ಲಂಬಾಣಿ ತಾಂಡಾ ಜನರಿಗೆ ವಿಶೇಷ ಪ್ಯಾಕೇಜ್ ಗೆ ಎಂಎಲ್ ಸಿ ಪ್ರಕಾಶ್ ರಾಠೋಡ್ ಆಗ್ರಹ


Team Udayavani, May 29, 2021, 4:33 PM IST

ಲಂಬಾಣಿ ತಾಂಡಾ ಜನರಿಗೆ ವಿಶೇಷ ಪ್ಯಾಕೇಜ್ ಗೆ ಶಾಸಕ ಪ್ರಕಾಶ್ ರಾಠೋಡ್ ಆಗ್ರಹ

ವಿಜಯಪುರ: ಜಿಲ್ಲೆಯಲ್ಲೂ ಹೆಚ್ವಿನ ಪ್ರಮಾಣದಲ್ಲಿ ಕೋವಿಡ್ ಸೋಂಕು ಹಬ್ಬಿದ್ದು, ದುಡಿಮೆ ಅರಸಿ ಗುಳೇ ಹೋಗಿದ್ದ ಲಂಬಾಣಿ ತಾಂಡಾದ ಜನರು ಲಾಕಡೌನ್ ಸಂದಭ೯ದಲ್ಲಿ ತಾಂಡಾಗಳಿಗೆ ಮರಳಿದ್ದಾರೆ. ಉದ್ಯೋಗ ಇಲ್ಲದೇ ಮನೆಯಲ್ಲಿರುವ ಲಂಬಾಣಿಗಳಿಗೆ ಜೀವನ‌ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮೇಲ್ಮನೆ ಸದಸ್ಯ ಪ್ರಕಾಶ ರಾಠೋಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

ಶನಿವಾರ ವಿಜಯಪುರ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಸಮಸ್ಯೆ ಕುರಿತು ನಡೆಸಿದ ವಿಡಿಯೋ ಸಂವಾದದಲ್ಲಿ ಈ ಬೇಡಿಕೆ ಮಂಡಿಸಿರುವ ಪ್ರಕಾಶ ರಾಠೋಡ, ಮಕ್ಕಳಿಗೂ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಂಡು ಬರುತ್ತಿದೆ. ವಿಜಯಪುರ ಜಿಲ್ಲೆಯ ಉತ್ತನಾಳ ತಾಂಡಾದಲ್ಲಿ 52 ಜನರಿಗೆ ಕೋವಿಡ್ ಸೋಂಕು ತಗುಲಿದ್ದು,15-20 ವಷ೯ದ 15 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಹೀಗಾಗಿ ಸರ್ಕಾರ ವಿಶೇಷ ಗಮನಕೊಡಬೇಕಿದೆ ಎಂದು ಅಗ್ರಹಿಸಿದರು.

ಇದಲ್ಲದೇ ಇಂಥ ಹಲವು ತಾಂಡಾಗಳಲ್ಲಿ ಕೋವಿಡ್ ಸೋಂಕು ಹಬ್ಬಿರುವುದರಿಂದ ವಿಶೇಷವಾಗಿ ಗಮನ ಹರಿಸಬೇಕಿದೆ‌ ಅಲ್ಲದೇ ಸೋಂಕು ಇನ್ನೂ ಹರಡುವಿಕೆಯನ್ನು ತಡೆಯಲು ಹಾಗೂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದರು.

ಸರ್ಕಾರ ಟಾಸ್ಕ್ ಫೋರ್ಸ್ ಸಮಿತಿ ಮಾಡಿದ್ದು, ಸಮಿತಿಯವರು ಹಳ್ಳಿಗಳಲ್ಲಿ ಹೋಗಿ ‌ಕೋವಿಡ್ ಸೊಂಕಿತರನ್ನು ಪತ್ತೆಹಚ್ಚಿದ್ದಾರೆ.  ವಿಜಯಪುರ ಜಿಲ್ಲೆಯಲ್ಲಿ 3000 ಜನರಿಗೆ ಸೊಂಕು ಹಬ್ಬಿದ್ದನ್ನು ಪತ್ತೆ ಹಚ್ಚಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಪತ್ತೆಗಾಗಿ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:‘ನಾನು ಬರ್ತೇನೆ ನಿಮ್ಮನೆಗೆ…’ ಹಸುಗಳೊಂದಿಗೆ ಮನೆಗೆ ಬಂದ ಜಿಂಕೆ ಮರಿ

ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು ಪ್ರದೇಶಾಭಿವೃದ್ದಿ ಅನುದಾನವನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಕೋವಿಡ್ ಕಾರ್ಯಕ್ಕೆ ಬಳಸಲು ಮನವಿ ಮಾಡಿದ್ದೇವೆ. ಆದರೆ ಸರ್ಕಾರ ಇತ್ತ ಗಮನ ಹರಿಸಿಲ್ಲ. ಇದೀಗ ಉಭಯ ಸದನಗಳ ಶಾಸಕರಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನೀಡುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಿ, ಅದನ್ನು ಉಪಯೋಗಿಸಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಕೋವಿಡ್ ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ  ಬ್ಲ್ಯಾಕ್ ಫಂಗಸ್ ಸಂಕ್ರಾಮಿಕ ರೋಗ ಕನಾ೯ಟಕದಲ್ಲಿ ವ್ಯಾಪಕವಾಗಿದ್ದು, ವಿಜಯಪುರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಸದರಿ ರೋಗಿಗಳಿಗೆ ತುರ್ತು ಅಗತ್ಯವಾದ ಎಂಪೋತೆರಿಸಿನ್ ಇಂಜೆಕ್ಷನ್ ಬಹಳ ಕೊರತೆ ಇದೆ. ಆದರೆ ಇದರ ಬದಲಾಗಿ ಪೊಸಕೋನಾಜೋಲ್ ಅಥವಾ ಇಸವುಕೋವಾಜೋಲ್ ಇಂಜೆಕ್ಷನ್ ನೀಡಲು ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಾಸಕ ಪ್ರಕಾಶ ರಾಠೋಡ ಮನವಿ ಮಾಡಿದರು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.