ಪ್ರಿಯಾಂಕ ಖರ್ಗೆ ಮಂಚದ ಹೇಳಿಕೆಗೆ ಸಂಸದ ಜಿಗಜಿಣಗಿ ಕಿಡಿ
ಅವರ ಅಪ್ಪನ ಕಾಲದಲ್ಲೇನೂ ಭ್ರಷ್ಟಾಚಾರ ನಡೆಯಲೇ ಇಲ್ಲವೇ ?
Team Udayavani, Aug 12, 2022, 6:13 PM IST
ವಿಜಯಪುರ: ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ ಖರ್ಗೆ ಉದ್ಯೋಗಕ್ಕಾಗಿ ಯುವತಿರು ಮಂಚಕ್ಕೆ ಏರಬೇಕಿದೆ ಎಂದಿರುವ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದೆ. ಅವರ ಅಪ್ಪನ ಕಾಲದಲ್ಲೇನೂ ಭ್ರಷ್ಟಾಚಾರ ನಡೆಯಲೇ ಇಲ್ಲವೇ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಕಿಡಿ ಕಾರಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಿಯಾಂಕ ಮೆದುಳು ಹಾಗೂ ನಾಲಿಗೆಗೆ ಸಂಪರ್ಕ ಇಲ್ಲದ ವ್ಯಕ್ತಿಯಂತೆ ಮಾತನಾಡಿದ್ದಾರೆ ಎಂದರು.
ನಾನು ರಾಜ್ಯ ರಾಜಕಾರಣಕ್ಕೆ ಬರಬೇಕೋ, ಕೇಂದ್ರದಲ್ಲಿ ಇರಬೇಕೋ, ಮನೆಯಲ್ಲಿ ಇರಬೇಕೋ ಎಂಬುದನ್ನು ಪಕ್ಷ ನಿರ್ಧರಿಸುತ್ತದೆ ಎಂದು ಪುನರುಚ್ಚರಿಸಿ, ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಕುರಿತು ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ನನಗೆ ಈ ವರೆಗೆ ಎಲ್ಲವನ್ನೂ ನೀಡಿದೆ. ದಲಿತ ಮುಖ್ಯಮಂತ್ರಿ ವಿಷಯವೂ ಪಕ್ಷದ ತೀರ್ಮಾನವೇ ಆಗಿರಲಿದೆ. ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ತೀರ್ಮಾನ. ಮಾಜಿ ಮುಖ್ಯಮಂತ್ರಿ ಜಗದೀಶ ಶಟ್ಟರ್ ದೆಹಲಿ ನಾಯಕರ ಭೇಟಿ ವಿಷಯ ದೆಹಲಿಯಲ್ಲೇ ಇದ್ದರೂ ನನಗೇನೂ ತಿಳಿಯದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ