ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾಡಳಿತ ಸನ್ನದ್ಧ


Team Udayavani, Jul 4, 2020, 8:58 AM IST

ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾಡಳಿತ ಸನ್ನದ್ಧ

ಮುದ್ದೇಬಿಹಾಳ: ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಯಾವುದೇ ರೀತಿ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ತಾಲೂಕಾಡಳಿತಗಳು ಪೂರಕ ವಾತಾವರಣ ಸೃಷ್ಟಿಸಿಕೊಂಡು ಪೂರ್ವತಯಾರಿಯೊಂದಿಗೆ ಸನ್ನದ್ಧವಾಗಿರಬೇಕು ಎಂದು ವಿಜಯಪುರ ಕಂದಾಯ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದ್ದಾರೆ.

ಇಲ್ಲಿನ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮುದ್ದೇಬಿಹಾಳ, ತಾಳಿಕೋಟೆ ತಾಲೂಕುಗಳ ವಿವಿಧ ಇಲಾಖೆ ಅಧಿಕಾರಿಗಳ ಪ್ರಕೃತಿ ವಿಕೋಪ ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಯಿಂದ, ಸಿಡಿಲಿನಿಂದ, ಪ್ರವಾಹದಿಂದ ಹೀಗೆ ಯಾವುದೇ ರೀತಿಯಲ್ಲಾದರೂ ಸಂಭವಿಸಬಹುದಾದ ಪ್ರಕೃತಿ ವಿಕೋಪ ನಿರ್ವಹಿಸುವ ಕುರಿತು ಯೋಜನೆ ಸಿದ್ಧಪಡಿಸಿಟ್ಟುಕೊಳ್ಳಬೇಕು. ಈಗಾಗಲೇ ಮುಂಗಾರು ಮಳೆ ಎದುರಿಸಲು ಜಿಲ್ಲಾಡಳಿತ ಸನ್ನದ್ದ ಸ್ಥಿತಿಯಲ್ಲಿದೆ. ವಿಕೋಪ ಎದುರಿಸಲು ತಕ್ಷಣ ಬೇರೆ ಬೇರೆ ತಂಡಗಳನ್ನು ರಚಿಸಬೇಕು. ಪ್ರತಿಯೊಬ್ಬ ಹಿರಿಯ ಅಧಿಕಾರಿ, ಸ್ಥಳೀಯ ಅಧಿಕಾರಿಗಳ ಮೊಬೈಲ್‌, ಕಚೇರಿಗಳ ದೂರವಾಣಿ, ಸಹಾಯವಾಣಿ, ಕಂಟ್ರೋಲ್‌ ರೂಂ ನಂಬರ್‌ಗಳನ್ನು ಆಯಾ ಕಚೇರಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಬೇಕು ಎಂದು ಹೇಳಿದರು.

ಜನ, ಜಾನುವಾರುಗಳ ಪ್ರಾಣಹಾನಿ, ಬೆಳೆ ಹಾನಿ, ಜಮೀನು ಹಾನಿ, ಮನೆಗಳ ಹಾನಿ, ವಿದ್ಯುತ್‌ ಕಂಬಗಳಿಗೆ ತೊಂದರೆ, ಮನೆಗಳಿಗೆ ನೀರು ನುಗ್ಗುವುದು, ಗ್ರಾಮೀಣ, ಪಟ್ಟಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವುದು, ಒಡ್ಡುಗಳು ಒಡೆದು ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗುವುದು, ಸಿಡಿಲಿನಿಂದಾಗುವ ಹಾನಿ ಹೀಗೆ ಹತ್ತು ಹಲವು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಪೂರ್ವತಯಾರಿ ಅಗತ್ಯವಾಗಿದ್ದು ಈ ಬಗ್ಗೆ ಎಲ್ಲರೂ ಜಾಗ್ರತೆ ವಹಿಸಬೇಕು ಎಂದು ಸಲಹೆ ನೀಡಿದರು.

ದಿನನಿತ್ಯವೂ ಮಳೆಮಾಪನ ಕೇಂದ್ರದ ವರದಿಯನ್ನು ಜಿಲ್ಲಾ ಕೇಂದ್ರಕ್ಕೆ ಕಳಿಸಿಕೊಡಬೇಕು. ಮುಂಚಿತವಾಗಿಯೇ ರೈತರ ಜಮೀನುಗಳಲ್ಲಿ ಬೆಳೆದ ಬೆಳೆ ಮಾಹಿತಿ ಸಂಗ್ರಹಿಸಿ ಹಾನಿಗೀಡಾದಲ್ಲಿ ಸೂಕ್ತ ಪರಿಹಾರಕ್ಕೆ ಶಿಫಾರಸು ಮಾಡಬೇಕು. ಜಾನುವಾರುಗಳಿಗೆ ತೊಂದರೆ ಆದಲ್ಲಿ, ಮೇವಿನ ಕೊರತೆ ಕಂಡು ಬಂದಲ್ಲಿ ತಕ್ಷಣ ನಿವಾರಿಸುವಂತಿರಬೇಕು. ಪ್ರವಾಹ ಸಂದರ್ಭ ಬಳಕೆಗಾಗಿ ನುರಿತ ಈಜುಗಾರರು, ಮೀನುಗಾರರ ಮೊಬೈಲ್‌ ಸಂಖ್ಯೆಗಳನ್ನು ಸಂಗ್ರಹಿಸಿಟ್ಟುಕೊಂಡಿರಬೇಕು. ಅಗತ್ಯ ಪ್ರಮಾಣದಲ್ಲಿ ಬೋಟ್‌ ಸಿದ್ಧತೆಯಲ್ಲಿರಬೇಕು. ಪ್ರವಾಹದಿಂದ ಗ್ರಾಮಗಳ ಜನರ ಸ್ಥಳಾಂತರ ಎದುರಾದಾಗ ಸ್ಥಳೀಯ ಶಾಲೆ, ಸಮುದಾಯ ಭವನಗಳನ್ನು ಸುಸಜ್ಜಿತವಾಗಿರಿಸಬೇಕು. ಇವರಿಗೆಲ್ಲ ಊಟ ತಯಾರಿಸಲು ಅಂಗನವಾಡಿಯವರನ್ನು, ಅಡುಗೆ ಸಿಬ್ಬಂದಿಯನ್ನು, ಆಹಾರ ಪದಾರ್ಥಗಳನ್ನು ಸಿದ್ಧತೆಯಲ್ಲಿಟ್ಟಿರಬೇಕು ಎಂದು ಸೂಚಿಸಿದರು.

ಮುದ್ದೇಬಿಹಾಳ ತಾಲೂಕಿಗೆ ನೋಡಲ್‌ ಅಧಿಕಾರಿಯನ್ನಾಗಿ ಜಿಲ್ಲಾ ಬಿಸಿಎಂ ಇಲಾಖೆ ಅಧಿಕಾರಿ ಗಂಗಾಧರ ದೊಡಮನಿ (9449064799), ತಾಳಿಕೋಟೆ ತಾಲೂಕಿಗೆ ಜಿಲ್ಲಾ ಸಹಕಾರ ಇಲಾಖೆ ಉಪ ನೋಂದಣಾಧಿಕಾರಿ ಪಿ.ಬಿ. ಕಾಳಗಿ (9448541488) ಅವರನ್ನು ನೇಮಿಸಲಾಗಿದ್ದು ಅಧಿಕಾರಿಗಳು, ಸಾರ್ವಜನಿಕರು ಇವರ ಸಂಪರ್ಕದಲ್ಲಿದ್ದು ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು ಎಂದು ತಿಳಿಸಿದರು.

ತಹಶೀಲ್ದಾರ್‌ಗಳಾದ ಜಿ.ಎಸ್‌. ಮಳಗಿ, ಜಿ.ಎಸ್‌. ಹಿರೇಮಠ, ಅನಿಲಕುಮಾರ ಢವಳಗಿ, ತಾಪಂ ಇಒ ಶಶಿಕಾಂತ ಶಿವಪುರೆ, ಎರಡೂ ತಾಲೂಕುಗಳ ವಿವಿಧ ಇಲಾಖೆ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.