ಆರೆಸ್ಸೆಸ್‌ನಿಂದ ದೇಶಪ್ರೇಮ ವೃದ್ಧಿ


Team Udayavani, Jan 21, 2019, 11:38 AM IST

vij-2.jpg

ತಾಳಿಕೋಟೆ: ಹೆತ್ತ ತಾಯಿ ಪಾಪ ಪುಣ್ಯ ಕಲಿಸಿಕೊಟ್ಟರೆ ಆರೆಸ್ಸೆಸ್‌ ದೇಶ ಪ್ರೇಮ, ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯಪುರ ವಿಭಾಗದ ಶಾರೀರಿಕ ಪ್ರಮುಖರಾದ ಬಾಬು ಭಟ್ಕಳ ನುಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ತಾಳಿಕೋಟೆ ನಗರ ಶಾಖೆ ವತಿಯಿಂದ ಆಯೋಜಿಸಿದ್ದ ಗಣ ವೇಷಧಾರಿ ಸ್ವಯಂ ಸೇವಕರಿಂದ ಆಕರ್ಷಕ ಪಥಸಂಚಲನ ನಂತರ ಕನ್ನಡ ಶಾಲಾ ಮೈದಾನದಲ್ಲಿ ನಡೆದ ತಾಲೂಕು ಸಮಾವೇಶದಲ್ಲಿ ಮುಖ್ಯ ವಕ್ತಾರರಾಗಿ ಅವರು ಮಾತನಾಡಿದರು.

ಭಾರತ ದೇಶ ಪುಣ್ಯಭೂಮಿಯಾಗಿದೆ. ಈ ಭೂಮಿಯಲ್ಲಿ ಜನಿಸಿದ ಛತ್ರಪತಿ ಶಿವಾಜಿ ಮಹಾರಾಜರು ಜಾತಿ ವ್ಯವಸ್ಥೆಯನ್ನು ದೂರಿಕರಿಸಿ ಹಿಂದೂ ಸಾಮ್ರಾಜ್ಯ ಸ್ಥಾಪನೆ ಮಾಡಿದರು. ಅವರ ಬೆಳವಣಿಗೆಯುದ್ದಕ್ಕೂ ತಾಯಿ ಜೀಜಾಮಾತೆಯ ಪ್ರೇರಣೆ, ಧೈರ್ಯದ ಮಾತುಗಳು ಅವರ ಬೆಳವಣಿಗೆಗೆ ಕಾರಣವಾದವು. ಅಂತಹ ಸಂಸ್ಕಾರವಂತ ಧೈರ್ಯ ತುಂಬುವಂತಹ ಕಾರ್ಯ ನಡೆಯಬೇಕಾಗಿದೆ ಎಂದರು. ತಾಯಿಯಾದವಳು ಮಕ್ಕಳಿಗೆ ಕೇವಲ ಸಂಸ್ಕಾರವನ್ನು ಕಲಿಸಿದರೆ ಸಾಲದು, ವೀರ ಮಹಾ ಪುರುಷರಾದ ಛತ್ರಪತಿ ಶಿವಾಜಿ ಮಹಾರಾಜ, ಸ್ವಾಮಿ ವಿವೇಕಾನಂದ, ಭಗತ್‌ಸಿಂಗ್‌, ಮಹಾರಾಣಾ ಪ್ರತಾಪ್‌ ಸಿಂಹ್‌ ಅವರ ಕಥೆಗಳನ್ನು ಹೇಳಿ ವಿಶ್ಲೇಷಿಸುವಂತಹ ಕಾರ್ಯವಾಗಬೇಕು. ಇದರಿಂದ ಜಾತಿ ವ್ಯವಸ್ಥೆಯಿಂದ ಹಾಳಾಗುತ್ತಿರುವ ದೇಶವನ್ನು ಒಂದುಗೂಡಿಸುವುದರೊಂದಿಗೆ ಹಿಂದೂತ್ವದ ತಳಹದಿ ಮೇಲೆ ಡಾ| ಹೆಗಡೆವಾರ್‌ ಮತ್ತು ಗರೂಜಿ ಅವರ ಕನಸಿನಂತೆ ಕಟ್ಟಲು ಸಾಧ್ಯವಾಗುತ್ತದೆ ಎಂದರು. ಗೋಂದಳಿ ಸಮಾಜದ ಅಧ್ಯಕ್ಷ ಶಿವಾಜಿ ಸೂರ್ಯವಂಶಿ ವೇದಿಕೆಯಲ್ಲಿದ್ದರು.

ಫಥ ಸಂಚಲನ: ಕಾರ್ಯಕ್ರಮಕ್ಕೂ ಮೊದಲು ರಾಜವಾಡೆಯಿಂದ ಪ್ರಾರಂಭಗೊಂಡ ಗಣ ವೇಷಧಾರಿ ಸ್ವಯಂ ಸೇವಕರ ಪಥ ಸಂಚಲನ ವಿವಿಧ ಮಾರ್ಗಗಳ ಮೂಲಕ ಸಂಚರಿಸಿ ಕನ್ನಡ ಶಾಲಾ ಮಾದಾನದ ಮುಖ್ಯ ವೇದಿಕೆಗೆ ತಲುಪಿತು.

ಪಥ ಸಂಚಲನದ ದಾರಿಯುದ್ದಕ್ಕೂ ರಂಗೋಲಿ ಚಿತ್ತಾರಗಳು ಹಾಗೂ ಛತ್ರಪತಿ ಶಿವಾಜಿ ಮಹಾರಾಜ, ಸ್ವಾಮಿ ವಿವೇಕಾನಂದ, ಭಗತ್‌ ಸಿಂಗ್‌, ಮಹಾರಾಣಾ ಪ್ರತಾಪ ಸಿಂಹ್‌, ಒನಕೆ ಓಬವ್ವ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣನವರ ಛದ್ಮ ವೇಷ ಧರಿಸಿದ ಮಕ್ಕಳು ಹಾಗೂ ಭಾರತ ಮಾತೆ ಭಾವ ಚಿತ್ರಗಳೊಂದಿಗೆ ಸ್ವಾಗತ ಕೋರಲಾಯಿಒತು.

ಸಮಾವೇಶಕ್ಕೂ ಮುಂಚೆ ಸ್ವಯಂ ಸೇವಕರಿಂದ ದಂಡ ಪ್ರದರ್ಶನ, ಘೋಷವಾದ್ಯ ಜರುಗಿದವು. ಪಥ ಸಂಚಲನ ವೇಳೆ ಅಹಿತಕರ ಘಟನೆ ಜರುಗದಂತೆ ಮುನ್ನಚ್ಚರಿಕೆ ಕ್ರಮವಾಗಿ ಡಿಎಸ್‌ಪಿ ಮಹೇಶ್ವರಗೌಡ, ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸೈ ಜಿ.ಎಸ್‌. ಬಿರಾದಾರ ಬಂದೋಬಸ್ತ್ ಏರ್ಪಡಿಸಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.