ಯಾತ್ರಿನಿವಾಸ ಕಾಮಗಾರಿಗೆ ಪಾಟೀಲ ಚಾಲನೆ
Team Udayavani, Mar 2, 2018, 3:31 PM IST
ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸುತ್ತಿರುವ ಯಾತ್ರಿ ನಿವಾಸಗಳಿಗೆ ಸಚಿವ ಎಂ.ಬಿ. ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯ ಅರಕೇರಿಯಲ್ಲಿ ಮಧುಗೊಂಡೆಶ್ವರ ಆಶ್ರಮದ ಹತ್ತಿರ, ಲೋಹಗಾಂವದಲ್ಲಿ ವಿರಕ್ತಾನಂದ ಮಠದ ಹತ್ತಿರ, ಬಾಬಾನಗರದ ದರ್ಗಾದ ಹತ್ತಿರ, ತಿಕೋಟಾದಲ್ಲಿ ಹನುಮಾನ ದೇವಸ್ಥಾನದ ಹತ್ತಿರ, ತಾಜಪುರ ಎಚ್ ಹಾಜಿಮಸ್ತಾನ, ಮೈಬೂಬ ಸುಭಾನಿ ದರ್ಗಾದ ಹತ್ತಿರ, ನಿಡೋಣಿ ಮುಸ್ಲಿಂ ಸಮಾಜದ ದರ್ಗಾದ ಹತ್ತಿರ, ಬಬಲೇಶ್ವರ ಮುಸ್ಲಿಂ ಸಮಾಜ ಈದ್ಗಾ ಹತ್ತಿರ, ಸಂಗಾಪುರ ಎಸ್.ಎಚ್ ಸಿದ್ದಲಿಂಗೇಶ್ವರ ಕಮರಿಮಠದ ಹತ್ತಿರ, ಕಂಬಾಗಿ ಕಂಬಾಗೇಶ್ವರ ಗುಡಿ ಹತ್ತಿರ, ಚಿಕ್ಕಗಲಗಲಿ ರಾಮಲಿಂಗೇಶ್ವರ ಗುಡಿ ಹತ್ತಿರ, ಕಾಖಂಡಕಿ ಮಸೀದಿ ಹತ್ತಿರ, ಕಾರಜೋಳ ಬೀರಲಿಂಗೇಶ್ವರ ದೇವಸ್ಥಾನದ ಹತ್ತಿರ ತಲಾ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಯಾತ್ರಿ ನಿವಾಸಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಈ ವೇಳೆ ಮಾತನಾಡಿದ ಸಚಿವ ಡಾ| ಎಂ.ಬಿ. ಪಾಟೀಲ, ಕನಮಡಿ ಕೆಳಗಿನಮಠದ ಹತ್ತಿರ, ಕಣಬೂರ ರಾಚೋಟೇಶ್ವರ ದೇವಸ್ಥಾನದ ಹತ್ತಿರ ಹಾಗೂ ಬೆಳ್ಳುಬ್ಬಿಯ ಮಳೆ ಮಲ್ಲೇಶ್ವರ ದೇವಸ್ಥಾನದ ಹತ್ತಿರ ಕೂಡ ಪ್ರವಾಸೋದ್ಯಮ ಇಲಾಖೆಯಿಂದ ತಲಾ 25 ಲಕ್ಷ ರೂ. ವೆಚ್ಚದ ಯಾತ್ರಿ ನಿವಾಸಗಳು ಮಂಜೂರಾತಿ ಪಡೆದಿವೆ ಎಂದರು.
ಬಬಲೇಶ್ವರ ವಿಧಾನಸಭಾ ಕ್ಷೇತ್ರದ 15 ವಿವಿಧ ಶೃದ್ಧಾ ಕೇಂದ್ರಗಳಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಯಾತ್ರಿ ನಿವಾಸಗಳನ್ನು ನಿರ್ಮಿಸುತ್ತಿದ್ದು, ಸಮಿತಿಯವರು ಸೂಕ್ತ ನಿರ್ವಹಣೆ ಮೂಲಕ ಯಾತ್ರಿ ನಿವಾಸಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ