ಶಾಸಕ ಬಸನಗೌಡ ಯತ್ನಾಳ್ ಗೆ ಮತ್ತೆ ಪೊಲೀಸ್ ಭದ್ರತೆ ಆರಂಭ
Team Udayavani, Feb 15, 2021, 12:33 PM IST
ವಿಜಯಪುರ: ಸಿ.ಎಂ. ಯಡಿಯೂರಪ್ಪ ಅವರನ್ನು ಟೀಕಿಸಿದ್ದೇನೆಂಬ ರಾಜಕೀಯ ಕಾರಣಕ್ಕೆ ತಮಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಹಿಂಪಡೆಯಲಾಗಿತ್ತು. ಇದೀಗ ಪೊಲೀಸ್ ಇಲಾಖೆ ಭದ್ರತೆಯನ್ನು ಮತ್ತೆ ಆರಂಭಿಸಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಿಳಿಸಿದ್ದಾರೆ.
ನಗರದಲ್ಲಿ ಈ ಕುರಿತು ಪತ್ರಕರ್ತರಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ, ನನಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಹಿಂಪಡೆಯಲಾಗಿತ್ತು.ಕಳೆದ ಎರಡು ದಿನಗಳ ಹಿಂದೆ ಪೊಲೀಸ್ ಭದ್ರತೆಯನ್ನು ಪುನಃ ಆರಂಭಿಸಿದ್ದಾರೆ ಎಂದರು.
ಇದನ್ನೂ ಓದಿ:ಭಾಷಣ ಮಾಡುತ್ತಿರುವಾಗಲೇ ಕುಸಿದುಬಿದ್ದ ಗುಜರಾತ್ ಸಿಎಂ ವಿಜಯ್ ರೂಪಾಣಿ
ಸಿಎಂ ಪುತ್ರ ಹೇಳಿದ್ದಾನೆ ಎಂದು ಯಾರದೋ ಜೀವ ಬಲಿ ಕೊಡಲು ಒಪ್ಪದ ಪೊಲೀಸ್ ಇಲಾಖೆ ಹಿಂಪಡೆದಿದ್ದ ನನಗೆ ನೀಡಿದ್ದ ಭದ್ರತೆಯನ್ನು ಪುನಾರಂಭಿಸಿದೆ. ಪೊಲೀಸ್ ಇಲಾಖೆ ಸ್ವತಂತ್ರವಾಗಿ ವಿವಿಐಪಿ ಭದ್ರತೆ ನೀಡುತ್ತದೆ. ರಾಜಕೀಯದ ಒತ್ತಡಕ್ಕೆ ಮಣಿಯದೇ ಪೊಲೀಸ್ ಭದ್ರತೆ ಪುನಃ ನೀಡಿದಕ್ಕೆ ಪೊಲೀಸ್ ಇಲಾಖೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಇದನ್ನೂ ಓದಿ:ಶ್ರೀರಾಮಮಂದಿರ ನಿರ್ಮಾಣ ಭಾವನಾತ್ಮಕ ವಿಚಾರ: ಕೇಂದ್ರ ಸಚಿವ ಸದಾನಂದ ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್