ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೇಡ


Team Udayavani, Mar 22, 2021, 7:36 PM IST

ವನಹಗ್ಹನಗ

ಇಂಡಿ: ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೇಡ. ನಾನು ಸಣ್ಣ ನೀರಾವರಿ ಮಂತ್ರಿಯಾದ ಬಳಿಕ ಈಶ್ವರಪ್ಪನವರ ಸಹಾಯ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಕೆರೆ ತುಂಬುವ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾಜೋಳ ಹೇಳಿದರು.

ರವಿವಾರ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಮುಳವಾಡ ಏತ ನೀರಾವರಿ ಹಂತ-3ರ ಅಡಿಯಲ್ಲಿ ತಿಡಗುಂದಿ ಶಾಖಾ ಕಾಲುವೆಯ ಕಿ.ಮೀ 56ರಿಂದ 66ರವರೆಗೆ ಕಾಮಗಾರಿ ಮುಖಾಂತರ ರಾಜನಾಳ, ತಡವಲಗಾ, ಹಂಜಗಿ ಕೆರೆಗಳನ್ನು ತುಂಬುವ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಜಿಲ್ಲೆಯ ಜನತೆ ಇಂದಿ ರಾ ಗಾಂಧಿ ಯವರನ್ನು ಬಂಗಾರದಲ್ಲಿ ಕೂಡಿಸಿ ತುಲಾಭಾರ ಮಾಡಿಸಿದ ಹೃದಯ ಶ್ರೀಮಂತಿಕೆಯವರು.

60 ವರ್ಷಗಳಿಂದ ಆಡಳಿತ ಮಾಡಿದ ಸರಕಾರಗಳು ಗಡಿಭಾಗ ಅಂತಲೋ ಅಥವಾ ಉದಾಸೀನತೆಯೋ, ಇಚ್ಛಾಶಕ್ತಿ ಕೊರೆತಯೋ ಈ ಭಾಗ ನಿರಂತರ ಶೋಷಣೆ, ಅನ್ಯಾಯಕ್ಕೆ ಒಳಗಾಗಿದೆ. ಕಳೆದ ಬಾರಿ ಬಿಜೆಪಿ ಸರಕಾರದ ಅವ  ಧಿಯಲ್ಲಿ ಯಡಿಯೂರಪ್ಪನವರಿಗೆ ಕೃಷ್ಣಾ ಕೊಳ್ಳದ ಯೋಜನೆಗಳಿಗೆ 10 ಸಾವಿರ ಕೋಟಿ ಕೊಡಬೇಕು ಎಂದು ಕೇಳಿಕೊಂಡಾಗ ಒಪ್ಪಿಗೆ ಸೂಚಿಸಿರುವಾಗ ಕೋವಿಡ್‌ -19 ರೋಗ ವಿಶ್ವದಲ್ಲಿ ವ್ಯಾಪಿಸಿರುವಾಗ ಯೋಜನೆ ಫಲಪ್ರದವಾಗಲಿಲ್ಲ.

ಆದರೆ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಜಯಪುರ ಜಿಲ್ಲೆಗೆ ಬ್ರಿಜೇಶ್‌ ವರದಿಯಂತೆ 130 ಟಿಎಂಸಿ ನೀರು ಬಳಕೆ ಮಾಡಲು 5 ವರ್ಷಗಳಲ್ಲಿಯೇ ಈ ಕಾರ್ಯಕ್ರಮ ರೂಪಿಸಲಾಗುವುದು. ಕೇಂದ್ರ ಸರಕಾರ ಅಧಿ ಕಾರಕ್ಕೆ ಬಂದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅನೇಕ ಜನಪರ ಕಾರ್ಯಗಳು ಮಾಡಿದ್ದಾರೆ ಎಂದರು. ಅಂದಿನ ಕಾಂಗ್ರೆಸ್‌ ಪಕ್ಷದ ಪ್ರಧಾನಿ ದಿ| ರಾಜೀವ್‌ ಗಾಂಧಿ  ಹೇಳಿರುವಂತೆ ಕೇಂದ್ರದಿಂದ 1 ರೂ. ಅನುದಾನ ನೀಡಿದರೆ ಫಲಾನುಭವಿಗಳಿಗೆ 15 ಪೈಸ್‌ ಮುಟ್ಟುತ್ತವೆ ಎಂದಿದ್ದರು. ಆದರೆ ನರೇಂದ್ರ ಮೋದಿ ಸರಕಾರ ಅನುದಾನವನ್ನು ಮಧ್ಯವರ್ತಿಗಳಿಲ್ಲದೆ ನೇರ ಬ್ಯಾಂಕ ಖಾತೆಗೆ ಜಮಾ ಮಾಡುತ್ತಿದೆ.

ಇದೇ ನರೇಂದ್ರ ಮೋದಿಯವರ ಹಾಗೂ ಯಡಿಯೂರಪ್ಪನವರ ಬದಲಾವಣೆಯ ದೂರದೃಷ್ಟಿಯ ಆಡಳಿತ ಎಂದು ಹೇಳಿದರು. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಬರಕ್ಕೆ ಇನ್ನೊಂದು ಹೆಸರೆ ವಿಜಯಪುರ ಜಿಲ್ಲೆ. ಅವಳಿ ಜಿಲ್ಲೆಯ ಜನತೆ ತಮ್ಮ ಮನೆ, ಮಠಗಳನ್ನು ಉದಾರವಾಗಿ ಧಾರೆ ಎರೆದು ಬೇರೆಯವರಿಗೆ ನೀರು ಕೊಟ್ಟಿದ್ದಾರೆ.

ಬರ ಎಂಬುದು ಬ್ರಿಟಿಷರ ಕಾಲದಿಂದಲೂ ಇದೆ. ಆ ಕಾಲದಲ್ಲಿಯೇ ವಿಜಯಪುರ ಜಿಲ್ಲೆಯಲ್ಲಿ ಬರಗಾಲ ಸಂಸ್ಥೆ ಹುಟ್ಟು ಹಾಕಿದ್ದಾರೆ. ಸ್ವಂತಂತ್ರ ಭಾರತದ ಆಡಳಿತ ಮಾಡಿದ ಸರಕಾರಗಳು ನೀರಾವರಿಗಾಗಿ ಅನೇಕ ಯೋಜನೆಗಳು ಮಾಡಿವೆ. ಆದರೆ ಇದರಿಂದ ಇನ್ನೂ ಮುಕ್ತವಾಗಿಲ್ಲ. ಈ ಭಾಗದ ಜನರು ಕೃಷಿ ಆಧಾರಿತ ಬದಕು ಸಾಗಿಸುವ ಜನರು. ಲಿಂಬೆ, ದಾಳಿಂಬೆ, ದ್ರಾಕ್ಷಿ ಬೆಳೆಯುವದರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದಿದ್ದಾರೆ ಎಂದರು. ಮೇಘರಾಜನ ಅವಕೃಪೆಯಿಂದ ಈ ಭಾಗದ ರೈತರು ಸಾಕಷ್ಟು ಕಷ್ಟದ ದಿನಗಳನ್ನು ಕಳೆದಿದ್ದಾರೆ. ಅನೇಕ ರೈತಾಪಿ ವರ್ಗ ಸಾಲದ ಸುಳಿಯಲ್ಲಿ ಸಿಲುಕಿ ಅಧೈರ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಗವಂತ ದಯೆಯಿಂದ ಈ ಭಾರಿ ಮೇಘ‌ರಾಜನ ಕೃಪೆಯಿಂದ ಮಳೆಯಾಗಿ ಭೂಮಿತಾಯಿ ಹಸಿರಾಗಿ ರೈತರು ಅಲ್ಪಸ್ವಲ್ಪ ಧೈರ್ಯದಿಂದ ಇರುವಂತಾಗಿದೆ. 2017ರಲ್ಲಿ ಅಣಚಿ, ಬುಯ್ನಾರ, ಹತ್ತಿರ ಭೀಮಾನದಿಯಿಂದ ನೀರು ಲಿಫ್ಟ್‌ ಮಾಡಿ ಕೆರೆ ತುಂಬಲಾಗಿದೆ. ಆದರೆ ಈ ಯೋಜನೆ ಕೂಡಾ ಅಷ್ಟೊಂದು ಯಶಸ್ವಿ ಕಂಡಿಲ್ಲ. ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಹಾಗೂ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ ಅವರು ಕೆರೆಗಳನ್ನು ಗ್ರಾÂವಿಟಿ ಆಧಾರದಲ್ಲಿ ತುಂಬಲು ಸಹಾಯ ಮಾಡಿದ್ದಾರೆ ಎಂದರು. ದಯಾಸಾಗರ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು.

ವೇದಿಕೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿಪಂ ಸದಸ್ಯ ಭೀಮು ಬಿರಾದಾರ, ನವೀನ ಅರಕೇರಿ, ತಾಪಂ ಅಧ್ಯಕ್ಷ ಅಣ್ಣಪ್ಪ ಬಿದರಕೋಟಿ, ಗ್ರಾಪಂ ಅಧ್ಯಕ್ಷೆ ಸುವರ್ಣಾ ಶಿವೂರ, ಉಪ ವಿಭಾಗಾ  ಧಿಕಾರಿ ರಾಹುಲ್‌ ಸಿಂಧೆ, ಕಾಸುಗೌಡ ಬಿರಾದಾರ, ಅಣ್ಣಪ್ಪ ಖೈನೂರ, ಶ್ರೀಶೈಲ ಪೂಜಾರಿ, ಸಾಂಬಾಜಿರಾವ್‌ ಮಿಸಾಳೆ, ಡಿವೈಎಸ್‌ಪಿ ಶ್ರೀಧರ ದಡ್ಡಿ, ಅಶೋಕಗೌಡ ಬಿರಾದಾರ, ಗಣಪತಿ ಬಾಣಿಕೋಲ, ಮಲ್ಲಪ್ಪ ಪತಂಗೆ, ಶಿವಾನಂದ ಬಿರಾದಾರ,ರಮೇಶ ರಾಠೊಡ, ಬಸು ಸಾಹುಕಾರ, ಇಲಿಯಾಸ್‌ ಬೋರಾಮಣಿ, ವಿದ್ಯಾಧರ ಜೇವೂರ, ಗೋವಿಂದ ರಾಠೊಡ, ಪ್ರಭಾಕರ ಎಚ್‌. ಚಿಣಿ, ಜಗದೀಶ ರಾಠೊಡ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.