ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟಕ್ಕೆ ಯತ್ನ: ಐವರ ಬಂಧನ
Team Udayavani, Apr 30, 2021, 11:41 AM IST
ವಿಜಯಪುರ: ಕೋವಿಡ್ ರೋಗಿಗಳಿಗೆ ತುರ್ತು, ಅಗತ್ಯವಾಗಿ ನೀಡಬೇಕಿರುವ ರೆಮಿಡಿಸಿವಿರ್ ಲಸಿಕೆಯನ್ನು ಅಕ್ರಮವಾಗಿ ಪಡೆದು ಕಾಳಸಂತೆಯಲ್ಲಿ ಮಾರಾಟಕ್ಕೆ ಮುಂದಾಗಿದ್ದ ಐವರನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಗೋಲಗುಂಬಜ ಠಾಣೆ ವ್ಯಾಪ್ತಿಯಲ್ಲಿ ರೆಮಿಡಿಸಿವಿರ್ ಲಸಿಕೆ ತನ್ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟಕ್ಕೆ ಲಭ್ಯ ಎಂದು ಶೃತಿ ಮಹೇಶ ಹಡಪದ ಎಂಬಾಕೆ ಕಾಳಸಂತೆ ದಂಧೆಯಲ್ಲಿ ತೊಡಗಿದ್ದಾಗಿ ಔಷದಿ ನಿಯಂತ್ರಣ ಇಲಾಖೆಯ ನೀಲಕಂಠ ತಾರು ರಾಠೋಡ ದೂರು ನೀಡಿದ್ದರು.
ಇದನ್ನು ಆಧರಿಸಿ ಗೋಲಗುಂಬಜ ಠಾಣೆಯ ಸಿಪಿಐ ಬಸವರಾಜ ಮೂಕರ್ತಿಹಾಳ, ಎಸೈ ಆರ್.ಎಸ್. ಲಮಾಣಿ ನೇತೃತ್ವದಲ್ಲಿ ಪೇದೆ ಫೈಜಲ್ ಶಬ್ಬೀರ ಇನಾಮದಾರ ಇವರನ್ನು ಸಮವಸ್ತ್ರ ರಹಿತರಾಗಿ ಕಳುಹಿಸಿ, ರೆಮಿಡಿಸಿವಿರ್ ಅಕ್ರಮ ಜಾಲದಲ್ಲಿದ್ದ ಐವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಒಂದು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಆರ್ಡರ್ ಮಾಡಲಾಗಿದೆ: ಸಚಿವ ಸುಧಾಕರ್
ಬಂಧಿತರನ್ನು ಆನಂದ ಸೋಹನ್ ರುಣವಾಲ್, ಆದಿತ್ಯ ಅಣ್ಣಾರಾಯ ಜೋಶಿ, ವಿಜಯ ಪ್ರಭಾಕರ ದೇಶಪಾಂಡೆ, ಮಹ್ಮದ್ ಅಬ್ದುಲ್ ಆಲಂ ಮುಲ್ಲಾ, ಶೃತಿ ಹಡಪದ ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!