ಜನರಿಂದ ಮರಾಠಿ ವಿದ್ಯಾಲಯ ಬಳಿ ದಿಢೀರ್‌ ರಸ್ತೆ ತಡೆ


Team Udayavani, Jul 5, 2022, 5:33 PM IST

18roadblock

ವಿಜಯಪುರ: ನಗರದಲ್ಲಿ ಹಾಳಾಗಿದ್ದ ಮನಗೂಳಿ ರಸ್ತೆ ದುರಸ್ತಿ ಕಾರ್ಯ ಮಂದಗತಿಯಲ್ಲಿ ಸಾಗಿರುವುದರಿಂದ ಸಂಚಾರಕ್ಕೆ ಸಮಸ್ಯೆಯಾಗಿದ್ದನ್ನು ವಿರೋಧಿಸಿ ಸಾರ್ವಜನಿಕರು ಮರಾಠಿ ವಿದ್ಯಾಲಯದ ಬಳಿ ರಸ್ತೆ ಸಂಚಾರ ತಡೆದು ದಿಢೀರ್‌ ಪ್ರತಿಭಟನೆ ನಡೆಸಿದರು.

ಸೋಮವಾರ ಬೆಳಗ್ಗೆ 11ರ ವೇಳೆ ರಸ್ತೆಗಿಳಿದ ಮನಗೂಳಿ ರಸ್ತೆ ಮಾರ್ಗದ ವಿವಿಧ ಕಾಲೋನಿ ಜನರು, ರಸ್ತೆ ಸಂಚಾರ ತಡೆದು ಪ್ರತಿಭಟಿಸಿದರು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಕಾಮಗಾರಿ ತ್ವರಿತಕ್ಕೆ ಆದೇಶ ನೀಡುವವರೆಗೂ ರಸ್ತೆ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು.

ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರಿಗೂ ಮಣಿಯಲಿಲ್ಲ. ಬದಲಾಗಿ ಸಂಬಂಧಿಸಿದ ಅಧಿಕಾರಿಗಳನ್ನೇ ಸ್ಥಳಕ್ಕೆ ಕರೆಸಿ ಕಾಮಗಾರಿ ಮುಗಿಸುವ ನಿಖರ ದಿನಾಂಕ ತಿಳಿಸುವಂತೆ ಆಗ್ರಹಿಸಿದರು.

ಸದರಿ ರಸ್ತೆಯನ್ನು ದುರಸ್ತಿ ನೆಪದಲ್ಲಿ ಅಗೆದು ಹಾಕಿ ಸುಮಾರು ಆರೇಳು ತಿಂಗಳಾಗಿದೆ. ಕಳೆದ ಕೆಲವು ತಿಂಗಳಿಂದ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸವಾರರು, ಸಾರ್ವಜನಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಮತ್ತೂಂದೆಡೆ ರಸ್ತೆಯನ್ನು ಅಗೆದಿರುವ ಕಾರಣ ಧೂಳು ಆವರಿಸುತ್ತಿದ್ದು ರಸ್ತೆ ಎರಡೂ ಬದಿಯಲ್ಲಿರುವ ನಿವಾಸಿಗಳು ಕಂಗೆಟ್ಟಿದ್ದಾರೆ. ಈ ಮಾರ್ಗದ ಬಹುತೇಕ ಸಣ್ಣ ವ್ಯಾಪಾರಿಗಳು ಧೂಳಿನ ಕಾರಣದಿಂದ ಅಂಗಡಿಗಳನ್ನೇ ಸಂಪೂರ್ಣ ಬಂದ್‌ ಮಾಡಿದ್ದು ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ದೂರಿದರು.

ನಿವಾಸಿಗಳ ಪರವಾಗಿ ಮಾತನಾಡಿದ ಸತೀಶ ಪಾಟೀಲ, ನಗರದ ಮನಗೂಳಿ ರಸ್ತೆ ನಗರದ ಪ್ರಮುಖ ರಸ್ತೆಯಾಗಿದ್ದು ದುರಸ್ತಿ ನೆಪದಲ್ಲಿ ಕಾಮಗಾರಿ ಕೈಗೆತ್ತಿಕೊಂಡರೂ ಹಲವು ತಿಂಗಳಿಂದ ಸಂಪೂರ್ಣ ಸ್ಥಗಿತಗೊಂಡಿದೆ. ಜಿಪಂ ಸಿಇಒ, ಜಿಲ್ಲಾಧಿಕಾರಿ, ಸಚಿವರು, ಶಾಸಕರು, ಸಂಸದರು ಎಲ್ಲರೂ ಇದೇ ಮಾರ್ಗವಾಗಿ ವಾಹನಗಳಲ್ಲಿ ಓಡಾಡುತ್ತಿದ್ದರೂ ಜನರ ಸಮಸ್ಯೆ ಆಲಿಸುತ್ತಿಲ್ಲ. ಸ್ಥಗಿತಗೊಂಡಿರುವ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಂಡಿಲ್ಲ ಎಂದು ವಾಗ್ಧಾಳಿ ನಡೆಸಿದರು.

ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವ ಕಾರಣ ಇಡಿ ಪ್ರದೇಶದಲ್ಲಿ ವಾಹನಗಳಿಂದಾಗಿ ಧೂಳು ವ್ಯಾಪಕವಾಗಿದೆ ಹರಡುತ್ತಿದೆ. ಸಂಚಾರವೂ ಅವ್ಯವಸ್ಥೆಯಾಗಿದೆ. ಪರಿಣಾಮ ಈ ಮಾರ್ಗದ ಪರಿಸರದಲ್ಲಿರುವ ನಿವಾಸಿಗಳು ಧೂಳಿನಿಂದ ಹಾಗೂ ಹದಗೆಟ್ಟ ರಸ್ತೆಯಿಂದ ಕಂಗೆಟ್ಟಿದ್ದಾರೆ. ಹೀಗಾಗಿ ತಕ್ಷಣವೇ ರಸ್ತೆ ಕಾಮಗಾರಿ ಆರಂಭಿಸಿ ತುರ್ತಾಗಿ ಮುಗಿಸಬೇಕು. ಈ ಭರವಸೆ ನೀಡಲು ಜಿಲ್ಲಾಡಳಿತ ಹಾಗೂ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.