ದ್ವಿತೀಯ ಪಿಯು ಫಲಿತಾಂಶ: ಸಾಧನೆಗೆ ಅಡ್ಡಿಯಾಗದ ಬಡತನ

ಕಲಾ ವಿಭಾಗದಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ಕುಮಸಗಿ ಗ್ರಾಮದ ಪ್ರೀತಿ

Team Udayavani, Jul 16, 2020, 2:26 PM IST

ಸಾಧನೆಗೆ ಅಡ್ಡಿಯಾಗದ ಬಡತನ

ಆಲಮೇಲ: ರಜೆ ದಿನಗಳಲ್ಲಿ ಕೂಲಿ ಕೆಲಸ ಮಾಡಿ ದ್ವಿತೀಯ ಪಿಯು ಕಲಾ ಪರೀಕ್ಷೆಯಲ್ಲಿ ಕುಮಸಗಿ ಗ್ರಾಮದ ಪ್ರೀತಿ ಶ್ರೀಮಂತ ನಾರಾಯಣಪುರ ಶೇ. 97.66 ಅಂಕದೊಂದಿಗೆ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದು ಮಾದರಿಯಾಗಿದ್ದಾಳೆ.

ದೇವರನಾವದಗಿಯ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಕೆ.ಜಿ. ಗುಗ್ಗರಿ ಪಪೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರೀತಿ ಕಾಲೇಜಿನ ರಜೆ ದಿನಗಳಲ್ಲಿ ತಾಯಿಯೊಂದಿಗೆ ಕೂಲಿ ಕೆಲಸ ಮಾಡಿದ್ದಾಳೆ. ಹತ್ತಿ ಬಿಡಿಸುವದು, ಮೆಣಸಿನಕಾಯಿ, ಶೇಂಗಾ ಕೀಳುವದು ಸೇರಿದಂತೆ ಆಯಾ ಸಂದರ್ಭದಲ್ಲಿ ಕೂಲಿ ಕಾರ್ಮಿಕಳಾಗಿ ಕೆಲಸ ಮಾಡಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿದ್ದಾರೆ.

ಅಂಕಗಳ ವಿವರ: ಕನ್ನಡ 97, ಹಿಂದಿ 97, ರಾಜ್ಯಶಾಸ್ತ್ರ 97, ಇತಿಹಾಸ 96, ಸಮಾಜಶಾಸ್ತ್ರ 99, ಶಿಕ್ಷಣಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾಳೆ. ಈ ಬಾಲಕಿಯದ್ದು ಕಡು ಬಡತನದ ಕುಟುಂಬ. ಒಂದುವರೆ ಎಕರೆ ಜಮೀನಿದ್ದರೂ ಕೂಡಾ ಸವಳು ಹಿಡಿದು ಇದ್ದು ಇಲ್ಲದಂತಾಗಿದೆ. ತಂದೆ ಶ್ರೀಮಂತ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತಾಯಿ ನಿತ್ಯ ಕೂಲಿ ಕೆಲಸ ಮಾಡುತ್ತ ಜೀವನ ಸಾಗಿಸಬೇಕು. ತಾಯಿಯೇ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದು ಇವರಿಗೆ ಒಟ್ಟು ಏಳು ಹೆಣ್ಣು ಮಕ್ಕಳು. ಅವರಲ್ಲಿ ಕೊನೆಯವಳು ಪ್ರೀತಿ. 6 ಹೆಣ್ಣು ಮಕ್ಕಳು ಗಂಡನ ಮನೆಯಲ್ಲಿದ್ದಾರೆ.

ತಂದೆ 4ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆದಿದ್ದು ತಾಯಿ ಇಂದಿರಾಬಾಯಿ ಅನಕ್ಷರಸ್ಥೆ, ಆದರೂ ಮಗಳು ಉತ್ತಮವಾಗಿ ಕಲಿಯುತ್ತಿದ್ದಾಳೆಂದು ಕೂಲಿ ಮಾಡಿ
ಕಲಿಸಿದ್ದಾರೆ. ಆದರೆ ಸದ್ಯ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲದ ಕಾರಣ ವಿದ್ಯಾಭ್ಯಾಸ ಮುಂದುವರಿಸುವುದು ಬೇಡ ಎನ್ನುತ್ತಿದ್ದಾರೆ ಆಕೆ ತಾಯಿ. ಪ್ರೀತಿಯ ಶಿಕ್ಷಣಕ್ಕೆ
ನೆರವಾಗಬಯಸುವವರು (ಮೊ.7348990705) ಸಂಪರ್ಕಿಸಬಹುದು.

ದಿನಾಲು 10 ಗಂಟೆ ಕಾಲ ಒದುತ್ತಿದ್ದೆ, ಮುಂದೆ ಡಿಗ್ರಿ ಮಾಡಿ ಐಎಎಸ್‌ ಮಾಡಬೇಕೆಂಬ ಗುರಿ ಇದೆ. ನನಗೆ ಕಾಲೇಜಿನಲ್ಲಿ ಪ್ರಾಚಾರ್ಯರು, ಉಪನ್ಯಾಸಕರು
ವಿದ್ಯಾಭ್ಯಾಸಕ್ಕೆ ತುಂಬ ಸಹಕರಿಸಿದ್ದಾರೆ. 
ಪ್ರೀತಿ ನಾರಾಯಣಕರ

ನನ್ನ ಪತಿ ಅನಾರೋಗ್ಯದ ಮಧ್ಯೆ 6 ಹೆಣ್ಣು ಮಕ್ಕಳ ಮದುವೆ ಮಾಡಿ ಆರ್ಥಿಕ ಸಂಕಷ್ಟದಲ್ಲಿವೆ. ಅವಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸಲು ಕಷ್ಟವಾಗುತ್ತದೆ.
ಹೀಗಾಗಿ ಓದು ನಿಲ್ಲಿಸುವಂತೆ ಹೇಳಿದ್ದೇನೆ.
ಇಂದಿರಾಬಾಯಿ ನಾರಾಯಣಕರ

ಅವಧೂತ ಬಂಡಗಾರ

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.