ಮಧ್ಯಮ ವರ್ಗದ ಕಲ್ಯಾಣಕ್ಕೆ ಯೋಜನೆ


Team Udayavani, Jan 10, 2019, 10:41 AM IST

vij-2.jpg

ಸೊಲ್ಲಾಪುರ: ಸಬಕಾ ಸಾಥ್‌, ಸಬಕಾ ವಿಕಾಸ್‌ ಇದು ಕೇಂದ್ರ ಸರ್ಕಾರದ ಗುರಿಯಾಗಿದ್ದು, ದೇಶದಲ್ಲಿರುವ ಬಡವರು, ಕಾರ್ಮಿಕರು ಮತ್ತು ಮಧ್ಯಮ ವರ್ಗದವರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನದಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಜಿಲ್ಲೆಯ ವಿಕಾಸಕ್ಕಾಗಿ ವಿವಿಧ ಯೋಜನೆಗಳ ಭೂಮಿ ಪೂಜೆಯೊಂದಿಗೆ ಲೋಕಾರ್ಪಣೆ ಮಾಡಿದ ಬಳಿಕ ನಗರದ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಸೊಲ್ಲಾಪುರ-ತುಳಜಾಪುರ- ಉಸ್ಮಾನಾಬಾದ್‌ ರಾಷ್ಟ್ರೀಯ ಚತುಷ್ಪತ ಮಹಾಮಾರ್ಗ, ಸ್ವಚ್ಛ ಭಾರತ ಅಭಿಯಾನ ಅಂತರ್ಗತವಾಗಿ ಮಲಃನಿಸ್ಸಾರಣ ಯಂತ್ರ ಮತ್ತು ಚರಂಡಿ ನೀರಿನ ಪ್ರಕ್ರಿಯೆ ಮಾಡುವ ಮೂರು ಯಂತ್ರಗಳ ಲೋಕಾರ್ಪಣೆ, ಸೊಲ್ಲಾಪುರ ಸ್ಮಾರ್ಟ್‌ ಸಿಟಿಯಲ್ಲಿ ವಿಭಾಗಿತವಾದ ಆಧಾರದ ಮೇಲೆ ನೀರು ಸರಬರಾಜು ಹಾಗೂ ಸ್ವಚ್ಛತೆ ಯಂತ್ರಗಳ ಸುಧಾರಣೆ ವಿಷಯದ ಸಂಕಲ್ಪ, ಉಜನಿ ಅಣೆಕಟ್ಟಿನಿಂದ ಸೊಲ್ಲಾಪುರ ನಗರಕ್ಕೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಮತ್ತು ಅಮೃತ ಯೋಜನೆ ಅಂತರ್ಗತವಾಗಿ ಮಲಃ ನಿಸ್ಸಾರಣ ಯೋಜನೆ ಯಶಸ್ವಿಗಾಗಿ ಮತ್ತು ಪ್ರಧಾನಮಂತ್ರಿ ಆವಾಸ ಯೋಜನೆ ಅಂತರ್ಗತವಾಗಿ 30 ಸಾವಿರ ಮನೆಗಳ ಭೂಮಿ ಪೂಜೆಯನ್ನು ಪ್ರಧಾನಿ ಮೋದಿ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸೊಲ್ಲಾಪುರ-ತುಳಜಾಪುರ-ಉಸ್ಮಾನಾಬಾದ್‌ ರೈಲ್ವೆ ಮಾರ್ಗಕ್ಕಾಗಿ ಒಂದು ಸಾವಿರ ಕೋಟಿ ರೂ. ಮಂಜೂರು ಮಾಡಾಲಗುವುದು. ರಾಜ್ಯದಲ್ಲಿರುವ ನಾಲ್ಕು ವಿಮಾನ ನಿಲ್ದಾಣಗಳ ವಿಕಾಸ ಕಾರ್ಯ ನಡೆಯುತ್ತಿದ್ದು, ಸೊಲ್ಲಾಪುರದಲ್ಲಿಯೂ ವಿಮಾನ ಸೇವೆ ಕೂಡಲೇ ಪ್ರಾರಂಭವಾಗಲಿದೆ. ಜಿಲ್ಲೆಯ ಸಲುವಾಗಿ ಕೊಟ್ಟ ಮಾತನ್ನು ಪೂರ್ಣಗೊಳಿಸುವ ಮೂಲಕ ಗ್ರಾಮಸಡಕ್‌ ಯೋಜನೆ, ರಾಷ್ಟ್ರೀಯ ಮಹಾಮಾರ್ಗ ರಸ್ತೆ ಪ್ರಾಧಿಕರಣ ಮತ್ತು ಸೌಭಾಗ್ಯ ಯೋಜನೆ ಮಾಧ್ಯಮ ಮೂಲಕ ವಿದ್ಯುತ್‌, ನೀರು ಮತ್ತು ಉತ್ತಮ ರಸ್ತೆಗಳ ಅಭಿವೃದ್ಧಿಗಾಗಿ ಕೊಟ್ಟ ಮಾತನ್ನು ಪೂರ್ಣಗೊಳಿಸಿದ್ದೇನೆ. ಕೆಲವು ವಿಕಾಸ ಕಾರ್ಯಗಳು ಪೂರ್ಣಗೊಂಡಿದ್ದು, ಇನ್ನು ಉಳಿದ ಕಾರ್ಯಗಳು ಅಭಿವೃದ್ಧಿ ಹಂತದಲ್ಲಿವೆ ಎಂದರು.

ಸ್ಮಾರ್ಟ್‌ ಸಿಟಿ ಅಂತರ್ಗತವಾಗಿ ಎಲ್ಲ ಸೌಲಭ್ಯಗಳು ನಗರಕ್ಕೆ ದೊರೆಯಲಿವೆ ಎಂದ ಪ್ರಧಾನಿ ಮೋದಿ ಅವರು, ದೇಶದಲ್ಲಿ ಸ್ಮಾರ್ಟ್‌ ಸಿಟಿ ಅಂತರ್ಗತವಾಗಿ ಲಕ್ಷಾಂತರ ಕೋಟಿ ರೂ. ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಮುಂದಿನ ಕೆಲವು ವರ್ಷಗಳಲ್ಲಿ ಜಗತ್ತಿನಲ್ಲೇ ಅಭಿವೃದ್ಧಿಗೊಳ್ಳುತ್ತಿರುವ 10 ನಗರಗಳ ಪಟ್ಟಿಯಲ್ಲಿ ಎಲ್ಲಾ ನಗರಗಳು ನಮ್ಮ ದೇಶದ ನಗರಗಳೇ ಇರಲಿವೆ ಎಂದು ವಿಶ್ವಾಸ ವ್ಯಕ್ತಪಟಿಸಿದರು. ವಿಕಾಸವನ್ನೇ ಧ್ಯೆಯ ವಾಗಿಟ್ಟು ಕೊಂಡು ಕೇಂದ್ರ ಸರ್ಕಾರವು ಕಾರ್ಯವನ್ನು ಪ್ರಾರಂಭಿಸಿದೆ. ಸಬಕಾ ಸಾಥ್‌, ಸಬಕಾ ವಿಕಾಸ ಇದೇ ನಮ್ಮ ಕಾರ್ಯದ ಸಂಸ್ಕೃತಿ ಮತ್ತು ಪರಂಪರೆಯಾಗಿದೆ ಎಂದು ಹೇಳಿದರು.

ಸೊಲ್ಲಾಪುರದಲ್ಲಿ 30 ಸಾವಿರ ಮನೆಗಳ ನಿರ್ಮಾಣಕ್ಕಾಗಿ ಶಿಲಾನ್ಯಾಸವನ್ನು ನಾವೇ ಮಾಡಿದ್ದು. ಉದ್ಘಾಟನೆಗೂ ನಾವೇ ಬರುತ್ತೇವೆ ಎಂದಾಗ ಜನರು ಚಪ್ಪಾಳೆ ತಟ್ಟಿದರು. ಅದಕ್ಕಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಮಹಾರಾಷ್ಟ್ರ ರಾಜ್ಯಪಾಲ ಕೆ. ವಿದ್ಯಾಸಾಗರರಾವ್‌, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಕೇಂದ್ರ ಸಚಿವ ನಿತೀನ ಗಡ್ಕರಿ, ಕೇಂದ್ರ ಗೃಹನಿರ್ಮಾಣ ಸಚಿವ ಹರದೀಪಸಿಂಗ್‌ ಪುರಿ, ಕಂದಾಯ ಸಚಿವ ಚಂದ್ರಕಾಂತ ಪಾಟೀಲ, ಸಹಕಾರ ಸಚಿವ ಸುಭಾಷ ದೇಶಮುಖ, ಜಿಲ್ಲಾ ಉಸ್ತುವಾರಿ ಸಚಿವ ವಿಜಯಕುಮಾರ ದೇಶಮುಖ, ಸಂಸದ ಶರದ ಬನಸೋಡೆ, ಮೇಯರ್‌ ಶೋಭಾ ಬನಶೆಟ್ಟಿ ಮತ್ತು ಮಾಜಿ ಶಾಸಕ ನರಸಯ್ನಾ ಆಡಮ್‌ ಮಾಸ್ತರ್‌ ವೇದಿಕೆಯಲ್ಲಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ವಿಜಯಕುಮಾರ ದೇಶಮುಖ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾನಸಿ ಸೋನಟಕ್ಕೆ ನಿರೂಪಿಸಿದರು.

ಪಗಡಿ ತೊಡಿಸಿ ಸ್ವಾಗತ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮಹಾರಾಷ್ಟ್ರ ಸಿಎಂ ಫಡ್ನವೀಸ್‌ ಅವರು ಪಗಡಿ ತೊಡಿಸಿ ಖಡ್ಗ ನೀಡಿ ಸ್ವಾಗತಿಸಿದರು.

ದೇಶದ ಬಡವರು ಮತ್ತು ಕಾರ್ಮಿಕರ ಸಲುವಾಗಿ ಕೇವಲ ನಾಲ್ಕು ವರ್ಷಗಳಲ್ಲಿ ನಮ್ಮ ಸರ್ಕಾರ 14 ಲಕ್ಷ ಮನೆಗಳನ್ನು ನಿರ್ಮಿಸಿದೆ. ಇನ್ನು ಕೆಲವೇ ದಿನಗಳಲ್ಲಿ 37 ಲಕ್ಷ ಮನೆಗಳನ್ನು ನಿರ್ಮಿಸಲಿದ್ದೇವೆ. 2004 ರಿಂದ 2014 ವರೆಗೆ ಕಾಂಗ್ರೆಸ್‌ ಸರ್ಕಾರ ಕೇವಲ 8 ಲಕ್ಷ ಮನೆಗಳ ನಿರ್ಮಾಣ ಮಾಡಿತ್ತು. ಆದರೆ ನಮ್ಮ ಸರ್ಕಾರ ಕೇವಲ ನಾಲ್ಕು ವರ್ಷದಲ್ಲಿಯೇ ಸೊಲ್ಲಾಪುರದಲ್ಲಿಯೇ 30 ಸಾವಿರ ಮನೆಗಳನ್ನು ನಿರ್ಮಿಸಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.