ಕಬ್ಬಿಗೆ ಸರ್ಕಾರ ನಿಗದಿ ಮಾಡಿದ ದರ ಕೊಡಿ
Team Udayavani, Sep 11, 2022, 4:41 PM IST
ಆಲಮಟ್ಟಿ: ಬಾಗಲಕೋಟೆ ಜಿಲ್ಲೆಯ ನಾಗರಾಳ-ನಾಯನೇಗಲಿಯಲ್ಲಿರುವ ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಇನ್ನುಳಿದ ಸಕ್ಕರೆ ಕಾರ್ಖಾನೆಗಳಿಗಿಂತಲೂ ಕಡಿಮೆ ದರ ನೀಡುತ್ತಿರುವುದು ಸರಿಯಲ್ಲ. ಇನ್ನುಳಿದ ಸಕ್ಕರೆ ಕಾರ್ಖಾನೆಯಂತೆ ರೈತರು ಕಳುಹಿಸಿದ ಕಬ್ಬಿಗೆ ದರವನ್ನು ನೀಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನಿಡಗುಂದಿ ತಾಲೂಕು ಘಟಕದ ವತಿಯಿಂದ ಒತ್ತಾಯಿಸಲಾಯಿತು.
ಈ ಕುರಿತು ಶನಿವಾರ ರಾಷ್ಟ್ರೀಯ ಹೆದ್ದಾರಿ-50 ಚತುಷ್ಪಥ ರಸ್ತೆಗೆ ಹೊಂದಿಕೊಂಡಿರುವ ಬಾಗಲಕೋಟೆ ತಾಲೂಕಿನ ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆಗೆ ತೆರಳಿದ ಸಂಘದ ಪದಾಧಿಕಾರಿಗಳು ಮತ್ತು ರೈತರು ಆಡಳಿತ ಮಂಡಳಿಗೆ ಮನವಿ ಮಾಡಿದ ಅವರು, ವಿಜಯಪುರ ಜಿಲ್ಲೆಯ ಕಾರಜೋಳದಲ್ಲಿರುವ ಬಸವೇಶ್ವರ ಸಕ್ಕರೆ ಕಾರ್ಖಾನೆ ಮತ್ತು ಬೀಳಗಿ ತಾಲೂಕಿನ ಬಾಡಗಂಡಿ ಸಕ್ಕರೆ ಕಾರ್ಖಾನೆಯವರು ಕಳೆದ ವರ್ಷದಿಂದ ಒಂದು ಟನ್ ಕಬ್ಬಿಗೆ 2700 ರೂ. ಗಳನ್ನು ರೈತರ ಖಾತೆಗೆ ಮಾಡುತ್ತಿದ್ದಾರೆ. ಪ್ಯಾರಿ ಸಮೂಹ ಸಂಸ್ಥೆಯ ಸಕ್ಕರೆ ಕಾರ್ಖಾನೆಯವರು ಸರ್ಕಾರದ ನಿರ್ದೇಶನವನ್ನು ಗಾಳಿಗೆ ತೂರಿ 2456 ರೂ. ಮಾತ್ರ ರೈತರ ಖಾತೆಗಳಿಗೆ ಜಮಾ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಆಡಳಿತಮಂಡಳಿಯವರು ಕೂಡಲೇ ಸರ್ಕಾರ ನಿಗದಿಪಡಿಸಿದ ದರದಂತೆ ರೈತರಿಗೆ ಹಣ ಜಮಾ ಮಾಡಬೇಕು. ಇಲ್ಲದಿದ್ದರೆ ಕಾರ್ಖಾನೆ ವಿರುದ್ದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ, ಮುತ್ತು ದೇಸಾಯಿ, ಸಾಬಣ್ಣ ಅಂಗಡಿ, ರಾಜು ಯಲಿಗಾರ, ಸುಭಾಷ್ ಚೋಪಡೆ, ವೆಂಕಟೇಶ ವಡ್ಡರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ