Vijayapura: ಯತೀಂದ್ರ, ಹರಿಪ್ರಸಾದ್ ಹೇಳಿಕೆಗೆ ಪೇಜಾವರಶ್ರೀ ಆಕ್ಷೇಪ


Team Udayavani, Jan 4, 2024, 10:46 AM IST

Pejavarashree objected to the statement of Yatindra and Hariprasad

ವಿಜಯಪುರ: ಆರ್ ಎಸ್‌ಎಸ್‌ – ಬಿಜೆಪಿ ಹಿಂದೂರಾಷ್ಟ್ರ ಮಾಡುವ ಮೂಲಕ ಮತ್ತೊಂದು ಪಾಕಿಸ್ತಾನ, ಅಫಘಾನಿಸ್ಥಾನ ಮಾಡ ಹೊರಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಾಗೂ ಮತ್ತೊಂದು ಗೋದ್ರಾ ಘಟನೆ ನಡೆಯಲಿದೆ ಎಂದಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥರು ಆಕ್ಷೇಪ ವ್ಯಕಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಶ್ರೀಗಳು, ಭಾರತ ಎಂದಿಗೂ ಹಿಂದೂ ರಾಷ್ಟ್ರವಾಗಿಯೇ ಇದೆ. ಆ ಕಾರಣಕ್ಕಾಗಿಯೇ ಎಲ್ಲ ಜಾತಿ, ಧರ್ಮ, ಪಂಥ, ಪಂಗಡಗಳ ಜನರನ್ನು ಒಳಗೊಂಡಿದೆ. ಹೀಗಿದ್ದರೂ ಪಾಕಿಸ್ತಾನ, ಅಫಘಾನಿಸ್ಥಾನ ಮಾಡ ಹೊರಟಿದ್ದಾರೆ ಎಂಬುದು ಈ ಕುರಿತು ಅವರು ಸಿದ್ಧತೆ ನಡೆಸಿದ್ದಾರೆ ಎನ್ನುವುದನ್ನು ಸೂಚಿಸುತ್ತದೆ ಎಂದು ಹೇಳಿದರು.

ಮತ್ತೊಂದು ಗೋದ್ರಾ ಘಟನೆ ನಡೆಯಲಿದೆ ಎಂಬ ಹೇಳಿಕೆಯ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ದೇಶದಲ್ಲಿ ಭಯ ಸೃಷ್ಟಿಸಲು ಮುಂದಾಗಿದ್ದಾರೆ. ಇವರಿಗೆ ವಿಧ್ವಂಸಕ ಕೃತ್ಯ ನಡೆಯುವ ಮಾಹಿತಿ ಇದ್ದರೆ ಕೂಡಲೇ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಕೇಳಿದರೆ ಹೇಳುತ್ತೇನೆ ಎನ್ನುವುದು ವಿಧ್ವಂಸಕ ಕೃತ್ಯ ನಡೆಯಲಿ ಎಂಬ ಮನೋಭಾವವಾಗಲಿದೆ. ಜವಾಬ್ದಾರಿ ಸ್ಥಾನದಲ್ಲಿರುವವರು ಪ್ರಜೆಗಳ ರಕ್ಷಿಸುವರೋ, ವಿಧ್ವಂಸಕ ಕೃತ್ಯ ನಡೆಸುವವರನ್ನು ರಕ್ಷಿಸಲು ಮುಂದಾಗಿದ್ದಾರೋ. ಇಂಥ ಹೇಳಿಕೆಗಳ ಮೂಲಕ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸುವ ಕೃತ್ಯ ಮಾಡುತ್ತಿದ್ದಾರೆ ಎಂದು ಹರಿಪ್ರಸಾದ ವಿರುದ್ಧ ಹರಿಹಾಯ್ದರು.

ಶತಮಾನಗಳ ಕನಸಾಗಿದ್ದ ರಾಮ ಮಂದಿರ ನಿರ್ಮಾಣ ಇದೀಗ ನನಸಾಗುತ್ತಿದೆ. 500 ವರ್ಷಗಳ ಹಿಂದಿನಿಂದಲೂ ಈ ಕನಸು ಕಾಣುತ್ತಿದ್ದೆವು ಎಂದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಅತಿ ಹೆಚ್ಚು ಸಮಯ ಅಧಿಕಾರದಲ್ಲಿದ್ದ ಕಾಂಗ್ರೆಸ್ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗದೆ ವಿರೋಧಿಸಿತು. ಇದೀಗ ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ, ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂಬ ಹೇಳಿಕೆ ವೈರುಧ್ಯದಿಂದ ಕೂಡಿದೆ ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು.

ರಾಮ ರಾಜ್ಯ ಮಾಡದಿರುವ ಅಪವಾದವನ್ನು ಹೊರಲು ಸಿದ್ಧರಿದ್ದಾರೆಯೇ? ಲಾಭವಾದರೆ ನಮಗಿರಲಿ, ಲೋಪವಾದರೆ ಅವರಿಗೆ ಎನ್ನುವ ಮನಸ್ಥಿತಿ ಸರಿಯಲ್ಲ. ರಾಮನ ಹೆಸರಿನಲ್ಲಿ ಯಾರು ರಾಜಕೀಯ ಮಾಡುತ್ತಿದ್ದಾರೆ ಹೇಳಿ ಎಂದರು.

ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಕೋಟ್ಯಾಂತರ ಹಣ ಸಂಗ್ರಹಿಸಿ ಕೊಟ್ಟಿರುವ ತಮ್ಮನ್ನು ಆಹ್ವಾನಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಪಾದರು, ದೇಶದಲ್ಲಿ ದೊಡ್ಡ ದೊಡ್ಡ ಪ್ರಮಾಣದಲ್ಲಿ ದೇಣಿಗೆ ನೀಡಿದವರನ್ನೂ ಆಹ್ವಾನಿಸಿಲ್ಲ. ವಿಶ್ವ ಹಿಂದೂ ಪರಿಷತ್ತು ಹಿರಿಯರನ್ನೂ ಆಹ್ವಾನಿಸಿಲ್ಲ. ಸ್ಥಳದ ಅಭಾವದಿಂದ ಹೆಚ್ಚಿನ ಪ್ರಮಾಣದಲ್ಲಿ ಆಹ್ವಾನ ನೀಡಿಲ್ಲ. ಬದಲಾಗಿ ಪ್ರತಿನಿಧಿತ್ವದ ಮೂಲಕ ಲೋಕಾರ್ಪಣೆ ನಡೆಯುತ್ತಿದೆ ಎಂದು ಸಮಜಾಯಿಷಿ ನೀಡಿದರು.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಮ ಲೋಕಾರ್ಪಣೆ ಮಾಡುತ್ತಿರುವುದು ಬಿಜೆಪಿ ರಾಜಕೀಯ ಲಾಭಕ್ಕಾಗಿ ಎಂಬ ಟೀಕೆ ಸರಿಯಲ್ಲ. ಇಂಥ ಹೇಳಿಕೆಗಳು ರಾಮ ಮಂದಿರ ಲೋಕಾರ್ಪಣೆ ತಡೆಯುವ ಹುನ್ನಾರವಷ್ಟೇ. ವಿಧಾನಸಭೆ, ಲೋಕಸಭೆ ಚುನಾವಣೆ ಐದು ವರ್ಷದ ಅವಧಿ. ಮಂದಿರ ಲೋಕಾರ್ಪಣೆ ಯಾವಾಗಲಾದರೂ ಆಗಲೇಬೇಕಿದ್ದು, ಈಗ ಆಗುತ್ತಿದೆ ಎಂದರು.

ತಪ್ಪಿಸ್ಥರನ್ನು ಶಿಕ್ಷಿಸಲು ನಮ್ಮ ವಿರೋಧವಿಲ್ಲ. ಆದರೆ ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಕರಸೇವಕರ ಬಂಧನದ ಮೂಲಕ ಸರ್ಕಾರ ತಪ್ಪು ಸಂದೇಶ ರವಾನಿಸುವ ಕೆಲಸ ಮಾಡುತ್ತಿದೆ. ಇದು ಸರಿಯಾದ ಸಮಯವಲ್ಲ ಎಂದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.