Vijayapura: ಯತೀಂದ್ರ, ಹರಿಪ್ರಸಾದ್ ಹೇಳಿಕೆಗೆ ಪೇಜಾವರಶ್ರೀ ಆಕ್ಷೇಪ


Team Udayavani, Jan 4, 2024, 10:46 AM IST

Pejavarashree objected to the statement of Yatindra and Hariprasad

ವಿಜಯಪುರ: ಆರ್ ಎಸ್‌ಎಸ್‌ – ಬಿಜೆಪಿ ಹಿಂದೂರಾಷ್ಟ್ರ ಮಾಡುವ ಮೂಲಕ ಮತ್ತೊಂದು ಪಾಕಿಸ್ತಾನ, ಅಫಘಾನಿಸ್ಥಾನ ಮಾಡ ಹೊರಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಾಗೂ ಮತ್ತೊಂದು ಗೋದ್ರಾ ಘಟನೆ ನಡೆಯಲಿದೆ ಎಂದಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥರು ಆಕ್ಷೇಪ ವ್ಯಕಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಶ್ರೀಗಳು, ಭಾರತ ಎಂದಿಗೂ ಹಿಂದೂ ರಾಷ್ಟ್ರವಾಗಿಯೇ ಇದೆ. ಆ ಕಾರಣಕ್ಕಾಗಿಯೇ ಎಲ್ಲ ಜಾತಿ, ಧರ್ಮ, ಪಂಥ, ಪಂಗಡಗಳ ಜನರನ್ನು ಒಳಗೊಂಡಿದೆ. ಹೀಗಿದ್ದರೂ ಪಾಕಿಸ್ತಾನ, ಅಫಘಾನಿಸ್ಥಾನ ಮಾಡ ಹೊರಟಿದ್ದಾರೆ ಎಂಬುದು ಈ ಕುರಿತು ಅವರು ಸಿದ್ಧತೆ ನಡೆಸಿದ್ದಾರೆ ಎನ್ನುವುದನ್ನು ಸೂಚಿಸುತ್ತದೆ ಎಂದು ಹೇಳಿದರು.

ಮತ್ತೊಂದು ಗೋದ್ರಾ ಘಟನೆ ನಡೆಯಲಿದೆ ಎಂಬ ಹೇಳಿಕೆಯ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ದೇಶದಲ್ಲಿ ಭಯ ಸೃಷ್ಟಿಸಲು ಮುಂದಾಗಿದ್ದಾರೆ. ಇವರಿಗೆ ವಿಧ್ವಂಸಕ ಕೃತ್ಯ ನಡೆಯುವ ಮಾಹಿತಿ ಇದ್ದರೆ ಕೂಡಲೇ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಕೇಳಿದರೆ ಹೇಳುತ್ತೇನೆ ಎನ್ನುವುದು ವಿಧ್ವಂಸಕ ಕೃತ್ಯ ನಡೆಯಲಿ ಎಂಬ ಮನೋಭಾವವಾಗಲಿದೆ. ಜವಾಬ್ದಾರಿ ಸ್ಥಾನದಲ್ಲಿರುವವರು ಪ್ರಜೆಗಳ ರಕ್ಷಿಸುವರೋ, ವಿಧ್ವಂಸಕ ಕೃತ್ಯ ನಡೆಸುವವರನ್ನು ರಕ್ಷಿಸಲು ಮುಂದಾಗಿದ್ದಾರೋ. ಇಂಥ ಹೇಳಿಕೆಗಳ ಮೂಲಕ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸುವ ಕೃತ್ಯ ಮಾಡುತ್ತಿದ್ದಾರೆ ಎಂದು ಹರಿಪ್ರಸಾದ ವಿರುದ್ಧ ಹರಿಹಾಯ್ದರು.

ಶತಮಾನಗಳ ಕನಸಾಗಿದ್ದ ರಾಮ ಮಂದಿರ ನಿರ್ಮಾಣ ಇದೀಗ ನನಸಾಗುತ್ತಿದೆ. 500 ವರ್ಷಗಳ ಹಿಂದಿನಿಂದಲೂ ಈ ಕನಸು ಕಾಣುತ್ತಿದ್ದೆವು ಎಂದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಅತಿ ಹೆಚ್ಚು ಸಮಯ ಅಧಿಕಾರದಲ್ಲಿದ್ದ ಕಾಂಗ್ರೆಸ್ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗದೆ ವಿರೋಧಿಸಿತು. ಇದೀಗ ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ, ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂಬ ಹೇಳಿಕೆ ವೈರುಧ್ಯದಿಂದ ಕೂಡಿದೆ ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು.

ರಾಮ ರಾಜ್ಯ ಮಾಡದಿರುವ ಅಪವಾದವನ್ನು ಹೊರಲು ಸಿದ್ಧರಿದ್ದಾರೆಯೇ? ಲಾಭವಾದರೆ ನಮಗಿರಲಿ, ಲೋಪವಾದರೆ ಅವರಿಗೆ ಎನ್ನುವ ಮನಸ್ಥಿತಿ ಸರಿಯಲ್ಲ. ರಾಮನ ಹೆಸರಿನಲ್ಲಿ ಯಾರು ರಾಜಕೀಯ ಮಾಡುತ್ತಿದ್ದಾರೆ ಹೇಳಿ ಎಂದರು.

ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಕೋಟ್ಯಾಂತರ ಹಣ ಸಂಗ್ರಹಿಸಿ ಕೊಟ್ಟಿರುವ ತಮ್ಮನ್ನು ಆಹ್ವಾನಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಪಾದರು, ದೇಶದಲ್ಲಿ ದೊಡ್ಡ ದೊಡ್ಡ ಪ್ರಮಾಣದಲ್ಲಿ ದೇಣಿಗೆ ನೀಡಿದವರನ್ನೂ ಆಹ್ವಾನಿಸಿಲ್ಲ. ವಿಶ್ವ ಹಿಂದೂ ಪರಿಷತ್ತು ಹಿರಿಯರನ್ನೂ ಆಹ್ವಾನಿಸಿಲ್ಲ. ಸ್ಥಳದ ಅಭಾವದಿಂದ ಹೆಚ್ಚಿನ ಪ್ರಮಾಣದಲ್ಲಿ ಆಹ್ವಾನ ನೀಡಿಲ್ಲ. ಬದಲಾಗಿ ಪ್ರತಿನಿಧಿತ್ವದ ಮೂಲಕ ಲೋಕಾರ್ಪಣೆ ನಡೆಯುತ್ತಿದೆ ಎಂದು ಸಮಜಾಯಿಷಿ ನೀಡಿದರು.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಮ ಲೋಕಾರ್ಪಣೆ ಮಾಡುತ್ತಿರುವುದು ಬಿಜೆಪಿ ರಾಜಕೀಯ ಲಾಭಕ್ಕಾಗಿ ಎಂಬ ಟೀಕೆ ಸರಿಯಲ್ಲ. ಇಂಥ ಹೇಳಿಕೆಗಳು ರಾಮ ಮಂದಿರ ಲೋಕಾರ್ಪಣೆ ತಡೆಯುವ ಹುನ್ನಾರವಷ್ಟೇ. ವಿಧಾನಸಭೆ, ಲೋಕಸಭೆ ಚುನಾವಣೆ ಐದು ವರ್ಷದ ಅವಧಿ. ಮಂದಿರ ಲೋಕಾರ್ಪಣೆ ಯಾವಾಗಲಾದರೂ ಆಗಲೇಬೇಕಿದ್ದು, ಈಗ ಆಗುತ್ತಿದೆ ಎಂದರು.

ತಪ್ಪಿಸ್ಥರನ್ನು ಶಿಕ್ಷಿಸಲು ನಮ್ಮ ವಿರೋಧವಿಲ್ಲ. ಆದರೆ ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಕರಸೇವಕರ ಬಂಧನದ ಮೂಲಕ ಸರ್ಕಾರ ತಪ್ಪು ಸಂದೇಶ ರವಾನಿಸುವ ಕೆಲಸ ಮಾಡುತ್ತಿದೆ. ಇದು ಸರಿಯಾದ ಸಮಯವಲ್ಲ ಎಂದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.