಯದ ಕಾರಣ ಸಂಬಂಧಿಗಳು ಅಕ್ರೋಶ ಹೊರ ಹಾಕಿದ ಘಟನೆ ಸಿಂದಗಿ ತಾಲೂಕಿನಲ್ಲಿ ಜರುಗಿದೆ.
ಸಿಂದಗಿ ಪೊಲೀಸ್ ಠಾಣೆಯಲ್ಲಿ ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ ಸಿಂದಗಿ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಗಾಯಾಳುಗಳಿಗೆ ತ್ವರಿತ ಚಿಕಿತ್ಸೆ ಸಿಗದೇ ಗಾಯಾಳುಗಳು ಪರದಾಡಿದ್ದಾರೆ.
ಇದರಿಂದ ಸಂಬಂಧಿಕರು, ಸ್ನೇಹಿತರು ತಾಲೂಕು ಆಸ್ಪತ್ರೆಯಲ್ಲಿ ದಾಂಧಲೆ ಮಾಡಿ ವೈದ್ಯರ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.